ಮುಂಗಾರು ಖಚಿತವಿಲ್ಲ; ಮೋಡ ಬಿತ್ತನೆಯೂ ಗ್ಯಾರಂಟಿಯಿಲ್ಲ


Team Udayavani, Aug 14, 2017, 10:30 AM IST

14-STATE-12.jpg

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಗಷ್ಟೇ ಅಲ್ಲ, ಈಗ ಮೋಡ ಬಿತ್ತನೆಗೂ ಅನಿಶ್ಚಿತತೆ ಮುಂದುವರಿದಿದೆ. ಸರ್ಕಾರದ ಮೋಡ ಬಿತ್ತನೆ ಯೋಜನೆ “ದೇವರು ವರ ಕೊಟ್ಟರೂ ಪೂಜಾರಿ ಕೊಟ್ಟಿಲ್ಲ’ ಎಂಬಂತಾಗಿದೆ. ಹೌದು! ಆಗಸ್ಟ್‌ ಮೊದಲ ವಾರದಲ್ಲಿ ಮೋಡ ಬಿತ್ತನೆ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ, ಮೋಡ ಬಿತ್ತನೆಗೆ ಬೇಕಾದ ರೆಡಾರ್‌ಗಳಿಗೆ ಸುಂಕ (ಕಸ್ಟಮ್ಸ್‌) ಇಲಾಖೆಯು ಇನ್ನೂ ಅನುಮತಿ ನೀಡಿಲ್ಲ. ಹಾಗಾಗಿ ಇನ್ನೂ ರೆಡಾರ್‌ ಗಳ ಅಳವಡಿಕೆ (ಇನ್ಸ್‌ಟಾಲೇಷನ್‌) ಪೂರ್ಣವಾಗಿ ಆಗಿಲ್ಲ. ಹಾಗಾಗಿ ಮೋಡ ಬಿತ್ತನೆಯ ಈ ಅನಿಶ್ಚಿತತೆ ಇನ್ನೂ ಒಂದಷ್ಟು ದಿನ ಮುಂದುವರಿಯಲಿದೆ. 

ಮೋಡಗಳ ಸಾಂದ್ರತೆ ಆಧರಿಸಿ ಮೋಡ ಬಿತ್ತನೆಗೆ ಭಾರತೀಯ ವಿಜ್ಞಾನ ಸಂಸ್ಥೆ, ಐಐಟಿ ಪುಣೆ, ಐಐಟಿ ಮದ್ರಾಸ್‌ ಇಲ್ಲಿನ ಹವಾಮಾನ ತಜ್ಞರ ಜತೆಗೆ ಚರ್ಚಿಸಿ ಯೋಜನೆ ರೂಪಿಸಲಾಗಿದೆ. ಅದರಂತೆ ಕಾವೇರಿ, ಮಲಪ್ರಭಾ ಮತ್ತು ತುಂಗಭದ್ರಾ ಜಲಾಶಯಗಳನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು, ಗದಗ ಹಾಗೂ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ರೆಡಾರ್‌ ಅಳವಡಿಕೆ ಮಾಡಿ ಮೋಡ ಬಿತ್ತನೆಗೆ ಕಾರ್ಯಕ್ರಮ ರೂಪಿಸಲಾಗಿದೆ. ಮೋಡ ಬಿತ್ತನೆಗಾಗಿ ಮೂರು ರೆಡಾರ್‌ಗಳು ಮತ್ತು ಏರ್‌ಕ್ರಾಫ್ಟ್ಗಳು ಬೆಂಗಳೂರಿಗೆ ಬಂದಿಳಿದಿವೆ. ಆದರೆ, ರೆಡಾರ್‌ಗಳಿಗೆ ಕಸ್ಟಮ್ಸ್‌ ಅನುಮತಿ ಸಿಕ್ಕಿಲ್ಲ.

ಆ.14ಕ್ಕೆ ಮೋಡ ಬಿತ್ತನೆ?: ಜಿಎಸ್‌ಟಿ ಜಾರಿಗೆ ಬರುವುದಕ್ಕಿಂತ ಮುಂಚೆ ರೆಡಾರ್‌ಗಳನ್ನು ಬುಕ್‌ ಮಾಡಲಾಗಿತ್ತು. ಅಲ್ಲದೇ ಹೊರಗಡೆಯಿಂದ ರೆಡಾರ್‌ ಗಳು ತರಬೇಕಾದರೆ, ಅದಕ್ಕೆ ಕಸ್ಟಮ್ಸ್‌ ಅನುಮತಿ ಬೇಕು. ಈಗಾಗಲೇ ರೆಡಾರ್‌ಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಂಡಿದೆ. ಸೋಮವಾರ ಸುಂಕ ಇಲಾಖೆಯ ಅನುಮತಿ ಸಿಗುವ ನಿರೀಕ್ಷೆಯಿದೆ.  ಸೋಮವಾರವೇ ಪ್ರಾಯೋಗಿಕವಾಗಿ ಮೋಡ ಬಿತ್ತನೆ ಮಾಡಿ, ಮಂಗಳವಾರ ಪೂರ್ಣ ಪ್ರಮಾಣದಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಗೊಳ್ಳುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೋಡ ಬಿತ್ತನೆ ಹೇಗೆ?
ಮೋಡ ಬಿತ್ತನೆ ಕಾರ್ಯದ ಅನುಷ್ಠಾನಕ್ಕೆ 35 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮೂಲದ ಹೊಯ್ಸಳ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಒಟ್ಟು 60 ದಿನ 300 ತಾಸು ಮೋಡ ಬಿತ್ತನೆ ನಡೆಯಲಿದೆ. ಬೆಂಗಳೂರು, ಗದಗ, ಹಾಗೂ ಸುರಪುರದಲ್ಲಿ ಸ್ಥಾಪಿಸಿದ ರೆಡಾರ್‌ಗಳಿಂದ ಮಾಹಿತಿ ಪಡೆದು
ಬೆಂಗಳೂರು, ಹುಬ್ಬಳ್ಳಿ ಹಾಗೂ ಬೀದರ್‌ ವಾಯು ನೆಲೆಗಳನ್ನು ಬಳಸಿಕೊಂಡು ಮೋಡ ಬಿತ್ತನೆ ಮಾಡಲಾಗುತ್ತದೆ. ದಟ್ಟ ಮೋಡಗಳು ಇರುವ ಕಡೆ ಏರ್‌ಕ್ರಾಫ್ಟ್ಗಳ ಮೂಲಕ ರಾಸಾಯನಿಕ ಸಿಂಪಡಿಸಿ, ಮಳೆ ಬರಿಸುವ ಸಾಮರ್ಥಯ ಹೆಚ್ಚಿಸಲಾಗುತ್ತದೆ. ಹವಾಮಾನ ಇಲಾಖೆ ನಾಲ್ವರು ನಿವೃತ್ತ ಅಧಿಕಾರಿಗಳ ತಂಡದ ಉಸ್ತುವಾರಿಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. 

ಮೋಡ ಬಿತ್ತನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರೆಡಾರ್‌ಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಆದರೆ ರೆಡಾರ್‌ ಗಳಿಗೆ ಕಸ್ಟಮ್ಸ್‌ ಅನುಮತಿ ಇನ್ನೂ ಸಿಕ್ಕಿಲ್ಲ. ಸೋಮವಾರದ ವೇಳೆಗೆ ಅನುಮತಿ ಸಿಗುವ ಸಾಧ್ಯತೆ ಇದೆ. ಅದಾದ ಬಳಿಕ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು.
ಪ್ರಕಾಶ್‌ ಕುಮಾರ್‌, ಮುಖ್ಯ ಎಂಜಿನಿಯರ್‌, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.