ಸಂಗೀತ, ನೃತ್ಯ ಅಕಾಡೆಮಿ ಪ್ರತ್ಯೇಕತೆಗೆ ಸಿದ್ಧತೆ


Team Udayavani, Sep 26, 2018, 6:00 AM IST

e-20.jpg

ಬೆಂಗಳೂರು: ಆಧುನಿಕತೆಗೆ ತಕ್ಕಂತೆ ಸಂಗೀತ ಮತ್ತು ನೃತ್ಯ ಕ್ಷೇತ್ರಗಳು ಹೊಸ ಮಾದರಿಗಳನ್ನು ಅಳವಡಿಸಿಕೊಂಡು ವಿಸ್ತಾರಗೊಳ್ಳುತ್ತಿವೆ. ಇದಕ್ಕೆ ಪೂರಕವಾಗಿ ಸ್ಪಂದಿಸುವ ಉದ್ದೇಶದಿಂದ ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿಯನ್ನು ನೃತ್ಯ ಅಕಾಡೆಮಿ ಮತ್ತು ಸಂಗೀತ ಅಕಾಡೆಮಿಯನ್ನಾಗಿ ಪ್ರತ್ಯೇಕಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧತೆ ನಡೆಸಿದೆ.

ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ನೂರಾರು ಪ್ರಕಾರಗಳಿವೆ. ಜತೆಗೆ ಇತ್ತೀಚೆಗೆ ಹೊಸ ಮಾದರಿಗಳು ಸೇರಿಕೊಂಡು ಇವುಗಳ ವ್ಯಾಪ್ತಿ ಮತ್ತಷ್ಟು ವಿಸ್ತಾರಗೊಂಡಿವೆ. ಹೀಗಾಗಿ ಸಂಗೀತ ಮತ್ತು ನೃತ್ಯಕ್ಕೆ ಒಂದೇ ಅಕಾಡೆಮಿ ಎಂದಾದರೆ ಎರಡು ಕ್ಷೇತ್ರಗಳಿಗೂ ಸಲ್ಲಬೇಕಾದ ಪ್ರಾಮುಖ್ಯತೆ ದೊರಕುವುದಿಲ್ಲ. ಹೀಗಾಗಿ ಅವುಗಳನ್ನು ಪ್ರತ್ಯೇಕಿಸಲು ಆಲೋಚಿಸಲಾಗಿದೆ. ಸಾಂಸ್ಕೃತಿಕ ನೀತಿ ಅನುಷ್ಠಾನಗೊಂಡ ಹಿನ್ನೆಲೆಯಲ್ಲಿ ಈ ಅಕಾಡೆಮಿಯನ್ನು ಪ್ರತ್ಯೇಕಗೊಳಿಸಲಾಗುತ್ತಿದೆ.

ಈಗಾಗಲೇ ಈ ಬಗ್ಗೆ ಪ್ರಸ್ತಾವನೆ ಸಿದ್ಧಗೊಳಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಂದು ತಿಂಗಳ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದ ನಂತರ ಪ್ರತ್ಯೇಕ ಅಕಾಡೆಮಿಗಳು ಸ್ಥಾಪನೆಯಾಗಲಿವೆ. ಜತೆಗೆ ಅಕಾಡೆಮಿಗಳಿಗೆ ಅನುದಾನವೂ ಹಂಚಿಕೆಯಾಗಲಿದ್ದು, ಒಟ್ಟಾರೆ ಅನುದಾನ ಹೆಚ್ಚಳವಾಗಲಿದೆ. ಇದರಿಂದ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿಯಂತೆ ಕರ್ನಾಟಕದಲ್ಲೂ ರಾಜ್ಯ ಸಂಗೀತ ನಾಟಕ ಅಕಾಡೆಮಿ ಎಂದಿತ್ತು. ಸಾಹಿತ್ಯ, ಲಲಿತಕಲೆ, ನಾಟಕ, ಸಂಗೀತ ನೃತ್ಯ ಹಾಗೂ ಜನಪದ ಕ್ಷೇತ್ರಗಳು ಈ ಅಕಾಡೆಮಿ ವ್ಯಾಪ್ತಿಗೆ ಬರುತ್ತಿದ್ದವು. 1977ರಲ್ಲಿ ಅಕಾಡೆಮಿಗಳನ್ನು ಪ್ರತ್ಯೇಕಿಸಿ ಸಂಗೀತ ಮತ್ತು ನೃತ್ಯ, ಸಾಹಿತ್ಯ, ಜನಪದ, ಲಲಿತಕಲೆ, ನಾಟಕ ಎಂಬ 5 ಅಕಾಡೆಮಿಗಳನ್ನು ಸ್ಥಾಪಿಸಲಾಯಿತು. 

ಯಕ್ಷಗಾನ ಬಯಲಾಟ ಪ್ರತ್ಯೇಕಗೊಂಡವು: ಈ ಹಿಂದೆ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಒಂದೇ ಇತ್ತು. ಆದರೆ, ಯಕ್ಷಗಾನ ಮತ್ತು ಬಯಲಾಟದ ಕಾರ್ಯಕ್ಷೇತ್ರಗಳು ವಿಭಿನ್ನವಾದವು. ಒಂದು ಉತ್ತರ ಕರ್ನಾಟಕದ ಕಲೆ ಮತ್ತೂಂದು ಕರಾವಳಿ ಭಾಗದ ಕಲೆ ಎಂಬ ಕಾರಣಕ್ಕಾಗಿ ಕಳೆದ ವರ್ಷ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯಿಂದ ಬಯಲಾಟವನ್ನು ಪ್ರತ್ಯೇಕಗೊಳಿಸಿ ಬಾಗಲಕೋಟೆಯಲ್ಲಿ ಬಯಲಾಟ ಅಕಾಡೆಮಿ ಆರಂಭಿಸಲಾಗಿತ್ತು. ಇದೇ ಮಾದರಿಯಲ್ಲಿ ಸಂಗೀತ ಮತ್ತು ನೃತ್ಯ ಅಕಾಡೆಮಿಗಳನ್ನು ವಿಭಜಿಸಲಾಗುತ್ತಿದೆ. ಇದಲ್ಲದೆ, 1978ರಲ್ಲಿ ಪ್ರಾರಂಭವಾದ ಸಂಗೀತ ನೃತ್ಯ ಅಕಾಡೆಮಿಗೆ ಇಲ್ಲಿಯವರೆಗೂ ನೃತ್ಯ ಕ್ಷೇತ್ರದಿಂದ ಕೇವಲ 3 ಮಂದಿ ಮಾತ್ರ ಅಧ್ಯಕ್ಷರಾಗಿದ್ದಾರೆ. 1987ರಿಂದ 1990ರವರೆಗೆ ಮಾಯಾರಾವ್‌, 1995ರಿಂದ 1997ರವರೆಗೆ ಯು.ಕೆ.ಚಂದ್ರಭಾಗದೇವಿ ಹಾಗೂ 2011 ರಿಂದ 2013ರವರೆಗೆ ವೈಜಯಂತಿ ಕಾಶಿ ಮಾತ್ರ ಈ ಕ್ಷೇತ್ರದಿಂದ ಅಧ್ಯಕ್ಷರಾಗಿದ್ದರು. ಉಳಿದಂತೆ ಸಂಗೀತ ಕ್ಷೇತ್ರದಿಂದಲೇ ಅಧ್ಯಕ್ಷರಾಗಿ ನೇಮಕ ವಾಗುತ್ತಿರುವುದು ನೃತ್ಯ ಕ್ಷೇತ್ರವನ್ನು ಸರ್ಕಾರ ಕಡೆಗಣಿಸಿದಂತಾಗಿದೆ. ಇದಕ್ಕೆ ಸಿಗಬೇಕಾದ ಮಾನ್ಯತೆ ದೊರೆಯುತ್ತಿಲ್ಲ ಎಂದು ಹಲವು ಬಾರಿ ನೃತ್ಯ ಕಲಾವಿದರು 
ಅಸಮಾಧಾನ ವ್ಯಕ್ತಪಡಿಸಿದ್ದೂ ಇದೆ.

ಅಗಾಧವಾದ ನೃತ್ಯಕ್ಷೇತ್ರ ಸಂಗೀತ ನೃತ್ಯ ಅಕಾಡೆಮಿಯಿಂದ ನೃತ್ಯವನ್ನು ಪ್ರತ್ಯೇಕಗೊಳಿಸಲು ಇಲಾಖೆ ಮುಂದಾಗಿರುವುದು ಒಳ್ಳೆಯ ನಿರ್ಧಾರ. ಸಂಗೀತದಂತೆ ನೃತ್ಯ ಕ್ಷೇತ್ರವೂ ಅಗಾಧವಾದದು. ಕರ್ನಾಟಕ, ಹಿಂದೂಸ್ತಾನಿ, ಗಮಕ, ಹರಿಕಥೆ ಎಲ್ಲವೂ ಸಂಗೀತ ಮತ್ತು ನೃತ್ಯ ಅಕಾಡೆಮಿಗೆ ಒಳಪಟ್ಟಿರುತ್ತದೆ. ಈ ಎರಡು ಕ್ಷೇತ್ರವನ್ನು ಪ್ರತಿನಿಧಿಸುವ ಅಕಾಡೆಮಿ ಒಂದೇ ಆಗಿದ್ದರೆ ನೃತ್ಯ ಕ್ಷೇತ್ರ ಗೌಣವಾಗಲಿದೆ. ನೃತ್ಯ ಕ್ಷೇತ್ರವನ್ನು ಕೇವಲ ಒಬ್ಬರು ಮಾತ್ರ ಪ್ರತಿನಿಧಿಸುತ್ತಾರೆ. ಇದರಿಂದ ನೃತ್ಯಕ್ಕೆ ಸಿಗಬೇಕಾದ ಮಾನ್ಯತೆ ಸಿಗುವುದಿಲ್ಲ. ಸಂಶೋಧನಗೂ ತೋಡಕಾಗುತ್ತದೆ ಎಂದು ಭರತನಾಟ್ಯ ನೃತ್ಯ ಕಲಾವಿದೆ ಲಲಿತಾ ಶ್ರೀನಿವಾಸನ್‌ ತಿಳಿಸಿದ್ದಾರೆ. 

ಕರ್ನಾಟಕ ಸಂಗೀತ ಮತ್ತು ನೃತ್ಯಾ ಅಕಾಡೆಮಿಯಿಂದ ನೃತ್ಯ ಅಕಾಡೆಮಿಯನ್ನು ಪ್ರತ್ಯೇಕಗೊಳಿಸಲು  ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಸರ್ಕಾರ ಒಪ್ಪಿದ ಕೂಡಲೇ ನೃತ್ಯ ಅಕಾಡೆಮಿ ಸ್ಥಾಪನೆಗೊಳ್ಳಲಿದೆ. 

● ಡಾ.ಜಯಮಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ

ನೃತ್ಯ ಕ್ಷೇತ್ರ ಬದಲಾಗಿದ್ದು, ಇದರಲ್ಲಿ ಹಲವು ಪ್ರಕಾರಗಳು ಒಳಗೊಂಡಿವೆ. ಇವುಗಳನ್ನು ಪ್ರತಿನಿಧಿಸಲು ಒಂದು ಅಕಾಡೆಮಿಯ ಅಗತ್ಯವಿದೆ. ನೃತ್ಯ
ಅಕಾಡೆಮಿ ಪ್ರತ್ಯೇಕಗೊಂಡರೆ ಸಾಕಷ್ಟು ಅನುದಾನ ದೊರೆಯಲಿದೆ. ಇದರಿಂದ ನೃತ್ಯ ಕ್ಷೇತ್ರದಲ್ಲಿ ಸಂಶೋಧನೆ, ವಿಚಾರ ಸಂಕಿರಣ ಅಥವಾ ನೃತ್ಯ ಕಲಾವಿದರ ಕುರಿತು ಸಾಕಷ್ಟು ಪುಸ್ತಕ ತರಲು ಸಾಧ್ಯವಾಗುತ್ತದೆ.

● ವೈಜಯಂತಿ ಕಾಶಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ

ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.