ಮೊದಲಿಯಾರ್ ದೊಡ್ಡ ಇತಿಹಾಸ ಇರುವ ಸಮುದಾಯ: ಸಿಎಂ ಬೊಮ್ಮಾಯಿ


Team Udayavani, May 8, 2022, 12:02 PM IST

1-sdfdsf

ಬೆಂಗಳೂರು: ಮೊದಲಿಯಾರ್ ದೊಡ್ಡ ಇತಿಹಾಸ ಇರುವ ಸಮುದಾಯ, ತಮಿಳುನಾಡು ಇರಲಿ ಕರ್ನಾಟಕ ಇರಲಿ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಪ್ರಕಾಶ ನಗರ ದಲ್ಲಿ ನಡೆದ ಮೊದಲಿಯಾರ್ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು,  ಮೊದಲಿಯಾರ್ ದೊಡ್ಡ ಇತಿಹಾಸ ಇರುವ ಸಮುದಾಯ, ತಮಿಳುನಾಡು ಇರಲಿ ಕರ್ನಾಟಕ ಇರಲಿ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಮೈಸೂರು ಸಂಸ್ಥಾನ ಇತಿಹಾಸದಲ್ಲಿ ಒಳ್ಳೆಯ ಹೆಜ್ಜೆ ಗುರುತು ಇಟ್ಟು ಹೋಗಿದ್ದಾರೆ. ರಾಮ ಸ್ವಾಮಿ ಮೊದಲಿಯಾರ್ ಅವರ ಪಾತ್ರ ಬಹಳ ಮುಖ್ಯ.ಬಹಳಷ್ಟು ಕಟ್ಟಡಕ್ಕೆ ಮೊದಲಿಯಾರ್ ಸಮುದಾಯ ಹೆಸರು ಇಟ್ಟಿದ್ದಾರೆ ಎಂದರು.

ವಿಧಾನಸೌಧದ ನಿರ್ಮಾಣದಲ್ಲಿ ಮೊದಲಿಯಾರ್ ಸಮುದಾಯ ನಾಯಕರು ಬಹಳ ಪಾತ್ರ ವಹಿಸಿದ್ದಾರೆ. ಬೆಂಗಳೂರು ‌ನಿರ್ಮಾದಲ್ಲಿ ಐತಿಹಾಸಿಕ ವಾಗಿದೆ ಮೊದಲಿಯಾರ್ ಸಮುದಾಯ. ಶಿಕ್ಷಣದಲ್ಲೂ ಬಹಳ ಮುಂದಿದೆ. ಐಎಎಸ್, ಐಪಿಎಸ್ ನಲ್ಲೂ ಮೊದಲಿಯಾರ್ ಸಮುದಾಯ ಬಹಳ ಹೆಸರು ಮಾಡಿದ್ದಾರೆ. ಸ್ವಾವಲಂಬನೆ ಜತೆಗೆ ಸ್ವಾಭಿಮಾನ ಸಮುದಾಯ ಕೂಡ ಆಗಿದ್ದಾರೆ ಎಂದರು.

ಬಹಳಷ್ಟು ವಿದ್ಯಾಸಂಸ್ಥೆಗಳನ್ನು ನಿರ್ಮಾಣ ಮಾಡಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.ನಾನು ನಿಮ್ಮ ಸಮುದಾಯಕ್ಕೆ ಮನವಿ ಮಾಡುತ್ತೇನೆ. ಈ ನಾಡ ಕಟ್ಟಲು ನಿಮ್ಮ ಮಾರ್ಗದರ್ಶನ ಮತ್ತು ಸೇವೆ ಅವಶ್ಯಕತೆ ಇದೆ. ಮಹಿಳೆಯರಿಗೆ ಹಾಗೂ ಯುವಕರಿಗೆ ಒಳ್ಳೆಯ ಯೋಜನೆ ಇದೆ. ಶಿಕ್ಷಣ ವ್ಯವಸ್ಥೆಯಲ್ಲೂ ಕೂಡ ಮೊದಲಿಯಾರ್ ಸಮುದಾಯದ ಬೆಂಬಲ ಇದೆ ಎಂದರು.

6500 ಸಾವಿರ ಶಾಲ ಕಟ್ಟಡ ನಿರ್ಮಾಣ ಮಾಡುತ್ತಿದ್ದೇವೆ. ಇದು ದಾಖಲೆ, ಯಾವ ಸರ್ಕಾರ ಕೂಡ ಮಾಡಿಲ್ಲ.ಇದೊಂದು ಕ್ರಾಂತಿ ಕಾರಿ ಹೆಜ್ಜೆ ಇಟ್ಟಿದ್ದೇವೆ. ಅತೀ ಹೆಚ್ಚು ಶುಲ್ಕ ಸಂಗ್ರಹ ಮಾಡುವುದು ಖಾಸಗಿ ಶಾಲೆಗಳು. ಇದಕ್ಕೊಂದು ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ. ಸಂಘ ಸಂಸ್ಥೆಗಳ ಮೂಲ ಬಡ ಜನರಿಗೆ ಶಿಕ್ಷಣ ನೀಡಬೇಕು. ಸಂಘ ಸಂಸ್ಥೆಗಳು ಮುಂದೆ ಬಂದರೆ ಸರ್ಕಾರ ಸಹಾಯ ಮಾಡುತ್ತದೆ ಎಂದರು.

ದುಡಿಮೆಗೆ ಹಾಗೂ ತಂತ್ರಜ್ಞಾನಕ್ಕೆ ಬಹಳ ಮಹತ್ವ ನೀಡುತ್ತೀರಿ. ಮಿಷನರಿ ವಿಚಾರದಲ್ಲಿ ನಿಮ್ಮ ಸಮುದಾಯ ಬಹಳಷ್ಟು ಕೆಲಸ‌ಮಾಡಿದೆ. ನಾನು ಕೂಡ ಈ ಸಮುದಾಯದ ಜೊತೆಗೆ 40 ವರ್ಷದ ಸ್ನೇಹ ಇದೆ. ವಜ್ರ ಮಹೋತ್ಸವ ಆಚರಿಸುತ್ತಿದ್ದು ಈ ಸಮುದಾಯ ಕೂಡ ವಜ್ರದಂತೆ ಗಟ್ಟಿಯಾಗಿದೆ‌ ಎಂದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.