ವಿಮಾನ ಹತ್ತಿಸಿದ್ದು ಸಂತೋಷ್ ಅಲ್ಲ: ಎಂಟಿಬಿ ನಾಗರಾಜ್
Team Udayavani, Nov 30, 2020, 9:02 AM IST
ಬಾಗಲಕೋಟೆ, ನ. 29: ನಾವು ಕಾಂಗ್ರೆಸ್ನಿಂದ ಬಿಜೆಪಿ ಸೇರುವ ಮೊದಲು ಮುಂಬಯಿಗೆ ತೆರಳುವ ವೇಳೆ ನಮ್ಮನ್ನು ವಿಮಾನ ಹತ್ತಿಸಿದ್ದು ಸಚಿವ ಆರ್. ಅಶೋಕ್ ಅವರೇ ಹೊರತು ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸಂತೋಷ್ ಆತ್ಮಹತ್ಯೆ ಯತ್ನ ಕುರಿತು ಡಿ.ಕೆ. ಶಿವಕುಮಾರ್ ಬಳಿ ಸಿ.ಡಿ., ವೀಡಿಯೋ ಇದ್ದರೆ ಬಿಡುಗಡೆ ಮಾಡಲಿ. ಅಂಥದ್ದೇನಾದರೂ ಇದ್ದರೆ ಯಾವಾಗಲೋ ಬಿಡುಗಡೆ ಮಾಡುತ್ತಿದ್ದರು ಎಂದರು.
ಸಿಎಂ ಬದಲಾವಣೆ ಇಲ್ಲ :
ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ. ಅವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಎಂಬ ಪ್ರಶ್ನೆ ಇಲ್ಲ. ರೇಣುಕಾಚಾರ್ಯರಿಗೂ ನಮ್ಮ ಬಗ್ಗೆ ಅಭಿಮಾನವಿದೆ. ಕೆಲವೊಮ್ಮೆ ಮಾತನಾಡುವಾಗ ಶಬ್ದಗಳು ತಪ್ಪಿ ಬರುತ್ತವೆ. ಆ ಬಗ್ಗೆ ಬೇಸರವಿಲ್ಲ ಎಂದರು.
ವಿಳಂಬದ ಮಾಹಿತಿ ಇತ್ತು :
ನಾವು ಸಭೆ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಸಭೆಯಲ್ಲಿ ಸರಕಾರದ ವಿಚಾರ ಪ್ರಸ್ತಾವವಾಗಿಲ್ಲ. ಸಂಪುಟ ವಿಸ್ತರಣೆ ವಿಳಂಬ ಆಗುವ ಬಗ್ಗೆ ಸಿಎಂ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಾವು ಕಾಯಬೇಕು. ಕೆಲವೇ ದಿನಗಳಲ್ಲಿ ತನಗೆ ಸಚಿವ ಸ್ಥಾನ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?