‘ವಿದ್ಯಾಗಮʼ ಯೋಜನೆಯು ಗುರುಕುಲ ಮಾದರಿ ಶಾಲೆಗಳನ್ನು ನೆನಪಿಸುತ್ತದೆ: ಸುರೇಶ್ ಕುಮಾರ್


Team Udayavani, Aug 7, 2020, 6:25 PM IST

‘ವಿದ್ಯಾಗಮʼ ಯೋಜನೆಯು ಗುರುಕುಲ ಮಾದರಿ ಶಾಲೆಗಳನ್ನು ನೆನಪಿಸುತ್ತದೆ: ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಕಾಲದಲ್ಲಿ ಎಲ್ಲ ಸ್ತರದ ವಿದ್ಯಾರ್ಥಿಗಳನ್ನು ಪಾಠದತ್ತ ಸೆಳೆಯಲು ಜಾರಿಗೆ ತಂದಿರುವ ‘ವಿದ್ಯಾಗಮʼ ಯೋಜನೆಯು ಗುರುಕುಲ ಮಾದರಿ ಶಾಲೆಗಳನ್ನು ನೆನಪಿಸುತ್ತದೆ. ಈ ಮೂಲಕ ನಮ್ಮ ಸಂಸ್ಕೃತಿಯ ಪುನರುತ್ಥಾನವಾದಂತಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಶುಕ್ರವಾರ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿಯಲ್ಲಿ ವಿದ್ಯಾಗಮ ಯೋಜನೆ ಕುರಿತಂತೆ ರಾಜ್ಯದ ಎಲ್ಲ ಡಿಡಿಪಿಐ, ಡಯಟ್ ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಾರ್ಗದರ್ಶನ ನೀಡಿ, ಯೋಜನೆಯ ರೂಪುರೇಷೆಗಳನ್ನು ವಿವರಿಸಿ ಈ ಯೋಜನೆಯ ಯಶಸ್ಸಿಗೆ ಪ್ರತಿಯೊಬ್ಬರೂ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು ಎಂದರು.

ಶಾಲೆಗಳು ಆರಂಭವಾಗಬೇಕೆಂಬ ಒತ್ತಡ ಎಲ್ಲೆಡೆಯಿಂದ ಕೇಳಿಬರುತ್ತಿದೆ. ಆದರೆ ನಾವು ಕೇಂದ್ರ ಸರ್ಕಾರದ ಮಾರ್ಗಸೂಚಿ ಕಾಯುತ್ತಿದ್ದೇವೆ. ಈ ಮಧ್ಯೆ ನಮ್ಮ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯಿಂದ ಮಕ್ಕಳನ್ನು ತಲುಪುವ ಪ್ರಯತ್ನ ಮಾಡಿದ್ದು, ಇದು ಇಡೀ ದೇಶದಲ್ಲಿಯೇ ಪ್ರಥಮವಾಗಿದೆ. ನಮ್ಮ ನಾಡಿನ ಯಾವುದೇ ಕೊನೆಯ ವಿದ್ಯಾರ್ಥಿಯೂ ಕಲಿಕೆಯ ವಿಳಂಬದ ತೊಂದರೆಗೆ ಸಿಕ್ಕಿಕೊಳ್ಳಬಾರದೆಂಬುದು ವಿದ್ಯಾಗಮದ ಪ್ರಮುಖ ಉದ್ದೇಶವಾಗಿದೆ ಎಂದರು.

ಕೋವಿಡ್ ಪ್ರಸರಣದ ಈ ಸಮಯದಲ್ಲಿ ಹೆಚ್ಚು ದಿನ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ಎಲ್ಲ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ ದೊರೆಯುವಂತೆ ಮಾಡುವುದು ಮತ್ತು ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸುವುದು ವಿದ್ಯಾಗಮ ಯೋಜನೆಯ ಉದ್ದೇಶವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಪ್ರಮುಖವಾಗಿ ಸಾಮಾಜಿಕ ಅಂತರ, ಫೇಸ್ ಮಾಸ್ಕ್ ಮತ್ತು ಕೈ ಸ್ವಚ್ಛತೆ ಸೇರಿದಂತೆ ಕೋವಿಡ್ ಸಂದರ್ಭದ ನಿಯಮಗಳನ್ನು ಸರಿಯಾಗಿ ಪಾಲಿಸುವುದು ಎಲ್ಲರ ಕರ್ತವ್ಯ. ಈ ಕರ್ತವ್ಯಗಳ ಮೂಲಕ ಶಾಲೆ ಮುಂದೆ ಆರಂಭವಾಗುವ ತನಕ ವಿದ್ಯಾಗಮ ಯೋಜನೆಯ ಯಶಸ್ಸಿನಲ್ಲಿ ತೊಡಗಿಸಿಕೊಂಡು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಸಚಿವರು, ಕಲಿಕೆ ವಿಳಂಬವಾದರೆ ಮಕ್ಕಳು ಶಾಲೆಯಿಂದ ಡ್ರಾಪ್ ಔಟ್, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದಕ್ಕೆ ನಾವು ಅವಕಾಶ ಕೊಡಬಾರದೆಂಬ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ವಿದ್ಯಾಗಮ ಯೋಜನೆ ನಮ್ಮ ಗುರುಕುಲ ಮಾದರಿಯನ್ನು ನೆನಪಿಸುವಂತಾಗಬೇಕು ಎಂದರು.

ಫೋನ್ ನಲ್ಲಿ, ಟಿವಿಗಳಲ್ಲಿ, ಪಡಸಾಲೆಗಳಲ್ಲಿ, ಶಾಲಾವರಣಗಳಲ್ಲಿ, ಮರಗಳ ನೆರಳಿನಲ್ಲಿ ನಡೆಸಬಹುದಾದ ಈ ತರಗತಿಗಳಿಗೆ ಅನುಕೂಲವಾಗುವಂತೆ ಶಿಕ್ಷಕರು ಕಲಿಕಾ ಸಾಮಗ್ರಿಗಳನ್ನು ರೂಪಿಸಿಕೊಳ್ಳಬೇಕು. ನಮ್ಮ ಇಲಾಖೆಗಾಗಿಯೇ ಪ್ರತ್ಯೇಕ ಎರಡು ದೂರದರ್ಶನ ಚಾನೆಲ್ ಗಳನ್ನು ಕೇಳಿದ್ದು, ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರೆದಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.

ಯಾವುದೇ ಪ್ರಮಾಣ ಪತ್ರ ಕೇಳದೆ ದಾಖಲಾತಿ: ಶಾಲೆಗೆ ಈ ವೇಳೆಗೆ ರಾಜ್ಯದಲ್ಲಿ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗಬೇಕಿತ್ತು. ಆದರೆ ಕೋವಿಡ್ ನಿಂದಾಗಿ ಅದು ಸಾಧ್ಯವಾಗಿಲ್ಲ. ಹಾಗಾಗಿ ಯಾವುದೇ ದಾಖಲೆಗಳನ್ನು ಅಪೇಕ್ಷಿಸದೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಬೇಕು. ಯಾವ ದಿನವೇ ಆಗಲಿ ಶಾಲೆಗೆ ದಾಖಲು ಅಪೇಕ್ಷಿಸಿ ಬರುವರನ್ನೂ ಸಹ ದಾಖಲಿಸಿಕೊಳ್ಳಬೇಕು. ಪೋಷಕರು ಹೇಳುವ ಮಾತಿನ ಮೂಲಕವೇ ಮಕ್ಕಳನ್ನು ದಾಖಲಿಸಿಕೊಳ್ಳಬೇಕು. ಆ. 10 ರಿಂದ 15 ರವರೆಗೆ ಮಕ್ಕಳ ಶಾಲಾ ದಾಖಲಾತಿ ಅಂದೋಲನದ ಮಾದರಿಯಲ್ಲಿ ನಡೆಯಬೇಕು. ಆ ನಂತರವೂ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಪ್ರಕ್ರಿಯೆ ಮುಂದುವರೆಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದರು.

ಈಗಾಗಲೇ ಶಾಲಾ ಮಕ್ಕಳಿಗೆ ಪುಸ್ತಕ, ನೋಟ್ ಬುಕ್ ಗಳನ್ನು ಒದಗಿಸಲಾಗಿದೆ. ಇನ್ನೂ ಅಗತ್ಯವಿರುವವರು ತಮ್ಮ ವ್ಯಾಪ್ತಿಯ ಬಿಇಒಗಳನ್ನು ಸಂಪರ್ಕಿಸಿ ಪುಸ್ತಕಗಳನ್ನು ಪಡೆಯಬಹುದಾಗಿದೆ ಎಂದು ಅವರು ಶಿಕ್ಷಕರಿಗೆ ಸಲಹೆ ನೀಡಿದರು. ಪುಸ್ತಕ ತಲುಪದ ಕಡೆಗಳಿಗೆ ತಕ್ಷಣವೇ ಮಕ್ಕಳ ಮನೆಗೆ ಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಬಿಇಒಗಳಿಗೆ ಸಚಿವರು ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ.ಜಗದೀಶ್ ವಿದ್ಯಾಗಮ ಯೋಜನೆಯ ಯಾವ ರೀತಿಯಲ್ಲಿ ಕೈಗೊಳ್ಳಬೇಕು, ಅದಕ್ಕಾಗಿ ಅನುಸರಿಸಬೇಕಾದ ನಿಯಮಗಳು, ಸಿದ್ಧತೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನು ನಿವೇದಿಸಿ ಪರಿಹಾರಗಳನ್ನು ಕಂಡುಕೊಂಡರು.

ಎಸ್ಎಸ್ಎ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.