ಎಟಿಎಂ ಕೇಂದ್ರಗಳ ಮೂಲಕ ಪಿಎಫ್ಐಗೆ ಹಣ!

ಧಾರ್ಮಿಕ ಕೇಂದ್ರಗಳ ಬಳಿ ಸಂಘಟನೆ ಕಾರ್ಯಕರ್ತರಿಂದ ಹಣ ಸಂಗ್ರಹ

Team Udayavani, Oct 12, 2022, 7:00 AM IST

ಎಟಿಎಂ ಕೇಂದ್ರಗಳ ಮೂಲಕ ಪಿಎಫ್ಐಗೆ ಹಣ!

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಗೆ “ಎಟಿಎಂ ಕೇಂದ್ರ’ಗಳ ಮೂಲಕ ಹಣ ಜಮೆ ಆಗುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ.

ಜತೆಗೆ ಬಂಧನಕ್ಕೊಳಗಾಗಿರುವ ಐದು ಮಂದಿಗಳ ಖಾತೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ನಡೆದಿರುವುದೂ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸಂಘಟನೆಗೆ ಬರುತ್ತಿದ್ದ “ಹವಾಲಾ’ ಹಣದ ಬೇರಿನ ಮೂಲದ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕೈಹಾಕಿದೆ. ರಾಜ್ಯ ಪೊಲೀ ಸರು ಬಂಧಿಸಿದ್ದ 19 ಮಂದಿಯ ಬ್ಯಾಂಕ್‌ ಖಾತೆ ಹಾಗೂ ಸಂಘಟನೆಯ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ಎಟಿಎಂ ಕೇಂದ್ರದಿಂದ ಹಣ ಜಮೆ ಮಾಡಿದವರ ಮಾಹಿತಿ ತಿಳಿಯದು ಎಂದು ಈ ಮಾರ್ಗ ಅನುಸರಿಸಲಾಗಿತ್ತು ಎನ್ನಲಾಗಿದೆ.

ಬಂಧಿತರ ಪೈಕಿ ಬೆಂಗಳೂರಿನ ನಾಸೀರ್‌ ಪಾಷಾ, ದಕ್ಷಿಣ ಕನ್ನಡ ಜಿಲ್ಲೆಯ ಮಹಮ್ಮದ್‌ ಅಶ್ರಫ್, ಮೊಹಿನುದ್ದೀನ್‌, ಅಯೂಬ್‌ ಅಗ್ನಾಡಿ ಹಾಗೂ ತಲೆಮರೆಸಿ ಕೊಂಡಿರುವ ಆರೋಪಿ ಸೇರಿ ಐವರ ಬ್ಯಾಂಕ್‌ ಖಾತೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ನಡೆದಿದೆ ಎನ್ನಲಾಗಿದ್ದು, ಹಣದ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಸಂಘಟನೆಗಾಗಿಯೇ ಹಣ ಸಂಗ್ರಹಿಸಿದ್ದು, ದುರ್ಬಳಕೆ ಮಾಡಿಲ್ಲ. ಸಂಘಟನೆಯಿಂದ ಲಕ್ಷಾಂತರ ರೂ. ವೇತನ ಹೊರತು ಪಡಿಸಿ ಬೇರೆ ಯಾವುದೇ ಮೂಲದಿಂದ ನಾವು ಹಣ ಪಡೆಯುತ್ತಿಲ್ಲ ಎಂದು ಆರೋಪಿಗಳು ಹೇಳು ತ್ತಿದ್ದಾರೆ ಎನ್ನುತ್ತವೆ ಪೊಲೀಸ್‌ ಮೂಲಗಳು.

15 ಕೋಟಿ ರೂ.ಗೂ ಅಧಿಕ
ಆರಂಭದಿಂದ ಇದುವರೆಗೆ ಪಿಎಫ್ಐ ಸಂಘಟನೆಯ ರಾಜ್ಯದ ವಿವಿಧ ಖಾತೆ ಗಳಿಗೆ 15 ಕೋಟಿ ರೂ.ಗೂ ಅಧಿಕ ಹಣ ಜಮೆ ಯಾಗಿದೆ ಎನ್ನಲಾಗಿದೆ. ಆದರೆ ಯಾರೆಲ್ಲ ಹಣ ವರ್ಗಾಯಿಸಿದ್ದರು ಎಂಬ ಮಾಹಿತಿ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಐಎಗೆ ಪತ್ರ
ಬೆಂಗಳೂರು ಪೊಲೀಸರು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಗೆ ಪತ್ರ ಬರೆದಿದ್ದು, ಬಂಧನದಲ್ಲಿರುವ ಏಳು ಆರೋಪಿಗಳು ಹಾಗೂ ಅವರು ಸಂಘಟನೆ ಹೆಸರಿನಲ್ಲಿ ನಡೆಸುತ್ತಿದ್ದ ವ್ಯವಹಾರದ ಬಗ್ಗೆ ಕೆಲವು ಮಾಹಿತಿ ಕೋರಿದ್ದಾರೆ. ಈ ಮಾಹಿತಿ ಆಧರಿಸಿ ಮುಂದಿನ ತನಿಖೆ ನಡೆಯಲಿದೆ.

ಧಾರ್ಮಿಕ ಕೇಂದ್ರಗಳಿಂದಲೂ ಹಣ
ಪಿಎಫ್ಐ ಸಂಘಟನೆಗೆ ರಾಜ್ಯದ ಕೆಲವು ಧಾರ್ಮಿಕ ಕೇಂದ್ರ ಗಳೂ ದೇಣಿಗೆ ರೂಪದಲ್ಲಿ ಹಣ ಸಂಗ್ರಹಿಸಿ ನೀಡುತ್ತಿದ್ದವು ಎನ್ನಲಾಗಿದೆ. ಜತೆಗೆ ಖುದ್ದು ಸಂಘಟನೆ ಕಾರ್ಯಕರ್ತರೇ ಅಧಿಕೃತವಾಗಿ ಸಾಮಾಜಿಕ ಕಾರ್ಯಕ್ರಮಗಳಿಗೆ ಧಾರ್ಮಿಕ ಕೇಂದ್ರಗಳಿಗೆ ಬರುವವರಿಂದ ದೇಣಿಗೆ ಸಂಗ್ರಹಿಸುತ್ತಿದ್ದರು. ಅದರ ಅಲ್ಪ ಹಣವನ್ನು ಸ್ಕಾಲರ್‌ಶಿಪ್‌ ಹಾಗೂ ಇತರ ಕಾರ್ಯಕ್ರಮಗಳಿಗೆ ಬಳಸಿ, ದೊಡ್ಡ ಮೊತ್ತದ ಹಣವನ್ನು ಅಕ್ರಮ ಚಟುವಟಿಕೆಗಳಿಗೆ ಬಳಸುತ್ತಿದ್ದರು ಎನ್ನಲಾಗಿದೆ.

ಹೀಗೆ ನಗದು ರೂಪದಲ್ಲಿ ಸಂಗ್ರಹವಾದ ಹಣವನ್ನು ಕಾರ್ಯಕರ್ತರು ಎಟಿಎಂ ಕೇಂದ್ರಗಳ ಮೂಲಕ ಸಂಘಟನೆ ಖಾತೆಗೆ ಜಮೆ ಮಾಡುತ್ತಿದ್ದರು. ಕೆಲವು ಬಾರಿ ಸಂಘಟನೆ ಮುಖಂಡರ ಖಾತೆಗೆ ಜಮೆ ಮಾಡಿರುವ ಮಾಹಿತಿಯೂ ಲಭ್ಯ ವಾಗಿದೆ. ಈ ರೀತಿ ಬೆಂಗಳೂರು ಅಲ್ಲದೇ ಹೊರ ರಾಜ್ಯಗಳ ಎಟಿಎಂಗಳಿಂದಲೂ ಹಣ ಬರುತ್ತಿತ್ತು. ಒಟ್ಟಾರೆ ಶೇ. 60ರಷ್ಟು ದೇಣಿಗೆ ರೂಪ ದಲ್ಲಿ ಸಂಗ್ರಹಿಸಿದ ಹಣ ಸಂಘಟನೆಗೆ ಸಿಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

- ಮೋಹನ್‌ ಭದ್ರಾವತಿ

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.