ಮಾಸಾಂತ್ಯಕ್ಕೆ ಮೋದಿ, ಶಾ ಭೇಟಿ: ಬಿಎಸ್ವೈ
Team Udayavani, Dec 19, 2019, 3:04 AM IST
ಹುಬ್ಬಳ್ಳಿ: ಪಕ್ಷಕ್ಕೆ ಬೆಂಬಲ ಕೊಟ್ಟು ಉಪಚುನಾವಣೆಯಲ್ಲಿ ಗೆದ್ದಿರುವ ಎಲ್ಲ 12 ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರನ್ನೆಲ್ಲ ಸಚಿವರನ್ನಾಗಿ ಮಾಡಲಾಗುವುದೆಂದು ಪಕ್ಷದ ಮುಖಂಡರು ಭರವಸೆ ಕೊಟ್ಟಿದ್ದಾರೆ.
ಹೀಗಾಗಿ, ತಿಂಗಳಾಂತ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ ಮೇಲೆ ಅವರ ಭರವಸೆ ಈಡೇರಿಸುತ್ತೇವೆ ಎಂದರು. ಪ್ರಧಾನಿ ಮೋದಿ ಜ.2ರಂದು ಬೆಂಗಳೂರಿಗೆ ಬಂದು ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 3ರಂದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅದನ್ನು ತುಮಕೂರು ಇಲ್ಲವೆ ಬೇರೆಡೆ ಮಾಡಬೇಕೆಂಬ ಚರ್ಚೆ ನಡೆದಿದೆ. ಆ ಕುರಿತು ಪ್ರಧಾನಿ ಕಚೇರಿ ಸಂಪರ್ಕದಲ್ಲಿದ್ದು, ಅಂತಿಮವಾಗಿ ಕಾರ್ಯಕ್ರಮ ಸ್ಥಳ ನಿಗದಿಪಡಿಸಲಾಗುವುದು ಎಂದರು.
ಬಿಎಸ್ವೈ ಕಾರ್ಯಕ್ರಮದಲ್ಲಿ “ರಾಜಾ ಹುಲಿ’ ಸದ್ದು: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಬುಧವಾರ ಯಡಿಯೂರಪ್ಪ ಅವರಿದ್ದ ಕಾರ್ಯಕ್ರಮದಲ್ಲಿ ಮತ್ತೆ “ಹುಲಿಯಾ’ ಕೂಗು ಕೇಳಿ ಬಂತು. ಆದರೆ, ಈ ಸಲ “ಹೌದು ಹುಲಿಯಾ’ ಬದಲು ಅದು “ರಾಜಾ ಹುಲಿ’ ಎಂದಾಗಿತ್ತು. ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಭಾಷಣ ಮಾಡುವಾಗ, ಚನ್ನಬಸಪ್ಪ ಜಂಬಗಿ ಎಂಬಾತ ಕುಡಿದ ಅಮಲಿನಲ್ಲಿ “ರಾಜಾ ಹುಲಿ..ರಾಜಾ ಹುಲಿ’ ಎಂದು ಕೂಗು ಹಾಕಿದ. ಆಗ, ಮುನೇನಕೊಪ್ಪ ಅವರು, ನಮ್ಮ ಅಭಿಮಾನಿ ಹೋಗಲಿ ಬಿಡು ಎಂದು ಸಮಾಧಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ