ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ; ಅಂಥ ಸಂಭವವೂ ಇಲ್ಲ- ಉಮೇಶ್ ಕತ್ತಿ
Team Udayavani, Apr 24, 2022, 7:21 PM IST
ವಿಜಯಪುರ: ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಅಂಥ ಸಂಭವವೂ ಇಲ್ಲ. ಹೀಗಾಗಿ ಅವರು ಏನೇನೋ ಮಾತನಾಡುತ್ತಾರೆ ಎಂದು ಅರಣ್ಯ ಖಾತೆ ಹೊಂದಿರುವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಹೇಳಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬುಲ್ಡೋಜರ್ ವಿಷಯವಾಗಿ ಸಿದ್ಧರಾಮ್ಯಯ ಅವರು ಮಾತನಾಡಿರುವುದಕ್ಕೆ ಹೆಚ್ಚಿನ ಮಹತ್ವ ನೀಡಬೇಡಿ ಎಂದ ಸಚಿವ ಉಮೇಶ್ ಕತ್ತಿ, ಅಕ್ಷಯ ತೃತೀಯ ಹಬ್ಬದ ಸಂದರ್ಭದಲ್ಲಿ ಹಿಂದೂಗಳು ಮುಸ್ಲಿಂ ಅಂಗಡಿಗಳಲ್ಲಿ ಚಿನ್ನ ಖರೀದಿಸಬೇಡಿ ಎಂದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ನೀಡಿರುವ ಹೇಳಿಕೆಗೂ ಮಹತ್ವ ಕೊಡುವುದು ಬೇಡ ಎಂದರು.
ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ಜಗಳ ಹಚ್ಚುವ ಇಂಥ ಹೇಳಿಕೆಗೆ ಯಾರೂ ಮಹತ್ವ ಕೊಡಬೇಡಿ. ಅಕ್ಷಯ ತೃತೀಯ ದಿನ ಚಿನ್ನದ ವ್ಯಾಆರದ ಹೆಸರಿನಲ್ಲಿ ಹಿಂದೂ-ಮುಸ್ಲೀಂ ಸಮುದಾಯಗಳ ಜಗಳ ಹಚ್ಚುವ ಕೆಲಸ ನಡೆಯುತ್ತಿದೆ. ಇಂಥ ವಿಷಯಗಳಿಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ ಎಂದರು.
ರಾಜ್ಯದ ಮಂತ್ರಿಮಂಡಳ ವಿಸ್ತರಣೆ ಆಗುವುದ ಖಚಿತ. ಆಗ ವಿಜಯಪುರ ಜಿಲ್ಲೆಗೆ ಆದ್ಯತೆ ಸಿಗುವುದು ಖಚಿತ ಎಂದು ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ