ಮೋದಿ ಗೆಲುವಿಗೆ ರಂಭಾಪುರಿ ಶ್ರೀ ಹರ್ಷ
Team Udayavani, May 25, 2019, 3:01 AM IST
ಬಾಳೆಹೊನ್ನೂರು: ಬಿಜೆಪಿ ನೇತೃತ್ವದ ಎನ್ಡಿಎ 352 ಸ್ಥಾನ ಗೆದ್ದು ದಿಗ್ವಿಜಯ ಸಾಧಿ ಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸುಭದ್ರ ಸಶಕ್ತ ಭಾರತ ನಿರ್ಮಾಣ ಮತ್ತು ಜನಹಿತ ಯೋಜನೆಗಳೇ ಕಾರಣ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹರ್ಷ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಆರೋಗ್ಯ, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಕೈಗೊಂಡ ನಿರ್ಧಾರ, ಸ್ವತ್ಛ ಭಾರತ ಮೊದಲಾದ ಅನೇಕ ಯೋಜನೆಗಳನ್ನು ಕೈಗೊಂಡು ಶ್ರಮಿಸಿದ್ದನ್ನು ಮರೆಯಲಾಗದು. ಯಾರೊಂದಿಗೂ ದ್ವೇಷ, ಅಸೂಯೆ ಇಲ್ಲದ, ಸರ್ವಾಂಗೀಣ ಅಭಿವೃದ್ಧಿ ಮತ್ತು ಜನ ಕಲ್ಯಾಣದ ಮೋದಿ ಅವರ ಚಿಂತನೆಗಳು ಬಿಜೆಪಿ ಪ್ರಚಂಡ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದರು.
ಎರಡನೇ ಅವಧಿಗೆ ಪ್ರಧಾನಿಯಾಗಲಿರುವ ಮೋದಿಯವರು ಸಶಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಬಲ್ಲರೆಂಬ ಆತ್ಮವಿಶ್ವಾಸ ನಮಗಿದೆ. ಧರ್ಮ ಮತ್ತು ಜಾತಿಗಳ ಮಧ್ಯೆ ಸಂಘರ್ಷಕ್ಕೆ ಅವಕಾಶ ಕೊಡದೆ ದೇಶದ ಪ್ರಗತಿ, ಬಡತನ ನಿರ್ಮೂಲನೆ, ಕೃಷಿ ಕ್ಷೇತ್ರ ಮತ್ತು ರೈತರ ಹಿತ ಕಾಪಾಡಲು ಮೋದಿಯವರು ಹೆಚ್ಚಿನ ಗಮನ ಹರಿಸಬೇಕೆಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !