ನಿರಾಣಿ ಮನೆಯಲ್ಲಿ ರಾಮದಾಸ್, ಉಮೇಶ್ ಕತ್ತಿ ಮೀಟಿಂಗ್? ಸ್ಪಷ್ಟನೆ ನೀಡಿದ ಮುರುಗೇಶ್ ನಿರಾಣಿ
Team Udayavani, May 31, 2020, 3:05 PM IST
ಬೆಂಗಳೂರು: ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಅಸಮಧಾನದ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ ಮತ್ತು ರಾಮದಾಸ್ ಅವರು ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಫೋಟೊವೊಂದು ವೈರಲ್ ಆಗಿದೆ.
ಸಿಎಂ ಯಡಿಯೂರಪ್ಪ ಅವರ ವಿರುದ್ಧ ಅಸಮಧಾನಗೊಂಡಿರುವ ಇವರು ನಿರಾಣಿಯವರ ಮನೆಯಲ್ಲಿ ಸಭೆ ಸೇರಿದ್ದಾರೆ ಎಂದು ಈ ಚಿತ್ರ ವೈರಲ್ ಆಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಮುರುಗೇಶ್ ನಿರಾಣಿ, ಈ ಚಿತ್ರ ಎರಡುವರೆ ತಿಂಗಳ ಹಳೆಯದಾಗಿದೆ ಎಂದಿದ್ದಾರೆ.
ಎರಡುವರೆ ತಿಂಗಳ ಹಿಂದೆ ರಾಮದಾಸ್ ಮತ್ತು ಉಮೇಶ್ ಕತ್ತಿಯವರು ನನ್ನ ಮನೆಗೆ ಬಂದಿದ್ದರು. ಅದು ಸ್ನೇಹಪೂರ್ವಕ ಭೇಟಿಯಷ್ಟೇ. ಸಿಎಂ ಬಿಎಸ್ ವೈ ವಿರುದ್ಧ ಯಾವುದೇ ಅಸಮಧಾನದಿಂದ ಭೇಟಿಯಾಗಿಲ್ಲ ಎಂದಿದ್ದಾರೆ. ಬೇರೆ ಬೇರೆ ಶಾಸಕರು ಭೇಟಿಯಾಗುವ ಪರಿಪಾಠವಿದೆ. ಈ ಹಿನ್ನಲೆಯಲ್ಲಿ ಭೇಟಿಯಾಗಿದ್ದೇವೆ ಅಷ್ಟೇ ಎಂದಿದ್ದಾರೆ.
ಉಮೇಶ್ ಕತ್ತಿಯವರು ಹಿರಿಯ ಶಾಸಕರು. ಮೊದಲ ಹಂತದಲ್ಲಿ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು. ಆದರೆ ಆಗಿಲ್ಲ ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಪದವಿ ಕೊಡಬೇಕು ಎಂದು ನಿರಾಣಿ ಹೇಳಿದ್ದಾರೆ.
ಸಚಿವನನ್ನಾಗಿ ಮಾಡಿದರೆ ನಾನು ಉತ್ತಮ ಕೆಲಸ ಮಾಡಬಲ್ಲೆ. ಆದರೆ ನನಗೆ ಯಾವುದೇ ಅಸಮಧಾನವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?