ಕೆಲವು ಅಭಿಪ್ರಾಯಗಳು ಎಲ್ಲರ ಅಭಿಪ್ರಾಯವಲ್ಲ,ನಮಗೆ ಪ್ರತ್ಯೇಕ ವ್ಯವಸ್ಥೆ ಮಾಡಿ: ಸುನೀಲ್ ಕುಮಾರ್
ಶಾಸಕಾಂಗ ಸಭೆ ಕರೆಯಲು ಸುನೀಲ್ ಕುಮಾರ್ ಆಗ್ರಹ
Team Udayavani, Jun 8, 2021, 1:15 PM IST
ಕಾರ್ಕಳ: ಎಲ್ಲವನ್ನೂ ಮಾಧ್ಯಮದ ಎದುರು ಹೇಳಲು ಸಾಧ್ಯವಿಲ್ಲ. ನಮ್ಮ ಅಭಿಪ್ರಾಯ ಆಲಿಸಲು ಪಕ್ಷದ ವರಿಷ್ಠರ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಕಾರ್ಕಳ ಶಾಸಕ, ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.
ಇದನ್ನೂ ಓದಿ:ಸಿಎಂ ಸ್ಥಾನದ ಬಗ್ಗೆ ಮಾತಾಡುವುವವರು ಅನಾಗರಿಕರು: ಸಂಸದ ಎ.ನಾರಾಯಣಸ್ವಾಮಿ
ತಮ್ಮ ಅಸಮಾಧಾನ ಮತ್ತು ಆಗ್ರಹವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಮುಖ್ಯಮಂತ್ರಿ ಬದಲಾಣೆ ಕುರಿತಂತೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿಯ ಬಹಳಷ್ಟು ಸಚಿವರು, ನಾಯಕರು ಸಿಎಂ ಬಿಎಸ್ ವೈ ಗೆ ಬೆಂಬಲವಾಗಿ ಮಾತನಾಡುತ್ತಿದ್ದಾರೆ. ಈ ಮಧ್ಯೆ ಸುನೀಲ್ ಕುಮಾರ್ ‘ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ’ ಎಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ