ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
Team Udayavani, Oct 21, 2021, 6:21 AM IST
ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೆ„ ಸುಳಿಗಾಳಿ ಇರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ. 25ರ ವರೆಗೆ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಒಣಹವೆ ಇರಲಿದ್ದು, ಅ.22ರಿಂದ 24ರ ವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆ ಸೇರಿದಂತೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ತಮಿಳುನಾಡು ಕರಾವಳಿ ದಕ್ಷಿಣ ಭಾಗದಲ್ಲಿ ಮೇಲ್ಮೆ„ ಸುಳಿಗಾಳಿ 1.5 ಕಿ.ಮೀ. ಎತ್ತರದವರೆಗೂ ಬೀಸುವುದರಿಂದ ರಾಜ್ಯದಲ್ಲಿ ಮಳೆಯಾಗಲಿದೆ. ಅ.25ರಂದು ಮುಂಗಾರು ಮಾರುತಗಳು ಅಂತ್ಯವಾಗಲಿವೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.
ಅಕ್ಟೋಬರ್ನಲ್ಲಿ 305 ಮಿ.ಮೀ. ಮಳೆ: ಈ ಬಾರಿ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮೇಲ್ಮೆ„ ಸುಳಿಗಾಳಿ ಬೀಸುತ್ತಿರುವುದರಿಂದ ಮುಂಗಾರು ಮಾರುತಗಳು ಮುಂದುವರಿಯುತ್ತಿವೆ. ಮಾತ್ರವಲ್ಲ, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ 170 ಮಿ.ಮೀ. ವಾಡಿಕೆ ಮಳೆಯಾಗಬೇಕು. ಆದರೆ, 20 ದಿನಗಳಲ್ಲಿ ಬರೋಬ್ಬರಿ 305 ಮಿ.ಮೀ. ಮಳೆಯಾಗಿದೆ. ವಾಡಿಕೆಗಿಂತ 135 ಮಿ.ಮೀ. ಜಾಸ್ತಿಯಾಗಿದೆ. ಕಳೆದ ವರ್ಷ 204.3 ಮಿ.ಮೀ. ಮಳೆಯಾಗಿತ್ತು. ಕಳೆದ ವರ್ಷಕ್ಕಿಂತಲೂ ಸುಮಾರು 100 ಮಿ.ಮೀ. ಮಳೆ ಜಾಸ್ತಿಯಾಗಿದೆ.
ಇದನ್ನೂ ಓದಿ:ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ
26ರಂದು ಹಿಂಗಾರು ಪ್ರವೇಶ
25ರಂದು ಮುಂಗಾರು ಮಾರುತಗಳು ಅಂತ್ಯವಾಗಲಿದ್ದು, 26 ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ಸಾಮಾನ್ಯವಾಗಿ ಸೆ.30ಕ್ಕೆ ಮುಂಗಾರು ಅಂತ್ಯವಾಗಲಿದೆ. ಆದರೆ, ಈ ಬಾರಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಮೇಲ್ಮೆ„ ಸುಳಿಗಾಳಿ ಬೀಸಿದ್ದರಿಂದ ಮುಂಗಾರು ಮಾರುತಗಳು ಇನ್ನೂ ಅಂತ್ಯವಾಗಿಲ್ಲ. ಅ.15ರ ವೇಳೆಗೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಇದೀಗ ಮತ್ತೆ ಹತ್ತು ದಿನ ಮುಂದುವರಿದಿದ್ದು, 25ರಂದು ಅಂತ್ಯವಾಗಲಿವೆ. 27ರಿಂದ ಹಿಂಗಾರು ಪ್ರವೇಶವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
2005ರಲ್ಲಿ ಅತಿ ಹೆಚ್ಚು ಮಳೆ: ಅಕ್ಟೋಬರ್ ತಿಂಗಳಿನಲ್ಲಿ 2005 ರಲ್ಲಿ 605.6 ಮಿಮೀ ಮಳೆಯಾಗಿದ್ದು, ಈ ವರೆಗಿನ ದಾಖಲೆ. 2017ರಲ್ಲಿ 385.7 ಮಿಮೀ, 2014ರಲ್ಲಿ 343.8 ಮಿಮೀ, 2020ರಲ್ಲಿ 204.3 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಂಕಿ ಅಂಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ