ಭುಗಿಲೆದ್ದ ಕೈ ಭಿನ್ನಮತ: ನಾಯಕರ ವಿರುದ್ಧ ಡಿ.ಕೆ.ಸುರೇಶ್ ಕಿಡಿ
Team Udayavani, Sep 20, 2017, 4:20 PM IST
ಬೆಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವ ಡಿ.ಕೆ.ಶಿವಕುಮಾರ್ ಸಹೋದರ, ಸಂಸದ ಡಿ.ಕೆ.ಸುರೇಶ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಪಕ್ಷದ ನಾಯಕರ ವಿರುದ್ಧವೇ ಕಿಡಿ ಕಾರಿದ್ದಾರೆ.
ಬಿಬಿಎಂಪಿ ಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಪಕ್ಷದ ನಾಯಕರ ತೀರ್ಮಾನದ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿದ ಸುರೇಶ್ ‘ಇದೇ 26 ರಂದು ಮೇಯರ್ ಚುನಾವಣೆ ನಡೆಯಲಿದ್ದು ಪ್ರಬಲ ಅಭ್ಯರ್ಥಿಗಳು ಮೇಯರ್ ಆಗುತ್ತಾರೆ. ಆದರೆ ನಮ್ಮ ಕ್ಷೇತ್ರದ ವ್ಯಾಪ್ತಿಯ ಕೆಲ ಕ್ಷೇತ್ರಗಳ ಅಭಿವೃದ್ಧಿಯೇ ಆಗಿಲ್ಲ, ಸರ್ಕಾರ ಮತ್ತು ಎಲ್ಲಾ ಮೇಯರ್ಗಳು ಈ ಕ್ಷೇತ್ರಗಳನ್ನು ಮರೆತಿದ್ದಾರೆ. ನಮ್ಮ ಕ್ಷೇತ್ರ ವಾಪ್ತಿಯ ಪರಿಶಿಷ್ಟ ಜಾತಿಗೆ ಸೇರಿರುವ ವೇಲು ನಾಯಕ್ ಮತ್ತು ಅಂಜನಪ್ಪ ಇಬ್ಬರ ಪೈಕಿ ಒಬ್ಬರಿಗೆ ಮೇಯರ್ ಸ್ಥಾನ ನೀಡಬೇಕು.ಈ ಬಗ್ಗೆ ಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡುತ್ತೇನೆ’ ಎಂದರು.
ಮೇಯರ್ ಚುನಾವಣೆ ಗೆ ಸಂಬಂಧಿಸಿ ನಮಗೆ ಜವಾಬ್ದಾರಿ ನೀಡಿದರೆ ಜೆಡಿಎಸ್ ನಾಯಕರೊಂದಿಗೆ ನಾವೇ ಮಾತುಕತೆ ನಡೆಸುವುದಾಗಿ ಅಸಮಾಧಾನ ಹೊರಹಾಕಿದರು.
‘ಅತ್ತರೆ ಮಾತ್ರ ಹಾಲು ಕೊಡುವುದು ಅಂದಂಗೆ, ನಾವಾಗೇ ಕೇಳದಿದ್ದರೆ ನಮ್ಮನ್ನು ಗಮನಿಸುವುದೇ ಇಲ್ಲ, ನಮ್ಮ ಸಹನೆಯ ಕಟ್ಟೆ ಒಡೆಯುತ್ತದೆ, ಎಂದು ಕಿಡಿ ಕಾರಿದರು.
ಸುರೇಶ್ ಬೇಡಿಕೆಗೆ ಶಾಸಕ ಮುನಿರತ್ನ ಬೆಂಬಲವನ್ನೂ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?