ರೈತರ ಶಕ್ತಿಗೆ ಮೋದಿ ತಲೆಬಾಗಿದ್ದಾರೆ: ಟಿ.ಎ.ಶರವಣ
Team Udayavani, Nov 19, 2021, 9:15 PM IST
ಬೆಂಗಳೂರು: ರೈತರ ಬದುಕು ಹಾಗೂ ಕೃಷಿ ವ್ಯವಸ್ಥೆಗೆ ಮಾರಕವಾಗಿದ್ದ ಮೂರು ದಮನಕಾರಿ ಕೃಷಿ ಕಾಯಿದೆಗಳನ್ನು ದಿಢೀರ್ ಹಿಂದಕ್ಕೆ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತ ಶಕ್ತಿಗೆ ತಲೆ ಬಾಗಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ, ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ. ಶರವಣ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಜಗತ್ತಿನ ಅತಿ ದೊಡ್ಡ ಪ್ರಜಾಸತ್ತೆ ಎಂದು ಬಿಂಬಿಸಲ್ಪಟ್ಟ ಭಾರತದಲ್ಲಿ ಪ್ರತಿಭಟನೆಗಳು ಕೂಡ ಐತಿಹಾಸಿಕ ಪ್ರಾಮುಖ್ಯತೆ ಪಡೆದುಕೊಂಡಿವೆ. ಪ್ರತಿಭಟನೆ ಗಳೂ ಕೂಡ ಪ್ರಜಾಸತ್ತೆಯ ಭಾಗವಾಗಿದೆ. ಈ ಪ್ರತಿಭಟನೆಗೆ ಬಲಿಷ್ಠ ಪ್ರಧಾನಿ ಎಂದು ಬಿಂಬಿಸಲ್ಪಟ್ಟ ನರೇಂದ್ರ ಮೋದಿ ಅವರೂ ಕೂಡ ಮಣಿದಿರುವುದು ರೈತಾಪಿ ಜನರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಗೆ ಬಂದು ಗೋಳಾಡಿ ದೇವರ ವಿಗ್ರಹಕ್ಕೆ ಬ್ಯಾಂಡೇಜ್ ಮಾಡಿಸಿದ ಅರ್ಚಕ!
ಜೆಡಿಎಸ್ ಯಾವತ್ತೂ ರೈತರ ಪರವಾಗಿದ್ದು, ಪ್ರಧಾನಿ ನಿರ್ಧಾರವನ್ನು ಸ್ವಾಗತಿಸಲಿದೆ . ಪಂಜಾಬ್, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳ ಹಿನ್ನಲೆಯಲ್ಲಿ ಜನಕ್ರೋಶಕ್ಕೆ ಬೆದರಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗಿದೆ ಆದರೂ, ಇದು ಕಪಟ ತೀರ್ಮಾನ ಆಗಿರದೆ, ನಿಜ ಅರ್ಥ ಪಡೆಯಲಿ. ಮತ್ತೆ ಹಿಂಬಾಗಿಲಿಂದ ಇಂಥ ಏಕಪಕ್ಷೀಯ ಕಾಯಿದೆಗಳು ಬರುವ ದಿನಗಳಲ್ಲಿ ಜಾರಿಯಾಗದಿರಲಿ ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್