ತಿರುಪತಿಯಲ್ಲಿ ಆಣೆ ಮಾಡಲು ನಾನು ಸಿದ್ದ, ಆದರೆ..:ಎಚ್ಚರಿಕೆ ನೀಡಿದ ಶಾಸಕ ಎಸ್.ಆರ್.ವಿಶ್ವನಾಥ್
Team Udayavani, Dec 4, 2021, 10:55 AM IST
ಬೆಂಗಳೂರು: ಕೊಲೆ ಸಂಚು ಪ್ರಕರಣದಲ್ಲಿ ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ನಾನು ಸಿದ್ದನಿದ್ದೇನೆ. ಆದರೆ ತಿರುಪತಿಯಲ್ಲಿ ಗೋಪಾಲಕೃಷ್ಣಗೆ ರಕ್ಷಣೆಯಿಲ್ಲ. ನನಗೆ ಅಲ್ಲಿ ಅಭಿಮಾನಿಗಳಿದ್ದಾರೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.
ಸಿಎಂ ಭೇಟಿ ಮಾಡಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಸಂಚು ಪ್ರಕರಣದಲ್ಲಿ ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಗೋಪಾಲಕೃಷ್ಣ ಅವರನ್ನು ಇವತ್ತು ವಿಚಾರಣೆಗೆ ಕರೆದಿದ್ದಾರೆ. ವಿಚಾರಣೆ ನಡೆಯುತ್ತಿದೆ, ಅದರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದರು.
ನಾನು ನಿನ್ನೆಯಷ್ಟೇ ತಿರುಪತಿಗೆ ಹೋಗಿದ್ದೆ. ಆಂಧ್ರ ಪ್ರದೇಶದ ಹೆಸರು ಕೆಡಿಸುತ್ತಿದ್ದಾರೆ ನೋಡಿಕೊಳ್ಳುತ್ತೇವೆಂದು ಕೆಲವರು ಹೇಳಿದರು. ಅವನು ನನಗೆ ಗೊತ್ತಿರುವವನು ಬೇಡ ಬಿಡಿ ಎಂದೆ, ನಾನು ತಿರುಪತಿಗೆ ಬರಲು ಸಿದ್ಧ. ಆದರೆ ಅವನಿಗೆ ಆ ಜಾಗ ಸೇಫ್ ಅಲ್ಲ, ಅಲ್ಲಿ ಹೆಚ್ಚುಕಡಿಮೆ ಆದರೆ ನನ್ನ ಮೇಲೆ ಬರುತ್ತದೆ ಎಂದರು.
ಇದನ್ನೂ ಓದಿ:ಉದ್ಘಾಟನೆಗೆ ತೆಂಗಿನಕಾಯಿ ಒಡೆದಾಗ ಬಿರುಕು ಬಿಟ್ಟ ಹೊಸ ರಸ್ತೆ !
ವಾಯಲಿಕಾವಲ್ ವೆಂಕಟರವಣ ಸ್ವಾಮಿ ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ನಾನು ಸಿದ್ದ. ತಿರುಪತಿಗೆ ಬರಬೇಕೆಂದರೆ ಅದಕ್ಕೂ ಸಿದ್ದ. ಈ ಚುನಾವಣೆಯಲ್ಲಿ ಆಣೆ ಪ್ರಮಾಣ ನೋಡುತ್ತಿದ್ದೇವೆ. ಆಣೆ ಪ್ರಮಾಣದಿಂದ ಕೇಸ್ ಮುಗಿಯಲ್ಲ ಎಂದು ವಿಶ್ವನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್