ಆಕಾಶ ಕಳಚಿ ಬಿದ್ದಂತಾಗಿದೆ; ಮೊಯ್ಲಿ ಮೊದಲ ಬಾರಿ ಸತ್ಯ ಹೇಳಿದ್ದಾರಂತೆ!


Team Udayavani, Mar 16, 2018, 3:10 PM IST

Sadananda-gowda.jpg

ಬೆಂಗಳೂರು/ನವದೆಹಲಿ/ಮೈಸೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಸಂಸದ ವೀರಪ್ಪ ಮೊಯ್ಲಿ ಅವರು ಟಿಕೆಟ್ ಹಂಚಿಕೆ ಕುರಿತಂತೆ ಮಾಡಿರುವ ಟ್ವೀಟ್ ಇದೀಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಅಲ್ಲದೇ ಮೊಯ್ಲಿ ಟ್ವೀಟ್ ಗೆ ಬಿಜೆಪಿ ಮುಖಂಡರು ಭರ್ಜರಿ ತಿರುಗೇಟು ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆ ಸತ್ಯವಾಗಿದೆ:

ರಾಜ್ಯದಲ್ಲಿರುವುದು 10% ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಕ್ಕೆ ಸಾಕ್ಷಿ ಎಂಬಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರ ಟ್ವೀಟ್ ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಈ ಮೂಲಕ ವೀರಪ್ಪ ಮೊಯ್ಲಿಯವರು ಸತ್ಯ ಹೇಳಿದ್ದಾರೆ. ಇದು ಪರ್ಸೆಂಟೇಜ್ ಸರ್ಕಾರ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷದೊಳಗಿನ ಈ ಪರ್ಸೆಂಟೇಜ್ ವ್ಯವಹಾರದ ಬಗ್ಗೆ ಹೇಳಲೇಬೇಕಾದ ಅನಿವಾರ್ಯತೆಗೆ ಮೊಯ್ಲಿಯವರು ಒಳಗಾಗಿದ್ದರು..ಅದನ್ನು ಈಗ ಬಹಿರಂಗಪಡಿಸಿದ್ದಾರೆ ಎಂದು ಶೋಭಾ ಹೇಳಿದರು.

ಸುಳ್ಳೇ ಹೇಳುತ್ತಿದ್ದವರು ಮೊದಲ ಬಾರಿ ಸತ್ಯ ಹೇಳಿದ್ದಾರೆ!ವಿಶ್ವನಾಥ್

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಮಾರಾಟ ಮಾಡಲು ಮುಂದಾಗಿರೋದು ದುರ್ದೈವದ ಸಂಗತಿ. ಎಲ್ಲರೂ ವೀರಪ್ಪ ಮೊಯ್ಲಿಯವರು ಸುಳ್ಳು ಹೇಳುತ್ತಾರೆ ಎಂದೇ ಹೇಳುತ್ತಿದ್ದರು. ಆದರೆ ಮೊದಲ ಬಾರಿಗೆ ಮೊಯ್ಲಿ ಸತ್ಯ ಹೇಳಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ್ ಅವರಂತಹವರು ಟಿಕೆಟ್ ಮಾರಾಟ ಮಾಡಿದ್ದರು, ಈಗ ಅದು ಕಾಂಟ್ರಾಕ್ಟರ್ ರೂಪದಲ್ಲಿ ಮಾರಾಟವಾಗುತ್ತಿದೆ ಎಂದು ಜೆಡಿಎಸ್ ಮುಖಂಡ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಗೆ ಆಕಾಶವೇ ಕಳಚಿ ಬಿದ್ದ ಹಾಗಾಗಿದೆ:

ವೀರಪ್ಪ ಮೊಯ್ಲಿ ಅವರ ಟ್ವೀಟ್ ನಿಂದಾಗಿ ಕಾಂಗ್ರೆಸ್ ಗೆ ಈಗ ಆಕಾಶವೇ ಕಳಚಿ ಬಿದ್ದ ಹಾಗಾಗಿದೆ. ಕಾಂಗ್ರೆಸ್ ನವರಿಗೆ ಏನು ಮಾಡಬೇಕು ಎಂದು ದಿಕ್ಕೇ ತೋಚುತ್ತಿಲ್ಲ. ರಾಜ್ಯದಲ್ಲಿರುವುದು ಪರ್ಸೆಂಟೇಜ್ ಸರ್ಕಾರ ಎಂಬುದು ಮೊಯ್ಲಿ ಅವರ ಟ್ವೀಟ್ ನಿಂದ ಮತ್ತೆ ಸಾಬೀತಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಮುಖಂಡರು ಕೊನೆಯ ದಿನಗಳ ಲೆಕ್ಕ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಮೊಯ್ಲಿ ಟ್ವೀಟ್ ನಲ್ಲಿ ಏನಿದೆ?

ಹಣ ರಾಜಕೀಯವನ್ನು ಕಾಂಗ್ರೆಸ್‌ ಬಗೆಹರಿಸಬೇಕಿದೆ. ರಸ್ತೆ ಗುತ್ತಿಗೆದಾರರು ಮತ್ತು ಅವರ ಜತೆ ಸಂಬಂಧ ಹೊಂದಿರುವ ರಾಜ್ಯ ಪಿಡಬ್ಲ್ಯುಡಿ ಸಚಿವರು ಮುಂಬರುವ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳನ್ನು ನಿರ್ಧರಿಸಲಾಗದು ಎಂದು ಮೊಯಿಲಿ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಟ್ವೀಟ್ ಮಾಡಿದ್ದರು. ಇದೇ ಟ್ವೀಟ್ ವೀರಪ್ಪ ಮೊಯಿಲಿ ಅವರ ಪುತ್ರ ಹರ್ಷ ಮೊಯಿಲಿ ಅವರ ಟ್ವಿಟರ್ ಖಾತೆಯಲ್ಲೂ ಪ್ರಕಟಗೊಂಡಿತ್ತು. ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇಬ್ಬರ ಖಾತೆಯಿಂದಲೂ ಟ್ವೀಟ್‌ ಅನ್ನು ಅಳಿಸಿಹಾಕಲಾಗಿತ್ತು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.