ಬೆಂಗಳೂರಿಗೂ ಕಾಲಿಟ್ಟ ಮಂಕಿಪಾಕ್ಸ್: ಇಥಿಯೋಪಿಯದಿಂದ ಬಂದ ವ್ಯಕ್ತಿಗೆ ಸೋಂಕು


Team Udayavani, Jul 30, 2022, 1:18 PM IST

Monkeypox has reached Bengaluru: A person from Ethiopia is infected

ಬೆಂಗಳೂರು: ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಂಕಿಪಾಕ್ಸ್ ಇದೀಗ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮಂಕಿಪಾಕ್ಸ್ ಗುಣಲಕ್ಷಣ ಇರುವ ವಿದೇಶಿ ಪ್ರಜೆಯನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದೆ.

ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳು ಪತ್ತೆಯಾಗಿರುವುದರಿಂದ ಆತಂಕ ಎದುರಾಗಿದೆ. ಶಂಕಿತ ರೋಗಿಯನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಕಳೆದ ಜುಲೈ 4ರಂದು ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ಗುಣಲಕ್ಷಣಗಳು ಕಂಡು ಬಂದಿದೆ. ಕಿಡ್ನಿಕಸಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಆಫ್ರಿಕಾ ಮೂಲದ ವ್ಯಕ್ತಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿತ್ತು.

ಮಂಕಿಪಾಕ್ಸ್ ಲಕ್ಷಣ ಕಂಡು ಬಂದಿದ್ದ ಶಂಕಿತನ ಸ್ಯಾಂಪಲ್ ಅನ್ನು ಪುಣೆಯ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಗೆ ಮೊನ್ನೆ ರಾತ್ರಿ ವ್ಯಕ್ತಿಯ ಎಡಗೈಯಲ್ಲಿ ತುರಿಕೆ ಕಾಣಿಸಿಕೊಂಡಿದೆ. ಕ್ರಮೇಣ ತುರಿಕೆ ಇಡೀ ದೇಹಕ್ಕೆ ವ್ಯಾಪಿಸಿದೆ. ಎಡಗಾಲಿನ ತೊಡೆಯ ಭಾಗದಲ್ಲಿ ಗುಳ್ಳೆಗಳು ಕಾಣಿಸಿ ಕೊಂಡಿರುವುದರಿಂದ ಆತನಿಗೆ ಮಂಕಿಪಾಕ್ಸ್ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಶಂಕಿತ ರೋಗಿ ಆರೋಗ್ಯ ಹದಗೆಟ್ಟಿದ್ದು, ಈತ ತನ್ನ ಕಿಡ್ನಿ ಕಸಿ ಚಿಕಿತ್ಸೆಗಾಗಿ ಹಲವಾರು ದೇಶಗಳಿಗೆ ಪ್ರಯಾಣ ಬೆಳೆಸಿದ್ದ. ಅಂತಿಮವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿಗಾಗಿ ಇಲ್ಲಿಗೆ ಬಂದಿದ್ದ. ಶಂಕಿತ ವ್ಯಕ್ತಿಯ ಜೊತೆ ಬಂದಿದ್ದ ಆತನ ಸಹೋದರ ಹಾಗೂ ಸಹೋದರಿ ಮೇಲೂ ತೀವ್ರ ನಿಗಾ ಇಡಲಾಗಿದೆ. ಒಂದು ವೇಳೆ ಆಫ್ರಿಕಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಇರುವುದು ಖಚಿತಪಟ್ಟರೆ ನಗರದಲ್ಲೂ ಆತಂಕ ಎದುರಾಗುವುದು ಖಚಿತ.

ಇದನ್ನೂ ಓದಿ:ಒಂದು ವೇಳೆ ಮಹಾರಾಷ್ಟ್ರದಲ್ಲಿ ಗುಜರಾತಿಗಳು ಇಲ್ಲದಿದ್ರೆ…ಗವರ್ನರ್ ಕೋಶ್ಯಾರಿ ಹೇಳಿಕೆ ವಿವಾದ

ಕೆಲ ದಿನಗಳ ಹಿಂದೆ ಯುನೈಟೆಡ್ ಕಿಂಗ್‍ಡಮ್‍ಗೆ ಪ್ರಯಾಣ ಬೆಳೆಸಿ ವಾಪಸ್ಸಾಗಿದ್ದ ಬೆಂಗಳೂರು ಮೂಲದ ವ್ಯಕ್ತಿಗೂ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡು ಬಂದಿತ್ತು. ಕೂಡಲೇ ಆತನ ಸ್ಯಾಂಪಲ್ ಅನ್ನು ಪುಣೆಯ ಎನ್‍ ಐವಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಆದರೆ, ಆತನ ವರದಿ ನೆಗೆಟಿವ್ ಬಂದಿದ್ದರಿಂದ ಆತಂಕ ದೂರವಾಗಿತ್ತು. ರಾಜ್ಯದಲ್ಲಿ ಇದೀಗ ಎರಡನೇ ವ್ಯಕ್ತಿಗೆ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡು ಬಂದಿರುವುದು ಪತ್ತೆಯಾಗಿರುವುದರಿಂದ ರಾಜ್ಯದೆಲ್ಲೆಡೆ ಎಚ್ಚರ ವಹಿಸಲಾಗಿದೆ. ಖಾಸಗಿ ಆಸ್ಪತ್ರೆಯವರಿಗೆ ರೋಗ ಲಕ್ಷಣ ಕಂಡು ಬಂದ ವ್ಯಕ್ತಿಗಳ ಮಾದರಿ ಸಂಗ್ರಹಿಸಿ ಕೂಡಲೇ ಎನ್‍ಐವಿ ಪ್ರಯೋಗಾಲಯಕ್ಕೆ ರವಾನಿಸಬೇಕು ಮಾತ್ರವಲ್ಲ ಈ ವಿಚಾರವನ್ನು ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ ಎಂದು ರಂದೀಪ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.