ಮತಾಂತರ ನಿಷೇಧ ಕಾಯಿದೆ ಜಾರಿಗೆ ಮುತಾಲಿಕ್ ಆಗ್ರಹ
Team Udayavani, Nov 12, 2021, 9:30 PM IST
ಬೆಂಗಳೂರು: ಮತಾಂತರ ನಿಷೇಧ ಕಾಯಿದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬ್ರಿಟಿಷರ ಕಾಲದಿಂದ ಆರಂಭವಾಗಿರುವ ಮತಾಂತರ ಈಗಲೂ ದೇಶಾದ್ಯಂತ ನಡೆಯುತ್ತಿದೆ. ಮತಾಂತರ ನಿಷೇಧ ಮಾಡಲಾಗುತ್ತದೆ ಎಂಬ ವಿಚಾರ ಗೊತ್ತಾದ ಬಳಿಕ ಪಾದ್ರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿರುವುದು ಸರಿಯಲ್ಲ ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದರು.
ಬಿಟ್ಕಾಯಿನ್:
ಬಿಟ್ಕಾಯಿನ್ ವಿಚಾರ ಪ್ರಸ್ತಾವಿಸಿದ ಮುತಾಲಿಕ್, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಪರಸ್ಪರ ದೂಷಣೆಯಿಂದ ಸತ್ಯ ಹೊರಬರದು. ಪ್ರಕರಣದಲ್ಲಿ ಯಾರಿದ್ದರೂ ಅವರನ್ನು ಹೊರಗೆಳೆಯಬೇಕು. ಯುವಶಕ್ತಿಯನ್ನು ಹಾಳು ಮಾಡುತ್ತಿರುವ ಡ್ರಗ್ ಮಾಫಿಯಾದಂತೆ ಈ ಪ್ರಕರಣವನ್ನು ಮುಚ್ಚಿಹಾಕಬಾರದು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ