ಬೇನಾಮಿ ಹಣ ಪತ್ತೆ: ಡಿಕೆಶಿ ಅರ್ಜಿ ವಜಾ
Team Udayavani, Nov 13, 2019, 3:00 AM IST
ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಿಗಳಲ್ಲಿ ಸಿಕ್ಕ 8.60 ಕೋಟಿ ರೂ. ಬೇನಾಮಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣದ ಆರೋಪಗಳಿಂದ ತಮ್ಮನ್ನು ಕೈಬಿಡಬೇಕು ಎಂದು ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಈ ಕುರಿತಂತೆ ಡಿ.ಕೆ.ಶಿವಕುಮಾರ್ ಹಾಗೂ ಮತ್ತವರ ಆಪ್ತರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿತು. ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ದೂರು ಐಟಿ ಕಾಯ್ದೆ ಮತ್ತು ಐಪಿಸಿ ಕಲಂ 120-ಬಿ (ಅಪರಾಧಿಕ ಒಳಸಂಚು) ಪ್ರಕಾರ ಸೂಕ್ತವಾಗಿದೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶ ಸರಿಯಾಗಿದೆ. ಹಾಗಾಗಿ, ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆ ನಡೆಯಬೇಕಿದೆ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ