ವರಿಷ್ಠರ ಒಪ್ಪಿಗೆ ನಿರೀಕ್ಷೆಯಲ್ಲಿ ಸಚಿವಾಕಾಂಕ್ಷಿಗಳು
Team Udayavani, Jan 28, 2020, 3:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರಿಗೆ ಸಂಭಾವ್ಯರ ಪಟ್ಟಿ ರವಾನಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಂಭವವಿದೆ. ಈ ವೇಳೆ ಒಪ್ಪಿಗೆ ದೊರೆತರೆ ಶುಕ್ರವಾರ ಸಂಪುಟ ವಿಸ್ತರಣೆಯಾಗಲಿದೆ. ಒಪ್ಪಿಗೆ ಸಿಗದಿದ್ದರೆ ಫೆ. 10ರ ಬಳಿಕವೇ ಸಂಪುಟ ವಿಸ್ತರಣೆಯಾಗಬಹುದು.
ಇತ್ತೀಚೆಗೆ ಭೇಟಿಯಾಗಿದ್ದ ಬಿ.ಎಲ್.ಸಂತೋಷ್ ಅವರಿಗೆ ಯಡಿಯೂರಪ್ಪ ಅವರು ಸಂಭವನೀಯ ಸಚಿವರ ಪಟ್ಟಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ವರಿಷ್ಠರು ಅನುಮೋದನೆ ನೀಡಬೇಕಿದೆ. ಆ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ವರಿಷ್ಠರತ್ತ ನೆಟ್ಟಿದೆ. ಬುಧ ವಾರದವರೆಗೆ ಯಡಿಯೂರಪ್ಪ ಅವರ ಕಾರ್ಯ ಕ್ರಮಗಳು ನಿಗದಿಯಾಗಿವೆ. ಸದ್ಯದ ವೇಳಾಪಟ್ಟಿ ಪ್ರಕಾರ ಗುರು ವಾರ ಬೆಳಗ್ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೆಲಿಕಾಪ್ಟರ್ನಲ್ಲಿ ಹಿಂದಿರುಗಲಿದ್ದಾರೆ.
ಬಳಿಕ ದೆಹಲಿಗೆ ತೆರಳಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಅಭಿನಂದಿಸುವ ಚಿಂತನೆಯಲ್ಲಿದ್ದಾರೆ. ಮೂಲ ಬಿಜೆಪಿ ಹಿರಿಯ ಶಾಸಕರು ಸಹ ಸಚಿವ ಸ್ಥಾನಕ್ಕೆ ತೀವ್ರ ಒತ್ತಡ ಹೇರುತ್ತಿರುವುದರಿಂದ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದಂತಾಗಿದ್ದು, ವರಿಷ್ಠ ರೊಂದಿಗೆ ಚರ್ಚಿಸಿಯೇ ಅಂತಿಮಗೊಳಿಸಲಿದ್ದಾರೆ. ಹಾಗಾಗಿ ಸಚಿವಾಕಾಂಕ್ಷಿಗಳು ವರಿಷ್ಠರ ನಡೆಯತ್ತ ದೃಷ್ಟಿ ನೆಟ್ಟಿದ್ದಾರೆ. ಶ್ರೀರಾಮುಲು- ಸ್ವಾಮೀಜಿ ಭೇಟಿ: ಸಚಿವ ಬಿ.ಶ್ರೀರಾಮುಲು ಅವರನ್ನು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೋಮವಾರ ಭೇಟಿಯಾಗಿ ಚರ್ಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ