ಮುಸ್ಲಿಮರ ಧರ್ಮ ಸಮ್ಮೇಳನಕ್ಕೆ ಕಲಾದಗಿಯಲ್ಲಿ ಸಿದ್ಧತೆ


Team Udayavani, Feb 3, 2019, 1:40 AM IST

16.jpg

ಬಾಗಲಕೋಟೆ: ಬ್ರಿಟಿಷರ ಆಳ್ವಿಕೆಯಲ್ಲಿ ಜಿಲ್ಲಾ ಕೇಂದ್ರವಾಗಿದ್ದ ತಾಲೂಕಿನ ಕಲಾದಗಿಯಲ್ಲಿ ಮುಸ್ಲಿಂ ಸಮುದಾಯದ ದಕ್ಷಿಣ ಭಾರತ ಮಟ್ಟದ ಬಡೇ ಇಜ್ತೆಮಾ (ಧರ್ಮ ಸಮ್ಮೇಳನ)ಕ್ಕೆ ಸಿದ್ಧತೆ ಜೋರಾಗಿ ನಡೆಯುತ್ತಿದೆ.

ಕಲಾದಗಿಯಿಂದ 3 ಕಿ.ಮೀ. ದೂರದಲ್ಲಿರುವ ಪುನರ್‌ವಸತಿ ಕೇಂದ್ರದ ಅಕ್ಕ-ಪಕ್ಕದ ಸುಮಾರು 650 ಎಕರೆ ಕೃಷಿ ಭೂಮಿಯಲ್ಲಿ ಫೆ. 16ರಿಂದ 18ರವರೆಗೆ 3 ದಿನ ನಡೆಯುವ ಈ ಇಜ್ತೆಮಾಕ್ಕೆ ಪೂರ್ವ ಸಿದ್ಧತೆ ನಡೆದಿದೆ. 82 ಎಕರೆ ಪ್ರದೇಶದಲ್ಲಿ (25 ಲಕ್ಷ ಚದರ ಅಡಿ ಸುತ್ತಳತೆ) ಬೃಹತ್‌ ಪೆಂಡಾಲ್‌ ಹಾಕಲಾಗುತ್ತಿದೆ. ದಕ್ಷಿಣ ಭಾರತದ ಕರ್ನಾಟಕ, ಮಹಾರಾಷ್ಟ್ರ ಸಹಿತ ವಿವಿಧೆಡೆಯ ಮುಸ್ಲಿಂ ಸಮುದಾಯದವರು ಪಾಲ್ಗೊಳ್ಳಲಿದ್ದು, ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೊಂದು ಧರ್ಮ ಸಮ್ಮೇಳನ. ಇಲ್ಲಿ ಘೋಷಣೆಗಳು, ಮೆರವಣಿಗೆ ಇರುವುದಿಲ್ಲ. ಕೇವಲ ಕುರಾನ್‌, ಮೊಹ್ಮದ ಪೈಗಂಬರ ಕುರಿತ ಪ್ರವಚನ ನಡೆಯುತ್ತದೆ. ಜತೆಗೆ ಮುಸ್ಲಿಂ ಬಾಂಧವರು, ಇತರೆ ಸಮಾಜ ಬಾಂಧವರೊಂದಿಗೆ ಸೌಹಾರ್ದತೆಯಿಂದ ಜೀವನ ನಡೆಸುವ ಕುರಿತು ಧರ್ಮ ಗುರುಗಳು ತಿಳಿವಳಿಕೆಯ ಬೋಧನೆ ಮಾಡುತ್ತಾರೆ. ನಿತ್ಯ ಸಾಮೂಹಿಕ ಪ್ರಾರ್ಥನೆ, ಪ್ರವಚನ ಬಿಟ್ಟರೆ ಬೇರೆ ಯಾವ ಕಾರ್ಯಕ್ರಮಗಳೂ ನಡೆಯುವುದಿಲ್ಲ. ಈ ಕುರಿತು ಕೆಲವರಿಗೆ ತಪ್ಪು ತಿಳಿವಳಿಕೆಯಿದೆ. ವಿರೋಧ ಮಾಡುವವರು, ಸ್ಥಳಕ್ಕೆ ಬಂದು ನೋಡಬೇಕು. ಈ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು, ಮಹಿಳೆಯರಿಗೆ ಪ್ರವೇಶವಿಲ್ಲ. ಯಾವುದೇ ಧರ್ಮ-ಸಮಾಜದ ಪುರುಷರು ಬಂದು ಭಾಗವಹಿಸಬಹುದು. ಉರ್ದು ಭಾಷೆಯಲ್ಲಿ ನಡೆಯುವ ಪ್ರವಚನವನ್ನು ಕನ್ನಡಕ್ಕೆ ಅನುವಾದ ಮಾಡಲೂ ವ್ಯವಸ್ಥೆ ಮಾಡಲಾಗಿದೆ ಎಂದು ಉಸ್ತುವಾರಿ ನೋಡಿಕೊಳ್ಳುತ್ತಿರುವ ಮೊಹ್ಮದಯಾಸೀನ್‌ ಮೊಮಿನ್‌ ತಿಳಿಸಿದರು.

ಲಕ್ಷಾಂತರ ಜನರಿಗಾಗಿ ಕಾರ್ಯಕ್ರಮ ನಡೆಯುವ ಬೃಹತ್‌ ಪೆಂಡಾಲ್‌ ಸುತ್ತಲಿನ ನಾಲ್ಕು ಕಡೆ ಒಟ್ಟು 2 ಸಾವಿರ ತಾತ್ಕಾಲಿಕ ಶೌಚಾಲಯ ನಿರ್ಮಿಸಲಾಗುತ್ತಿದೆ. ಇದಕ್ಕೆ ಇಂಗುಗುಂಡಿ ವ್ಯವಸ್ಥೆ ಮಾಡಿದ್ದು, 10 ಸಕ್ಕಿಂಗ್‌ ಯಂತ್ರವನ್ನೂ ತರಿಸಲಾಗುತ್ತಿದೆ. ಎಂಟು ವೈದ್ಯಕೀಯ ಕೇಂದ್ರಗಳು, 80 ಕುಡಿಯುವ ನೀರು ವಿತರಣೆ ಮಾಡುವ ಕೇಂದ್ರಗಳು, ಎರಡು ಆಂಬ್ಯುಲೆನ್ಸ್‌, 34 ಊಟದ ಸ್ಟಾಲ್‌ಗ‌ಳು, ಒಂದು ಸಾವಿರ ಚಿಕ್ಕ ಚಿಕ್ಕ ಹೊಟೇಲ್‌ಗ‌ಳು, 60 ಅಡಿ ಸುತ್ತಳತೆಯ ಎಂಟು ಕೃಷಿ ಹೊಂಡ ತೋಡಲಾಗಿದೆ. ಕುಡಿಯುವ ನೀರಿಗಾಗಿ 1 ಕೋಟಿ ರೂ. ಮೊತ್ತದ ಒಂದು ಲೀಟರ್‌ನ ಶುದ್ಧ ಕುಡಿಯುವ ನೀರಿನ ಬಾಟಲ್‌ಗ‌ಳನ್ನು ಖರೀದಿಸಲಾಗಿದೆ.

ಸಮ್ಮೇಳನಕ್ಕೆ ಕಲಾದಗಿಯ ಸುಮಾರು 78 ರೈತರ, 630 ಎಕರೆಯಷ್ಟು ಭೂಮಿಯನ್ನೇ ಬಳಕೆ ಮಾಡಲಾಗುತ್ತಿದೆ. ಈ ಭೂಮಿಯಲ್ಲಿ ಒಟ್ಟು 16 ಕೊಳವೆ ಬಾವಿಗಳಿವೆ. ಆ ನೀರನ್ನು ಎಂಟು ಕೃಷಿ ಹೊಂಡಗಳಿಗೆ ತುಂಬಿಸಿಕೊಂಡು, 3 ದಿನ ಉಪಯೋಗಿಸಲಾಗುವುದು. ಪ್ರತಿದಿನ ಶಾಖಾಹಾರಿ ಊಟ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇಲ್ಲಿ ಹಾಕಲಿರುವ ಹೊಟೇಲ್‌ಗ‌ಳಿಗೂ ಮಾಂಸಾಹಾರ ನೀಡದಂತೆ ಸೂಚನೆ ನೀಡಲಾಗಿದೆ. ಒಟ್ಟಾರೆ, ಇದೊಂದು ಸೌಹಾರ್ದಯುತ ಜೀವನಕ್ಕೆ ಬೋಧನೆ ಮಾಡುವ ಧರ್ಮ ಸಮ್ಮೇಳನ ಆಗಿದೆ ಎಂದು ಮೋಮಿನ್‌ ತಿಳಿಸಿದರು.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.