ಪಾದರಾಯನಪುರದಲ್ಲಿ ಕ್ವಾರೆಂಟೈನ್ ಮಾಡಲು ಹೋದವರ ಮೇಲೆ ಪುಂಡರ ಹಲ್ಲೆ
ಲಾಕ್ ಡೌನ್ ಚೆಕ್ ಪೋಸ್ಟ್ ಪುಡಿಗಟ್ಟಿ ಪೊಲೀಸರನ್ನೇ ಬೆದರಿಸಿದ ಕಿಡಿಗೇಡಿಗಳು
Team Udayavani, Apr 20, 2020, 12:16 AM IST
ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಮತ್ತೆ ಕೋವಿಡ್ ಯೋಧರ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಇಂದು ರಾತ್ರಿ ನಡೆದಿದೆ.
ಇಲ್ಲಿನ 58 ಜನರನ್ನು ಕ್ವಾರೆಂಟೈನ್ ಮಾಡಲೆಂದು ತೆರಳಿದ್ದ ಆರೋಗ್ಯ ಯೋಧರ ಮೇಲೆ ಸ್ಥಳೀಯ ಕೆಲ ಪುಂಡರು ಹಲ್ಲೆಗೆ ಯತ್ನಿಸಿದ್ದಾರೆ ಮತ್ತು ಇದನ್ನು ತಡೆಯಲು ಬಂದ ಸೀಮಿತ ಪೊಲೀಸ್ ಪಡೆಗಳ ಮೇಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಪುಂಡರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇಂದು ರಾತ್ರಿಯಾಗುತ್ತಿದ್ದಂತೆ ಈ ಪ್ರದೇಶದ ಕೆಲ ಶಂಕಿತ ವ್ಯಕ್ತಿಗಳು ರೌಡಿಗಳ ರೀತಿಯಲ್ಲಿ ಅಟ್ಟಹಾಸ ಮೆರೆದಿದ್ದು ಲಾಕ್ ಡೌನ್ ಸಂಬಂಧ ಹಾಕಲಾಗಿದ್ದ ಚೆಕ್ ಪೋಸ್ಟನ್ನು ಪುಡಿಗೈದಿದ್ದಾರೆ. ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಅಸಮರ್ಥರಾದರು.
ವಾಹನಗಳ ಸಹಿತ ಏಕಾಏಕಿ ಗುಂಪುಕಟ್ಟಿಕೊಂಡು ಬಂದ ಈ ಕಿಡಿಗೇಡಿಗಳು ಪರಿಸ್ಥಿತಿಯ ಲಾಭವನ್ನು ಪಡೆದು ದಾಂಧಲೆ ಎಸಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ.
ಕೋವಿಡ್ ಸೋಂಕಿತರ ಎರಡನೇ ಸಂಪರ್ಕಿತರನ್ನು ಕ್ವಾರೆಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ