ಶಿಕಾರಿಪುರದಿಂದಲೇ ನನ್ನ ಸ್ಪರ್ಧೆ: ಬಿಎಸ್‌ವೈ


Team Udayavani, Oct 7, 2017, 10:00 AM IST

07-18.jpg

ಬನಹಟ್ಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಿಂದ, ಅದರಲ್ಲೂ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಡೆದಿದ್ದ ಊಹಾಪೋಹಗಳಿಗೆ ಜಿಲ್ಲಾ ನೇಕಾರರ ಸಭೆಯಲ್ಲಿ ಸ್ಪಷ್ಟನೆ ದೊರೆತಂತಾಗಿದ್ದು, ಶಿಕಾರಿಪುರದಲ್ಲೇ ಸ್ಪರ್ಧಿಸುವುದಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ನಗರದ ಎಸ್‌ಆರ್‌ಎ ಮೈದಾನದಲ್ಲಿ ನಡೆದ ಜಿಲ್ಲಾ ನೇಕಾರರ ಸಮಾವೇಶದಲ್ಲಿ ಮಾತನಾಡಿದ ಅವರು, “ನಿರೀಕ್ಷೆಗೂ ಮೀರಿ ಜನಸ್ತೋಮ ಜಮಾವಣೆಯಾಗಿದೆ. ಸಿದ್ದು ಸವದಿಯವರನ್ನು 25 ಸಾವಿರ ಮತಗಳಿಂದ ಗೆಲ್ಲಿಸಿ ಕೊಟ್ಟು ನಿಮ್ಮ ಸೇವೆ ಮಾಡುವ ಅವಕಾಶ ಮಾಡಿಕೊಡಿ. ನಾನೇ ಈ ಕ್ಷೇತ್ರದ ಪ್ರತಿನಿಧಿ ಯೆಂದು ಈ ಕ್ಷೇತ್ರದಲ್ಲಿ ಏನೇನು ಕೆಲಸಗಳು ಆಗಬೇಕಾಗಿದೆಯೋ ಅದನ್ನೆಲ್ಲಾ ಮಾಡಿಕೊಡುತ್ತೇನೆ. ಅಲ್ಲದೆ, ಶಿಕಾರಿಪುರಕ್ಕೆ ಎಷ್ಟು ಆದ್ಯತೆ ಕೊಡುತ್ತೇನೆಯೋ ಅದಕ್ಕಿಂತಲೂ ಹೆಚ್ಚು ಆದ್ಯತೆ ಕೊಡುತ್ತೇನೆಂದು ಪ್ರಮಾಣ ಮಾಡುತ್ತೇನೆ’ ಎಂದು ತೇರದಾಳ ಮತ ಕ್ಷೇತ್ರದಲ್ಲಿ ಸ್ಪ ರ್ಧಿಸುವ ವಿಚಾರಕ್ಕೆ ಬಿಎಸ್‌ವೈ ಇತಿಶ್ರೀ ಹಾಡಿದರು.

“ನಾವು ಅ ಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ನೇಕಾರರ ಸಾಲ ಮನ್ನಾ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನೇಕಾರರನ್ನು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಪಡಿಸುವಲ್ಲಿ ಬಿಜೆಪಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತದೆ. 2018ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಮೊದಲ ಬಜೆಟ್‌ನಲ್ಲೇ ರಾಜ್ಯದ ನೇಕಾರರ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸುತ್ತೇವೆ. ಅಲ್ಲದೆ, ನೇಕಾರರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ಬಿಜೆಪಿ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ’ ಎಂದು ಭರವಸೆ ನೀಡಿದರು. 1970ರಲ್ಲಿ ಜನಸಂಘ, ಬನಹಟ್ಟಿಯಲ್ಲಿ ಪ್ರಥಮ ವಾಗಿ ನೇಕಾರ ಸಮಾವೇಶ ಆಯೋಜಿಸಿತ್ತು. ಬಳಿಕ 1988ರಲ್ಲಿ ನಾನು, ಕೇಂದ್ರ ಸಚಿವ ಅನಂತಕುಮಾರ ಜೊತೆಗೆ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಜರುಗಿದ ನೇಕಾರ ಸಮಾವೇಶದಲ್ಲಿ ಭಾಗಿಯಾಗಿದ್ದೆ ಎಂದು ಯಡಿಯೂರಪ್ಪ ಸ್ಮರಿಸಿದರು.

ವಿಪಕ್ಷ ನಾಯಕ ಈಶ್ವರಪ್ಪ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ಶ್ರೀರಾಮುಲು, ಪಿ.ಸಿ. ಗದ್ದಿಗೌಡರ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ವಿಧಾನ ಪರಿಷತ್‌ ಸದಸ್ಯರಾದ ಹನುಮಂತ ನಿರಾಣಿ, ಮಾಜಿ ಶಾಸಕರಾದ ಸಿದ್ದು ಸವದಿ ಇತರ ನಾಯಕರು ಉಪಸ್ಥಿತರಿದ್ದರು.

ಬಿಜೆಪಿಗೆ ಸೇರ್ಪಡೆ: ಇದೇ ವೇಳೆ, ಪ್ರಭಾವಿ ನಾಯಕರಾದ ಸುರೇಶ ಚಿಂಡಕ, ಧರೆಪ್ಪ ಉಳ್ಳಾಗಡ್ಡಿ, ಪ್ರಭು ವಗ್ಗ, ಮಹಾಲಿಂಗಪುರದ ಮಹಾ ಲಿಂಗಪ್ಪ ಕೋಳಿಗುಡ್ಡ ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಜನ ಕಾರ್ಯ ಕರ್ತರು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡರು.

2013ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರ ಸೋಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಪರಮೇಶ್ವರ್‌ ಸೋಲಿಗೆ ನಾನು ಕಾರಣ ಅಲ್ಲ ಎಂದು ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿ ಮೇಲೆ ಆಣೆ ಮಾಡಿ ಹೇಳಲಿ.
●ಕೆ.ಎಸ್‌.ಈಶ್ವರಪ್ಪ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ  

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.