ಯೋಗೀಶಗೌಡ ಹತ್ಯೆ: ಮತ್ತೊಬ್ಬನ ಬಂಧನ
Team Udayavani, Mar 15, 2020, 3:02 AM IST
ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿ ಸಿ.ಹರ್ಷಿತ್ ಎಂಬ ಆರೋಪಿಯನ್ನು ಬಂಧಿಸಿ ನಗರದ 2ನೇ ಜೆಎಂಎಫ್ಸಿ ನ್ಯಾಯಾಲಯದ 2ನೇ ದಿವಾಣಿ ನ್ಯಾಯಾಧೀಶರಾದ ಕುರಣಿಕಾಂತ್ ಧಾಕು ಅವರ ನಿವಾಸಕ್ಕೆ ಕರೆದುಕೊಂಡು ಹೋಗಿ ಹಾಜರುಪಡಿಸಲಾಯಿತು.
ಆರೋಪಿಯನ್ನು ಮಾ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ಬಳಿಕ ಆರೋಪಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಇದಕ್ಕೂ ಮುನ್ನ ಹರ್ಷಿತ್ನನ್ನು ಶುಕ್ರವಾರ ಜಿಲ್ಲಾಸ್ಪತ್ರೆಗೆ ಕರೆತಂದು ಆರೋಗ್ಯ ಪರೀಕ್ಷೆ ಮಾಡಿಸಲಾಯಿತು. ಈ ಹಿಂದೆ ಬಂ ಧಿತ ಆರು ಜನ ಆರೋಪಿಗಳ ನ್ಯಾಯಾಂಗ ಬಂಧನ ಅವ ಧಿಯೂ ಮಾ.20ಕ್ಕೆ ಮುಕ್ತಾಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ