ಹಿಂದೂಗಳಾಗಿ ಹುಟ್ಟಿ ನಾವು ನೋವು ತಿನ್ನುತ್ತಿದ್ದೇವೆ: ಅಳಲು ತೋಡಿಕೊಂಡ ಗೂಳಿಹಟ್ಟಿ ಶೇಖರ್
Team Udayavani, Oct 21, 2021, 1:24 PM IST
ಬೆಂಗಳೂರು: ನಾವು ಮೂಲತಃ ಕ್ರಿಶ್ಚಿಯನ್ ಸಮುದಾಯವರ ವಿರೋಧಿಯಲ್ಲ. ಸರ್ಕಾರ ಕೂಡ ಅವರ ಪರವಾಗಿದೆ. ನಾನೂ ಕೂಡ ಅವರ ಪರವಾಗಿದ್ದೇನೆ. ಕ್ರೈಸ್ತ ಸಮಾಜ, ಮಿಶಿನರಿಗಳ ಪರವಾಗಿದ್ದೇವೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಬಲವಂತವಾಗಿ ಮತಾಂತರ ಮಾಡುತ್ತಾರೋ ಅವರ ವಿರುದ್ಧ ನಮ್ಮ ಸಮರ ನಡೆಯಲಿದೆ. ಕ್ರೈಸ್ತ ಸಮುದಾಯದವರು ಹೆದರುವ ಅವಶ್ಯಕತೆ ಇಲ್ಲ. ಅವರ ಭಾವನೆಗೆ ಧಕ್ಕೆ ತರುವ ಮಾತನ್ನು ಎಂದೂ ಆಡಿಲ್ಲ ಎಂದರು.
ಹಿಂದೂಗಳಾಗಿ ಹುಟ್ಟಿ, ಅವರಿಂದ ನಾವು ನೋವು ತಿನ್ನುತ್ತಿದ್ದೇವೆ. ನಾನು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಲ್ಲಿದ್ದೇನೆ. ಅಲ್ಲಿ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರತೀ ತಿಂಗಳು ಪರಿಶೀಲನಾ ಸಭೆ ಮಾಡುತ್ತೇವೆ. 75%ಹಿಂದುಳಿದವರಿದ್ದಾರೆ. ಹಿಂದುಳಿದವರ ಸಮುದಾಯದಲ್ಲಿ ಮುಸ್ಲಿಂ, ಸಿಖ್, ಪಾರ್ಸಿ ಎಲ್ಲರೂ ಬರುತ್ತಾರೆ. ಮುಸ್ಲಿಂ ಕಾರ್ಯಕ್ರಮದಲ್ಲಿ ಶಾದಿ ಮಾಲ್ ಸೇರಿದಂತೆ ಹಲವು ವಿಚಾರ ಚರ್ಚೆಗೆ ಬರಲಿದೆ. ಸಹಜವಾಗಿ ರಾಜ್ಯದಲ್ಲಿ ಎಷ್ಟು ಮಸೀದಿ, ಚರ್ಚ್ ಇದೆ ಅಂತ ಕೇಳಿದ್ದೇವೆ. ದರ್ಗಾ, ಚರ್ಚ್, ಸ್ಮಶಾನ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಹಾಗಾಗಿ ಕಮಿಟಿಯಲ್ಲಿ ವರದಿ ಕೇಳಿದ್ದೇವೆ. 1,700 ಚರ್ಚ್ ಇರುವುದಾಗಿ ಮಾಹಿತಿ ನೀಡಿದ್ದಾರೆ. ಚರ್ಚ್ ವರದಿ ಕೇಳಿರುವುದು ಸರ್ವೆ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:‘ವ್ಯಾಕ್ಸಿನ್ ಸೆಂಚುರಿ’: ‘ನಾವು ವಿಜಯವನ್ನು ಕಾಣುತ್ತಿದ್ದೇವೆ’ ಎಂದ ಪ್ರಧಾನಿ ಮೋದಿ
ನಮ್ಮ ಸಂವಿಧಾನ, ಕಾನೂನಿನಲ್ಲಿ ಸ್ವ ಇಚ್ಛೆಯಿಂದ ಯಾವುದೇ ಧರ್ಮ ಪಾಲನೆಗೆ ಅವಕಾಶ ಇದೆ. ಬಲವಂತವಾಗಿ ಮತಾಂತರ ಪ್ರಕರಣ ಬಗ್ಗೆ ಹೋಮ್ ಡಿಪಾರ್ಟ್ಮೆಂಟ್ ಗೆ ಮಾಹಿತಿ ಕೇಳಿದ್ದೇವೆ. 37 ಪ್ರಕರಣಗಳು ದಾಖಲಾಗಿರುವುದಾಗಿ ಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಗೂಳಿಹಟ್ಟಿ ಶೇಖರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ