ಶಿಕ್ಷಣ ಹಕ್ಕು ಕಾಯ್ದೆಯಡಿ ಸೀಟು ದಾಖಲಾತಿಗಿಂತ ತಿರಸ್ಕರಿಸಿದವರೇ ಹೆಚ್ಚು!


Team Udayavani, Jun 13, 2019, 3:05 AM IST

shikshana

ಬೆಂಗಳೂರು: ಖಾಸಗಿ ಶಾಲೆಯಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಸೀಟು ಪಡೆಯಲು ಮುಗಿಬೀಳುತ್ತಿದ್ದ ಪಾಲಕ, ಪೋಷಕರು ಈ ವರ್ಷ ಸೀಟು ಲಭ್ಯವಾದರೂ ಮಕ್ಕಳನ್ನು ಸೇರಿಸಿಲ್ಲ. ಆರ್‌ಟಿಇ ಅಡಿ ಸೀಟು ಹಂಚಿಕೆಯಾದ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಲಭ್ಯ ಕಳಪೆಯಾಗಿರುವುದರಿಂದ ಪಾಲಕ, ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ.

ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಲಭ್ಯವಿದ್ದ ಸುಮಾರು 17 ಸಾವಿರ ಸೀಟುಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಎರಡು ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿದೆ. ಸೀಟು ಪಡೆದವರಲ್ಲಿ ಮಕ್ಕಳನ್ನು ಶಾಲೆಗೆ ದಾಖಲಿಸದೆ ತಿರಸ್ಕರಿಸಿದ್ದೇ ಹೆಚ್ಚಿದೆ.

2012-13ರಲ್ಲಿ ರಾಜ್ಯದಲ್ಲಿ ಆರ್‌ಟಿಇ ಅನುಷ್ಠಾನ ಮಾಡಲಾಯಿತು. ಈಗ ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ ನಿಯಮಕ್ಕೆ ಕೆಲ ಬದಲಾವಣೆ ತಂದು 2019-20ನೇ ಸಾಲಿಗೆ ಆರ್‌ಟಿಇ ಸೆಕ್ಷನ್‌ 12(1)(ಬಿ) ಮತ್ತು 12(1)(ಸಿ) ಅಡಿಯಲ್ಲಿ ಮಾತ್ರ ಪ್ರವೇಶ ಕಲ್ಪಿಸಿದೆ.

ಇದರನ್ವಯ ನಗರ ಪ್ರದೇಶದಲ್ಲಿ ವಾರ್ಡ್‌ ಅಥವಾ ಗ್ರಾಮೀಣ ಭಾಗದ ಕಂದಾಯ ವ್ಯಾಪ್ತಿಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಶಾಲೆಗೆ ಆರ್‌ಟಿಇ ಅಡಿ ಮಕ್ಕಳನ್ನು ದಾಖಲಿಸಲು ಅವಕಾಶ ಇಲ್ಲ. ಹೀಗಾಗಿ, 2018-19ರಲ್ಲಿ ಆರ್‌ಟಿಇ ಅಡಿ 1.11 ಲಕ್ಷ ಮಕ್ಕಳು ಆರ್‌ಟಿಇ ಅಡಿಯಲ್ಲಿ ಸೀಟು ಪಡೆದಿದ್ದರು. ಈ ವರ್ಷ ಅದು 4,600ಕ್ಕೆ ಇಳಿದಿದೆ.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮಧುಗಿರಿ, ಉಡುಪಿ, ಬೀದರ್‌, ಶಿರಸಿ ಸಹಿತವಾಗಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 17,720 ಸೀಟುಗಳು ಆರ್‌ಟಿಇ ಅಡಿಯಲ್ಲಿ 2019-20ನೇ ಸಾಲಿಗೆ ಖಾಸಗಿ ಶಾಲೆಯಲ್ಲಿ ಲಭ್ಯವಿದ್ದವು.

ಮೊದಲ ಸುತ್ತಿನಲ್ಲಿ ಆನ್‌ಲೈನ್‌ ಲಾಟರಿ ಮೂಲಕ 7,636 ಹಾಗೂ 2ನೇ ಸುತ್ತಿನಲ್ಲಿ ಆನ್‌ಲೈನ್‌ ಲಾಟರಿ ಮೂಲಕ 2,583 ಸೀಟುಗಳನ್ನು ಹಂಚಿಕೆ ಮಾಡಲಾಗಿತ್ತು. ಮೊದಲ ಸುತ್ತಿನಲ್ಲಿ ಸೀಟು ಪಡೆದ 7,636 ಮಕ್ಕಳಲ್ಲಿ ಕೇವಲ 3,797 ಮಕ್ಕಳು ಮಾತ್ರ ದಾಖಲಾತಿ ಪಡೆದಿದ್ದಾರೆ.

ಎರಡನೇ ಸುತ್ತಿನಲ್ಲಿ ಸೀಟು ಪಡೆದ 2,583 ಮಕ್ಕಳಲ್ಲಿ 891 ಮಕ್ಕಳು ಮಾತ್ರ ಸಂಬಂಧಿಸಿದ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ. ಎರಡು ಸುತ್ತಿನಲ್ಲಿ ಹಂಚಿಕೆಯಾಗಿರುವ ಒಟ್ಟು 10,219 ಸೀಟುಗಳಲ್ಲಿ ಕೇವಲ 4,688 ಸೀಟುಗಳು ಮಾತ್ರ ಭರ್ತಿಯಾಗಿವೆ. 5,531 ಸೀಟುಗಳಿಗೆ ಪಾಲಕ, ಪೋಷಕರು ಮಕ್ಕಳನ್ನು ಸೇರಿಸದೇ, ತಿರಸ್ಕರಿಸಿದ್ದಾರೆ.

ಪಾಲಕರ ಹಿಂದೇಟಿಗೆ ಕಾರಣಗಳು
– ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗಿಂತಲೂ ಅತ್ಯಂತ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇರುವ ಖಾಸಗಿ ಶಾಲೆಗಳಾಗಿರುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕಿದ್ದಾರೆ.

– ಕೆಲವು ಕಡೆ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿದ್ದು, ಅನುದಾನಿತ ಶಾಲೆಗಳಿಗೆ ಸೀಟು ಹಂಚಿಕೆ ಮಾಡಿದ್ದರಿಂದ ಪಾಲಕರು ಮಕ್ಕಳನ್ನು ಅಂತಹ ಶಾಲೆಗೆ ದಾಖಲಿಸಿಲ್ಲ.

– ಖಾಸಗಿ ಶಾಲೆಯ ಶಿಕ್ಷಣ ಗುಣಮಟ್ಟದ ಜತೆಗೆ, ವ್ಯವಸ್ಥೆ ಚೆನ್ನಾಗಿಲ್ಲದೇ ಇರುವುದರಿಂದ ಪಾಲಕ, ಪೋಷಕರು ತಮ್ಮ ಮಕ್ಕಳನ್ನು ಆರ್‌ಟಿಇ ಅಡಿಯಲ್ಲಿ ಅಂತಹ ಶಾಲೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ.

ಜಿಲ್ಲಾವಾರು ಮಾಹಿತಿ
ಜಿಲ್ಲೆ – ಲಭ್ಯ ಸೀಟು – ಭರ್ತಿಯಾದ ಸೀಟು
ಬಾಗಲಕೋಟೆ – 1134 -369
ಬೆಂಗಳೂರು ಉತ್ತರ – 644 -44
ಬೆಂಗಳೂರು ದಕ್ಷಿಣ- 1262 -544
ಬೀದರ್‌ – 1027 -100
ಚಿಕ್ಕೋಡಿ – 1465 – 404
ದಾವಣಗೆರೆ -1052 -261
ಕಲಬುರಗಿ – 1375 – 296
ಮೈಸೂರು – 969 -469
ಉಡುಪಿ – 317 -30
ದಕ್ಷಿಣ ಕನ್ನಡ – 448 -54
ವಿಜಯಪುರ – 1063 -269

ರಾಜ್ಯದ ಖಾಸಗಿ ಶಾಲೆಯಲ್ಲಿ ಆರ್‌ಟಿಇ ಅಡಿಯಲ್ಲಿ ದಾಖಲಾದ ಮಕ್ಕಳ ವರ್ಷವಾರು ಮಾಹಿತಿ
ವರ್ಷ ಮಕ್ಕಳು
2012-13 – 49,282.
2013-14ರ – 73,108.
2014-15 – 93,690.
2015-16 – 1,00,000.
2016-17 – 97,971.
2017-18 – 1,08,000.
2018-19 – 1,11,000.

ಪ್ರಸ್ತುತ ಸುಮಾರು 6 ಲಕ್ಷಕ್ಕೂ ಅಧಿಕ ಮಕ್ಕಳು ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.