2 ಲಕ್ಷ ಕ್ಕೂ ಹೆಚ್ಚು ಮಂದಿ ಸೋಂಕು ಮುಕ್ತ
Team Udayavani, Aug 26, 2020, 1:14 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ 1,05,313 ಮಂದಿ ಕೋವಿಡ್ ವೈರಸ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿನಿಂದ ಗುಣಮುಖರ ಸಂಖ್ಯೆ ಎರಡು ಲಕ್ಷ ಗಡಿ ದಾಟಿದೆ. ಇದೇ ವೇಳೆ ಮಂಗಳವಾರ ಹಿಂದೆಂದಿಗಿಂತಲೂ ಅತಿ ಹೆಚ್ಚು 148 ಸೋಂಕಿತರ ಸಾವು ವರದಿಯಾಗಿವೆ. ಮಂಗಳವಾರ ಹೊಸದಾಗಿ 8,161 ಮಂದಿಗೆ ಸೋಂಕು ತಗಲಿದ್ದರೆ, 6,814 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕು ಪ್ರಕರಣಗಳು 2,91,826ಕ್ಕೆ ಮತ್ತು ಗುಣಮುಖರಾದವರ ಸಂಖ್ಯೆ 2,04,439ಕ್ಕೆ ಏರಿಕೆಯಾಗಿದೆ.
ಅತಿ ಹೆಚ್ಚು ಸಾವು
ಈ ಹಿಂದೆ ರಾಜ್ಯದಲ್ಲಿ ಒಂದೇ ದಿನ 140 ಸೋಂಕಿತರ ಸಾವು ವರದಿಯಾಗಿತ್ತು. ಆದರೆ, ಮಂಗಳವಾರ 148 ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು 61, ಮೈಸೂರು 16, ಧಾರವಾಡ ಎಂಟು, ಕೊಪ್ಪಳ ಮತ್ತು ಬಳ್ಳಾರಿ ತಲಾ ಆರು ಮಂದಿ ಮೃತಪಟ್ಟಿದ್ದಾರೆ.
ಸೋಂಕು ಪರೀಕ್ಷೆ ಹೆಚ್ಚಿಸಲು ಶಿಫಾರಸು
ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಸೋಂಕು ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಪರೀಕ್ಷೆಗಳು ಹೆಚ್ಚಳವಾಗಿ, ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಮಾಡಿದರೆ ಮಾತ್ರ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು.
ಪರೀಕ್ಷೆ ಹೆಚ್ಚಳ
ಸೋಂಕು ಪರೀಕ್ಷೆ ಹೆಚ್ಚಳವಾದ ಹಿನ್ನೆಲೆ ಸೋಂಕು ಪ್ರಕರಣಗಳು ಹೆಚ್ಚಳವಾ ಗಿವೆ. ಕಳೆದ ಐದು ದಿನಗಳಿಂದ ರಾಜ್ಯದಲ್ಲಿ ಸೋಂಕು ಪರೀಕ್ಷೆಗಳು 40 ಸಾವಿರ ಆಸುಪಾಸಿನಲ್ಲಿದ್ದವು, ಅಂತೆಯೇ ಸೋಂಕು ಪ್ರಕರಣಗಳು ಕೂಡಾ ಆರು ಸಾವಿರದ ಆಸುಪಾಸಿನಲ್ಲಿದ್ದವು. ಆದರೆ, ಮಂಗಳವಾರ ಸೋಂಕು ಪರೀಕ್ಷೆಗಳು 59,787ಕ್ಕೆ ಹೆಚ್ಚಳವಾಗಿದ್ದು, ಪ್ರಕರಣಗಳು 8,161ಕ್ಕೆ ಏರಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ