ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


Team Udayavani, Mar 29, 2024, 7:21 AM IST

dk-suresh

ರಾಮನಗರ:  ಬೆಂಗಳೂರು ಗ್ರಾಮಾಂತರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿ.ಕೆ. ಸುರೇಶ್‌ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಆಸ್ತಿ ಮತ್ತಿತರ ವಿವರಗಳನ್ನೂ ಘೋಷಿಸಿಕೊಂಡಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ 106 ಕೋಟಿ ರೂ. ಮೌಲ್ಯದ ಚರಾಸ್ತಿ, 486.33 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಜತೆಗೆ 150 ಕೋಟಿ ರೂ. ಸಾಲವನ್ನೂ ಹೊಂದಿದ್ದಾರೆ. ವಿವಿಧ ಬ್ಯಾಂಕ್‌ ಮತ್ತು ವಿಮಾ ಪಾಲಿಸಿ ಸೇರಿ 1.66 ಕೋಟಿ ರೂ. ಠೇವಣಿ ಇರಿಸಿದ್ದು, ವಿವಿಧ ಸಂಸ್ಥೆಗಳಲ್ಲಿ 2.14 ಕೋಟಿ ರೂ. ಷೇರು ಬಂಡವಾಳ ಹೊಂದಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಲುಲೂ ಮಾಲ್‌, ಗ್ಲೋಬಲ್‌ ಮಾಲ್‌ನಲ್ಲಿ ಅವರು ಪಾಲುದಾರಿಕೆ ಹೊಂದಿದ್ದಾರೆ. ಅವರ ಒಟ್ಟಾರೆ ವಾಣಿಜ್ಯ ಬಳಕೆ ಆಸ್ತಿಗಳ ಮೌಲ್ಯ 35.41 ಕೋಟಿ ರೂ. ಇದೆ. 210 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, ನಿವೇಶ

ನಗಳನ್ನು ಹೊಂದಿದ್ದಾರೆ. ಕನಕಪುರ ತಾಲೂಕಿನ ರಾಂಪುರ ದೊಡ್ಡಿ ಗ್ರಾಮದಲ್ಲಿ, ಬೆಂಗಳೂರಿನ ಸದಾಶಿವ ನಗರದಲ್ಲಿ, ಕೆಂಗೇರಿ ಪಂತರಪಾಳ್ಯದಲ್ಲಿ ವಾಸ ಯೋಗ್ಯ ಕಟ್ಟಡಗಳಿದ್ದು, ಅವುಗಳ ಮೌಲ್ಯವೇ 27.13 ಕೋಟಿ ರೂ. ಆಗಿದೆ.

ಸುರೇಶ್‌  4.77 ಲಕ್ಷ ರೂ. ನಗದು  ಹೊಂದಿದ್ದಾರೆ. ಅಣ್ಣ ಡಿ.ಕೆ.ಶಿವಕುಮಾರ್‌ಗೆ 30 ಕೋಟಿ ರೂ. ಸಾಲ ನೀಡಿರುವುದು ಸಹಿತ 86.79 ಕೋಟಿ ರೂ. ಸಾಲವನ್ನು ವಿವಿಧ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ನೀಡಿದ್ದಾರೆ. 1.260 ಕೆಜಿ ಚಿನ್ನ, 4.860 ಕೆ.ಜಿ. ಬೆಳ್ಳಿ,  73 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತು ಮತ್ತು ಆಭರಣಗಳನ್ನು ಹೊಂದಿದ್ದಾರೆ.

ಪ್ರಕರಣಗಳ ಉಲ್ಲೇಖ:

ದ್ವಿತೀಯ ಪಿಯುಸಿವರೆಗೆ ಓದಿರುವ  ಸುರೇಶ್‌ ವಿರುದ್ಧ ಕೋವಿಡ್‌ ನಿಯಮ ಉಲ್ಲಂಘನೆಗೆ ಸಂಬಂಧಿಸಿ ಎರಡು, ನೀತಿಸಂಹಿತೆ ಉಲ್ಲಂಘನೆ ಸಂಬಂಧಿಸಿ ರಾಜರಾಜೇಶ್ವರಿ ನಗರದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಆದಾಯ ತೆರಿಗೆ, ಬಿಬಿಎಂಪಿಗೆ ಆಸ್ತಿ ತೆರಿಗೆ ಸಹಿತ 64.44 ಕೋಟಿ ರೂ. ತೆರಿಗೆ ಪಾವತಿಸಬೇಕಾಗಿದೆ. ಈ ಪೈಕಿ 7.16 ಕೋಟಿ ರೂ. ತೆರಿಗೆ ಪಾವತಿಸಿದ್ದು, 57.27 ಕೋಟಿ ರೂ.  ಬಾಕಿ ಇದೆ. ತೆರಿಗೆ ಪಾವತಿಗೆ ಸಂಬಂಧಿಸಿ  ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಕರಣವಿದೆ.

ಹೆಚ್ಚಿದ ಆಸ್ತಿ ಮೌಲ್ಯ:

ಸಂಸದ ಡಿ.ಕೆ.ಸುರೇಶ್‌ ಮೌಲ್ಯ ಪ್ರತಿ ಚುನಾವಣೆಯಿಂದ ಚುನಾವಣೆಗೆ ಹೆಚ್ಚುತ್ತಿದೆ. 2013ರಲ್ಲಿ ಆಸ್ತಿ ಮೌಲ್ಯ 47.29 ಕೋಟಿ ರೂ. ಇತ್ತು. 2014ರಲ್ಲಿ ಲೋಕಸಭೆಗೆ ಸ್ಪರ್ಧಿಸಿದಾಗ 85.87 ಕೋಟಿ ರೂ. ಗಳಿಗೆ ಹೆಚ್ಚಿತ್ತು. 2019ರಲ್ಲಿ 338.89 ಕೋಟಿ ರೂ. ಇದ್ದದ್ದು 592 ಕೋಟಿ ರೂಪಾಯಿಗೆ ಏರಿಕೆಯಾಗಿದೆ.

ಸಾಲವೂ ಹೆಚ್ಚಳ:

ಆಸ್ತಿ ಜತೆಗೆ ಅವರ ಸಾಲವೂ ಹೆಚ್ಚಳವಾಗಿದೆ. 2013ರಲ್ಲಿ 17.70 ಕೋಟಿ ರೂ. ಇದ್ದ ಸಾಲ, 2014ರಲ್ಲಿ 18.48 ಕೋಟಿ ರೂ. ಇತ್ತು. 2019ರಲ್ಲಿ 51,93 ಕೋಟಿ ರೂ. ಇದ್ದ ಸಾಲ, ಈಗ 150 ಕೋಟಿ ರೂ. ಗಳಿಗೆ ತಲುಪಿದೆ.

ಕುಟುಂಬದವರಿಗೆ ಸಾಲ:

ಸಂಸದ ಸುರೇಶ್‌ 86.37 ಕೋಟಿ ರೂ. ಸಾಲ ನೀಡಿದ್ದಾರೆ. ಈ ಪೈಕಿ ತಮ್ಮ ಕುಟುಂಬದವರಿಗೆ ಹೆಚ್ಚಿನ ಸಾಲ ನೀಡಿದ್ದಾರೆ ಎಂಬುದು ವಿಶೇಷ. ಅಣ್ಣ ಡಿ.ಕೆ.ಶಿವಕುಮಾರ್‌ಗೆ 30 ಕೋಟಿ ರೂ., ಅಣ್ಣನ ಮಗಳು ಐಶ್ವರ್ಯ ಡಿಕೆಎಸ್‌ ಹೆಗ್ಡೆಗೆ 7.94 ಕೋಟಿ ರೂ., ತಾಯಿ ಗೌರಮ್ಮಗೆ 4.75 ಕೋಟಿ ರೂ., ಅಣ್ಣನ ಮಗ ಆಕಾಶ್‌ ಕೆಂಪೇಗೌಡಗೆ 1.06 ಕೋಟಿ ರೂ., ತಮ್ಮ ಸಂಬಂಧಿ ಡಾ| ಸುಮಾ ರಂಗನಾಥ್‌ಗೆ 30 ಲಕ್ಷ ರೂ. ಸಾಲ ನೀಡಿದ್ದಾರೆ.

ಸಂಸದ ಸುರೇಶ್‌ ಆಸ್ತಿ ನೋಟ :

106 ಕೋ. ರೂ.- ಚರಾಸ್ತಿ ಮೌಲ್ಯ

486.33 ಕೋ. ರೂ- ಸ್ಥಿರಾಸ್ತಿ ಮೌಲ್ಯ

150 ಕೋ. ರೂ.- ಒಟ್ಟು ಸಾಲ

1.66 ಕೋ. ರೂ.- ಠೇವಣಿಗಳು

2.14 ಕೋ. ರೂ.- ಷೇರುಗಳಲ್ಲಿ ಹೂಡಿಕೆ

210 ಕೋ. ರೂ.- ಕೃಷಿ ಭೂಮಿ, ನಿವೇಶನ ಮೌಲ್ಯ

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.