ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆದವರು ಯಾರು: ಮುನಿರತ್ನ ಸವಾಲು
Team Udayavani, May 27, 2022, 8:26 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಯಾರು ಕರೆದಿದ್ದಾರೆ ಎಂಬುದರ ಬಗ್ಗೆ ಬಹಿರಂಗಪಡಿಸಲಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ಸವಾಲು ಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊದಲು ಯಾರು ಆವರನ್ನು ಕರೆದಿದ್ದಾರೆ ಎಂಬುದರ ಬಗ್ಗೆ ಹೇಳಿದರೆ. ನಂತರ ಮುಂದಿನ ಚರ್ಚೆ ಮಾಡೋಣ ಎಂದು ಹೇಳಿದರು.
ಈಗಾಗಲೇ ಬಿಜೆಪಿ ಪಕ್ಷ ಶಕ್ತಿಯುತವಾಗಿದೆ. ನಾಯಕರ ಯಾವುದೇ ಕೊರತೆಯಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ ಬಿಡುವಂತೆ ಕೆಲವರು ಮಾಡಲಿದ್ದಾರೆ ಎಂದು ತಿಳಿಸಿದರು.