ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣ: ಹೊರರಾಜ್ಯದಿಂದ ತನಿಖೆ ಆಗಲಿ: ಲೆಹರ್ಸಿಂಗ್
Team Udayavani, Aug 29, 2022, 10:58 PM IST
ಬೆಂಗಳೂರು: ಮುರುಘಾ ಮಠದ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಹೊರ ರಾಜ್ಯದಿಂದ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಹಳ ಪ್ರಭಾವಿ ಸ್ವಾಮಿಗಳ ಮೇಲೆ ದೂರು ದಾಖಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಇದೊಂದು ಅತ್ಯಂತ ದುಃಖಕರ ಬೆಳವಣಿಗೆ. ಪ್ರತಿ ಸಲ ಇಂತಹ ಪ್ರಕರಣಗಳು ಆದಾಗ, ಜನರ ಮನಸ್ಸು ಕಲುಷಿತ ಆಗುತ್ತದೆ.
ಜವಾಬ್ದಾರಿಯಿರುವ ಸ್ಥಾನದಲ್ಲಿ ಈ ಪ್ರಕರಣ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಕೈವಾಡ ಇಲ್ಲವೆಂದು ಸಾಬೀತುಪಡಿಸಬೇಕು. ಬಾಲಕಿಯರಿಗೆ ನ್ಯಾಯ ಸಿಗಬೇಕು ಅಂದರೆ, ಬೇರೆಡೆಗೆ ಪ್ರಕರಣ ವರ್ಗಾವಣೆ ಆಗಬೇಕು. ಇನ್ನೂ ಏನಾದರೂ ಗೊಂದಲವಿದ್ದಲ್ಲಿ ಇಂತಹ ಪ್ರಕರಣಗಳು ಹೊರ ರಾಜ್ಯದಿಂದ ತನಿಖೆಯಾಗುವುದು ಸೂಕ್ತ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ