ರಾಜ್ಯದ ಜನ ಕಾಂಗ್ರೆಸ್ ನ್ನು ಸಂಪೂರ್ಣವಾಗಿ ತಿರಸ್ಕರಿಸುವ ದಿನ ದೂರವಿಲ್ಲ: ಆರ್.ಅಶೋಕ್
Team Udayavani, Jun 14, 2022, 6:53 PM IST
ಬೆಂಗಳೂರು: ಸೋನಿಯಾ ಹಾಗೂ ಕುಟುಂಬದ ಅಕ್ರಮ ಆಸ್ತಿ ರಕ್ಷಿಸಲು ಕಾಂಗ್ರೆಸ್ ಧರಣಿಯ ನಾಟಕವಾಡುತ್ತದೆ. ಕಾಂಗ್ರೆಸ್ ಪಕ್ಷದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ಸೇರಿ ಕಟ್ಟಿದ ಸಂಸ್ಥೆ ನ್ಯಾಷನಲ್ ಹೆರಾಲ್ಡ್. ನಂತರ ಬಂದ ಸರ್ಕಾರಗಳು ಪತ್ರಿಕೆಯ ಅಭಿವೃದ್ಧಿಗಾಗಿ ಸುಮಾರು 3 ಸಾವಿರ ಕೋಟಿಗೂ ಅಧಿಕ ಭೂಮಿ ನೀಡಿದ್ದಾರೆ. ಅದನ್ನು ಕಬಳಿಸಿ ತಮ್ಮ ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಳ್ಳಲು ಹೊರಟ ಸೋನಿಯಾ ಹಾಗೂ ರಾಹುಲ್ ಗಾಂಧಿಯವರ ಮೇಲೆ ನಡೆಯುತ್ತಿರುವ ಕೇಸ್ ಇದು. ಕಾಂಗ್ರೆಸ್ ಪಕ್ಷದ ಮೇಲೆ ಯಾರೂ ಕೇಸ್ ಹಾಕಿಲ್ಲ. ಅಕ್ರಮವಾಗಿ ಗಳಿಸಿದ ಗಾಂಧಿ ಕುಟುಂಬದ ಆಸ್ತಿ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ಹೆಸರನ್ನೇ ಇವರೆಲ್ಲ ಸೇರಿ ದುರಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಅವರು ಅಧಿಕಾರದಲ್ಲಿದ್ದಾಗಲೂ CBI, ED ಇತ್ತು. ಅದು ಹೇಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರಿಗೆ ಗೊತ್ತು. ಒಬ್ಬ ವ್ಯಕ್ತಿ ಇನ್ನೊಬ್ಬರ ಮೇಲೆ ಕೇಸ್ ದಾಖಲಿಸಿದಾಗ ನೋಟಿಸ್ ನೀಡಿ ವಿಚಾರಣೆ ನಡೆಸುವುದು ಕಾನೂನು ಪ್ರಕ್ರಿಯೆ. ಏನೂ ತಪ್ಪು ನಡೆದಿಲ್ಲ ಎನ್ನುವ ಕಾಂಗ್ರೆಸ್ ಗೆ ಭಯ ಯಾಕೆ? ಭೀತಿ ಯಾಕೆ? ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲೇಬೇಕು. ಕೇಂದ್ರದ ಮೇಲೆ ಆರೋಪ ಯಾಕೆ? ಎಂದು ಮಾರ್ಮಿಕವಾಗಿ ಹೇಳಿದರು.
ಇದನ್ನೂ ಓದಿ: ಶಾಲೆಯ ಬಿಸಿಯೂಟ ತಯಾರು ವೇಳೆ ಸಾಂಬಾರ್ ಪಾತ್ರೆಗೆ ಬಿದ್ದ ಮಹಿಳೆ: ಚಿಕಿತ್ಸೆ ಫಲಿಸದೆ ಸಾವು
ಕಾಂಗ್ರೆಸ್ ನವರು ಎಮರ್ಜೆನ್ಸಿಗಿಂತ ಇದು ಕೆಟ್ಟದ್ದು ಎಂದಿದ್ದಾರೆ. ಈಗಲಾದರೂ ಎಮರ್ಜೆನ್ಸಿ ಹೇರಿದ್ದು ತಪ್ಪು ಎನ್ನುವುದು ಅರ್ಥ ಆದರೆ ಸಾಕು. ಅಧಿಕಾರಕ್ಕಾಗಿ ಮಾಧ್ಯಮಗಳಿಗೆ, ಸಾರ್ವಜನಿಕ ಅಭಿಪ್ರಾಯಕ್ಕೆ ಕಡಿವಾಣ ಹಾಕಿ, ದೇಶವನ್ನೇ ಕತ್ತಲೆಯಲ್ಲಿಟ್ಟ ಸ್ವಾರ್ಥಿಗಳಿಗೆ, ವಿಚಾರಣೆಗೆ ಕರೆದದ್ದು ತಪ್ಪು ಎನ್ನುವ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.
ಇದು ಭಾರತ, ಇಟಲಿ ಅಲ್ಲ. ಇಲ್ಲಿಯ ಕಾನೂನಿಗೆ ಬೆಲೆ ಕೊಡಲೇಬೇಕು. ಹತಾಶೆಯಿಂದ, ರಾಜಕೀಯ ಮಾಡಲು ಪ್ರತಿಭಟನೆ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸುವ ದಿನ ದೂರವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ