ಐದು ಕೋಟಿಗೂ ಅಧಿಕ ಮತದಾರರು


Team Udayavani, May 2, 2018, 6:00 AM IST

a19.jpg

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐದುಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು
ಚಲಾಯಿಸಲಿದ್ದಾರೆ. ಏಪ್ರಿಲ್‌ 14ಕ್ಕೆ ಅಂತ್ಯಗೊಂಡ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ರಾಜ್ಯ ಮತದಾರರ ಸಂಖ್ಯೆ 2,56,75,579 ಪುರುಷರು ಮತ್ತು 2,50,09,904 ಮಹಿಳೆಯರು ಸೇರಿ 5,06,90,538 ಆಗಿದೆ. ಫೆಬ್ರವರಿ 28ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿಯಲ್ಲಿ 4.96 ಕೋಟಿ ಮತದಾರರಿದ್ದರು. ಅಂದರೆ, ಸುಮಾರು 10 ಲಕ್ಷ ಮತದಾರರು ಎರಡು ತಿಂಗಳ ಅವಧಿಯಲ್ಲಿ ಸೇರ್ಪಡೆಗೊಂಡಿದ್ದಾರೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯುವ ಮತದಾರರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಏಪ್ರಿಲ್‌ 14ಕ್ಕೆ 15.72 ಲಕ್ಷ ಆಗಿದೆ (ಫೆ. 28ಕ್ಕೆ 15.42 ಲಕ್ಷ ಇತ್ತು). ಅದೇ
ರೀತಿ, ವಿಧಾನಸಭಾ ಕ್ಷೇತ್ರವಾರು ಗಮನಿಸಿದರೆ ಬೆಂಗಳೂರು ದಕ್ಷಿಣದಲ್ಲಿ ಅಧಿಕವಾಗಿದ್ದು, 6.03 ಲಕ್ಷ ಮಂದಿ ಇದ್ದಾರೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ 1.66 ಲಕ್ಷ ಇದ್ದು, ಅತಿ ಕಡಿಮೆ ಮತದಾರರನ್ನು ಹೊಂದಿದೆ ಎಂದರು. 

ಕಣದಲ್ಲಿ 220 ಮಹಿಳಾ ಮಣಿಗಳು:  ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾರೆ 224 ಕ್ಷೇತ್ರಗಳಲ್ಲಿ 2,655 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 220 ಮಹಿಳೆಯರು ಅದೃಷ್ಟ ಪರೀಕ್ಷೆಗೊಡ್ಡಿದ್ದಾರೆ. 220ರಲ್ಲಿ ವಿವಿಧ ಪಕ್ಷಗಳಿಂದ ಅಖಾಡಕ್ಕಿಳಿದವರ ಸಂಖ್ಯೆ ಕೇವಲ 34. ಇದರಲ್ಲಿ ಕಾಂಗ್ರೆಸ್‌ನಿಂದ 15, ಬಿಜೆಪಿ 8, ಜೆಡಿಎಸ್‌ 7, ಸಿಪಿಎಂ 2, ಬಿಎಸ್‌ಪಿ 1, ಎನ್‌ ಸಿಪಿ 1 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇತರೆ ಪಕ್ಷಗಳಿಂದ 113 ಮತ್ತು ಪಕ್ಷೇತರರಾಗಿ 73 ಮಹಿಳೆಯರು ಸ್ಪರ್ಧಿಸಿದ್ದಾರೆ. ಒಟ್ಟಾರೆ 2,655 ಅಭ್ಯರ್ಥಿಗಳಲ್ಲಿ 41-50 ವರ್ಷದ ಒಳಗಿನ 855 ಅಭ್ಯರ್ಥಿಗಳು ಕಣದಲ್ಲಿದ್ದಾರೆಂದು ಮಾಹಿತಿ ನೀಡಿದರು.

ಗೈರುಹಾಜರಿ; ಕಠಿಣಕ್ರಮದ ಎಚ್ಚರಿಕೆ
ನಗರದಲ್ಲಿ ಚುನಾವಣಾ ಕರ್ತವ್ಯದಿಂದ ಅಧಿಕಾರಿಗಳು ಇಲ್ಲ-ಸಲ್ಲದ ನೆಪವೊಡ್ಡಿ ಜಾರಿಕೊಳ್ಳುತ್ತಿದ್ದಾರೆ. ಇದು ತಲೆನೋವಾಗಿ
ಪರಿಣಮಿಸಿದೆ. – ಈ ಬಗ್ಗೆ ಸ್ವತಃ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ವಿಕಾಸ ಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಅಸಮಾಧಾನ ಹೊರಹಾಕಿದರು. ಒಟ್ಟಾರೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡವರಲ್ಲಿ ನಗರದಲ್ಲಿ ಅತಿ ಹೆಚ್ಚು ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿಗೈರುಹಾಜರಾಗಿ ದ್ದಾರೆ. ಸುಮಾರು 1,500 ಮಂದಿ ಚುನಾವಣಾ ತರಬೇತಿಗೆ ಗೈರುಹಾಜರಾಗಿರುವುದು ಕಂಡು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳ ಗೈರುಹಾಜರಾತಿಗೆ ನೀಡಿದ ಕಾರಣಗಳು ಸೂಕ್ತವಾಗಿಲ್ಲದಿದ್ದರೆ, ಅಂತಹ ಅಧಿಕಾರಿಗಳ ವಿರುದಟಛಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕರ್ತವ್ಯದಿಂದ ನುಣುಚಿಕೊಳ್ಳುವ ಅಧಿಕಾರಿಯನ್ನು ಬಂಧಿಸಲಿಕ್ಕೂ ಅವಕಾಶ ಇದೆ ಎಂದು ಎಚ್ಚರಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟಾರೆ 21 ಸಾವಿರ ಜನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ನಿಯೋಜನೆ 
ಗೊಂಡಿದ್ದು, 8,278 ಜನ ಬೂತ್‌ಮಟ್ಟದ ಅಧಿಕಾರಿಗಳು ಇದ್ದಾರೆ. ಈ ಪೈಕಿ ಈಚೆಗೆ ನಡೆದ ತರಬೇತಿಯಲ್ಲಿ ಒಮ್ಮೆಲೆ 1,500 ಮಂದಿ ಗೈರು ಹಾಜರಾಗಿದ್ದಾರೆ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಕಾಪ್ಟರ್‌ಗೆ 81 ಅರ್ಜಿ; ಬಿಜೆಪಿಯಿಂದಲೇ 51
ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಗಣ್ಯರು ಮತ್ತು ಸ್ಟಾರ್‌ಗಳನ್ನು ಕರೆತರಲು ಇದುವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ 81 ಹೆಲಿಕಾಪ್ಟರ್‌ಗಳಿಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಪೈಕಿ ಬಿಜೆಪಿಯಿಂದಲೇ 51 ಹೆಲಿಕಾಪ್ಟರ್‌ಗಾಗಿ ಬೇಡಿಕೆ ಬಂದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಮಾಹಿತಿ ನೀಡಿದರು.

3 ಕೋಟಿಜನರನ್ನು ತಲುಪಿದ ಆಂದೋಲನ
ಮತದಾನ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಆಂದೋಲನಕ್ಕೆ (ಸ್ವೀಪ್‌) ಉತ್ತಮ ಸ್ಪಂದನೆ ದೊರಕಿದ್ದು, ರಾಜ್ಯಾದ್ಯಂತ ಕೈಗೊಂಡಿರುವ
ವಿವಿಧ ಕಾರ್ಯಕ್ರಮಗಳ ಮೂಲಕ ಈ ಆಂದೋಲನವು ಸುಮಾರು 3 ಕೋಟಿ ಜನರನ್ನು ತಲುಪಿದೆ ಎಂದು ಸಂಜೀವಕುಮಾರ್‌ ತಿಳಿಸಿದರು. 

ಹೊಸ ರಾಯಭಾರಿಗಳು ಚುನಾವಣಾ ಆಯೋಗ ಹೊಸ ಪ್ರಚಾರ ರಾಯಭಾರಿಗಳನ್ನು ಪ್ರಕಟಿಸಿದೆ. ಈ ರಾಯಭಾರಿಗಳನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಲಾಗಿದ್ದು ಸಾಮಾನ್ಯರಿಗೂ ತಲುಪುವ ಉದ್ದೇಶದಿಂದ ಕಿರುತೆರೆ ನಟರಾದ ರಜಿನಿ, ಆರ್‌.ಬಿ.ವೈಷ್ಣವಿ, ಚಂದನ್‌ ಶೆಟ್ಟಿ ಹಾಗೂ ಚಿತ್ರ ನಟ ವಸಿಷ್ಠ ಎನ್‌.ಸಿಂಹ ಚುನಾವಣೆಯ ಪ್ರಚಾರ ರಾಯಭಾರಿಗಳಾಗಿದ್ದಾರೆ. 

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.