ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ
Team Udayavani, May 29, 2022, 10:45 AM IST
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ರವಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, 2021ರಲ್ಲಿ ಮೈಸೂರಿನಲ್ಲಿ ಮಳೆಹಾನಿಯಿಂದ ಕೆರೆಕಟ್ಟೆಗಳು ಒಡೆದು ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿತ್ತು. ಹೀಗಾಗಿ 138 ಕೋಟಿ ರೂ. ಪ್ರಪೋಸಲ್ ಕಳುಸಲಾಗಿತ್ತು. ಅದು ಇದುವರೆಗೂ ಬಿಡುಗಡೆಯಾಗಿರಲಿಲ್ಲ. ಆದರೆ ಶಾಸಕ ರಾಮದಾಸ್ ಕ್ಷೇತ್ರಕ್ಕೆ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ನಾನು ಎರಡು ಸಲ ಪ್ರಪೋಸಲ್ ಕೊಟ್ಟಿದ್ದರು ಆಗಿರಲಿಲ್ಲ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ನಟ ಮುಖ್ಯಮಂತ್ರಿ ಚಂದ್ರು
ದಯವಿಟ್ಟು ಹಣ ಬಿಡುಗಡೆ ಮಾಡಿ ಎಂದು ನಾನು ಹೇಳಿದ್ದೆ. ದಾವೋಸ್ ಗೆ ಹೋಗಿ ಬಂದಮೇಲೆ ಮಾಡುತ್ತೇನೆ ಎಂದಿದ್ದರು. ಹೀಗಾಗಿ ನಾನು ಖುದ್ದಾಗಿ ಬಂದು ಭೇಟಿ ಮಾಡಿದ್ದೇನೆ. ತುರ್ತಾಗಿ 27 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಸೂಚಿಸಿದ್ದಾರೆ ಎಂದು ಜಿ.ಟಿ.ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್