ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಒಬ್ಬಳನ್ನು ಟ್ಯಾಂಕ್ನಲ್ಲಿ,ಇನ್ನೊಬ್ಬಳನ್ನು ಬಕೆಟ್ದಲ್ಲಿ, ಇನ್ನೊಂದು ಮಗುವನ್ನು ಹಂಡೆಯಲ್ಲಿ ಮುಳುಗಿಸಿ ಹತ್ಯೆ....
Team Udayavani, Jun 18, 2019, 9:09 AM IST
ಕೊಪ್ಪಳ: ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದಹೃದಯ ವಿದ್ರಾವಕ ಘಟನೆ ಕುಕನೂರು ತಾಲೂಕಿನ ಯರೇಹಂಚಿನಾಳ ಎಂಬಲ್ಲಿ ಸೋಮವಾರ ನಡೆದಿದೆ.
ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7),ಕಾವ್ಯಾ(4)ಮತ್ತು ನಾಗರಾಜ್(2) ರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ಬಳಿಕ ನೇಣಿಗೆ ಶರಣಾಗಿದ್ದಾಳೆ.
ಅಕ್ಷತಾಳನ್ನು ನೀರಿನ ಹಂಡೆಯಲ್ಲಿ , ಕಾವ್ಯಾಳನ್ನು ಬಕೆಟ್ನಲ್ಲಿ ಮತ್ತು ನಾಗರಾಜ್ನನ್ನು ನೀರಿನ ಟ್ಯಾಂಕ್ನಲ್ಲಿ ಮುಳುಗಿಸಿ ಹತ್ಯೆಗೈದಿದ್ದಾಳೆ.
ಯಾವ ಕಾರಣಕ್ಕಾಗಿ ಯಲ್ಲಮ್ಮ ಕಠಿಣ ನಿರ್ಧಾರ ತಳೆದಿದ್ದಾಳೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಕೆಲ ಗ್ರಾಮಸ್ಥರ ಪ್ರಕಾರ ಪತಿಯ ಕಿರುಕುಳದಿಂದಲಾಗಿಯೇ ಹೀಗೆ ಮಾಡಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ.
ಪತಿ ಕುಡಿದು ಬಂದು ಗಲಾಟೆಮಾಡುತ್ತಿದ್ದ ಎಂದು ಹೇಳಲಾಗಿದ್ದು, ಕೃತ್ಯ ನಡೆದಾಗ ಮನೆಯಲ್ಲಿ ಇರಲ್ಲಿಲ್ಲ ಎಂದು ಹೇಳಲಾಗಿದೆ.
ತನಿಖೆ ನಡೆಸುತ್ತಿದ್ದು ನಿಖರ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಕೊಪ್ಪಳ ಎಸ್ಪಿ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು