ನನ್ನ ಡಿಕ್ಸನರಿ, ಬಿಜೆಪಿ ಡಿಕ್ಸನರಿ ಬೇರೆ, ಬೇರೆ: ಕತ್ತಿ


Team Udayavani, Aug 25, 2019, 3:05 AM IST

nanna-diksa

ಬೆಳಗಾವಿ: “ನಮ್ಮ ಡಿಕ್ಸನರಿ ನಮಗೆ. ಅವರ ಡಿಕ್ಸನರಿ ಅವರಿಗೆ. ನಾನು ಮತದಾರರ ಆಶೀರ್ವಾದದಿಂದ ಹೆಚ್ಚು ಬಾರಿ ಶಾಸಕನಾಗಿ ಹಿರಿಯ ಸದಸ್ಯನಾಗಿದ್ದೇನೆ. ಇದು ನನ್ನ ಡಿಕ್ಸನರಿ. ಬಿಜೆಪಿ ಅವರದ್ದು ಸಂಘ ಪರಿವಾರ. ನಿಷ್ಠಾವಂತರು ಎಂದು ಏನೇನೋ ಇದೆ. ಅದು ಅವರ ಡಿಕ್ಸನರಿ’.

ಇದು ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಅವರ ನೇರ ನುಡಿ. ಬೆಂಗಳೂರಿನಿಂದ ಶನಿವಾರ ಬೆಳಗಾವಿಗೆ ಆಗಮಿಸಿದ ಉಮೇಶ ಕತ್ತಿ “ಉದಯವಾಣಿ’ ಜತೆ ಮಾತನಾಡಿ, ನಮ್ಮ ಕ್ಷೇತ್ರದ ಮತದಾರರು ಪ್ರತಿ ಬಾರಿ ಆಶೀರ್ವಾದ ಮಾಡಿದ್ದರಿಂದ ಹೆಚ್ಚು ಬಾರಿ ಶಾಸಕನಾಗಿದ್ದೇನೆ. ಅವರಿಂದ ಹಿರಿಯ ಶಾಸಕ ಪಟ್ಟ ಸಿಕ್ಕಿದೆ. ಆದರೆ, ಇದು ಬಿಜೆಪಿಯಲ್ಲಿ ಪರಿಗಣನೆಗೆ ಬರುತ್ತಿಲ್ಲ ಎಂದರು.

“ಮುಖ್ಯವಾಗಿ ಹಿರಿಯ ಶಾಸಕರನ್ನು ಮಂತ್ರಿ ಮಾಡಬೇಕು ಎಂಬುದು ಬಿಜೆಪಿಯಲ್ಲಿ ಬರೆದಿಲ್ಲ. ಅದೇನೋ ಸಂಘ ಪರಿವಾರ, ನಿಷ್ಠಾವಂತರು ಎಂದು ಏನೇನೋ ಇದೆ. ನಾನು ಮಂತ್ರಿಗಿರಿಗೆ ಎಂದೂ ಆಸೆ ಪಟ್ಟವನಲ್ಲ. ನಮ್ಮ ಜೀವನ ಅದರ ಮೇಲೆಯೇ ನಿಂತಿಲ್ಲ. ಮಂತ್ರಿಗಿರಿ ಸಿಗದೇ ಇದ್ದರೆ ನನಗೆ ಮನೆ ಇದೆ. ಹೊಲ ಇದೆ. ಯಾವುದಕ್ಕೂ ಚಿಂತೆ ಇಲ್ಲ’ ಎಂದರು.

“ಮಂತ್ರಿಯಾದರೆ ಆಯಿತು, ಇಲ್ಲದಿದ್ದರೆ ಇಲ್ಲ. ಶಾಸಕನಾಗಿದ್ದರಿಂದ ಇನ್ನೂ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೇನೆ. ಶಾಸಕರೇ ಆಗಿರದವರು ಮಂತ್ರಿ ಆಗಿದ್ದಾರೆ. ನಾನು ಶಾಸಕನಾಗಿದ್ದರಿಂದ ಸಹಜವಾಗಿಯೇ ಮಂತ್ರಿಗಿರಿ ಸಿಗಬಹುದು ಎಂಬ ನಿರೀಕ್ಷೆ ಇದೆ.

ಆದರೆ, ಇದನ್ನು ನಾನು ಖಂಡಿತವಾಗಿಯೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮುಂದಿನ ವಾರ ಮತ್ತೆ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಕಾಯಿರಿ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ. ಕಾಯುತ್ತೇವೆ. ನಾನು ಹಾಗೂ ಬಾಲಚಂದ್ರ ಜಾರಕಿಹೊಳಿ ಸಚಿವರಾಗಬಹುದು. ಅವಕಾಶ ಇಲ್ಲದಿದ್ದರೆ ನಾವು ಮಂತ್ರಿ ಆಗುವುದಿಲ್ಲ. ಆದರೆ, ಇದರಿಂದ ಖಂಡಿತ ಅಸಮಾಧಾನ ಇಲ್ಲ’ ಎಂದರು.

“ನಾನು ಹೊನ್ನಾಳಿ ಹುಲಿ’
ಸಿರಿಗೆರೆ (ಚಿತ್ರದುರ್ಗ): “ನಾನು ಹೊನ್ನಾಳಿ ಹುಲಿ, ಯಾವು ದಕ್ಕೂ ಜಗ್ಗುವವನಲ್ಲ. ಮಣ್ಣಿನ ಹೆಂಡೆಯಲ್ಲ, ಕಲ್ಲು ಬಂಡೆ ಇದ್ದಂತೆ. ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಬೇಡುವುದಿಲ್ಲ’ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, “ನನಗೆ ಸಚಿವ ಸ್ಥಾನದ ನಿರೀಕ್ಷೆಯೇ ಇಲ್ಲ. ಮಂತ್ರಿಗಿರಿಗಾಗಿ ಅಪೇಕ್ಷೆ ಇದ್ದಿದ್ದರೆ ನೇರವಾಗಿ ಸಿಎಂ ಯಡಿಯೂರಪ್ಪನವರ ಬಳಿ ಹೋಗಿ ಪಟ್ಟು ಹಿಡಿದು ಕೂರುತ್ತಿದ್ದೆ.

ನನಗೆ ಸದ್ಯಕ್ಕೆ ಸಚಿವ ಸ್ಥಾನದ ಅಗತ್ಯವಿಲ್ಲ. ಅಲ್ಲದೆ, ಯಡಿಯೂರಪ್ಪ ಅವರಿಗೆ ದ್ರೋಹ ಮಾಡುವುದಿಲ್ಲ’ ಎಂದರು. ಈಗ ಮಾತನಾಡುವವರು ಯಡಿಯೂರಪ್ಪನವರು ಸಂಕಷ್ಟ ದಲ್ಲಿದ್ದಾಗ ಮಾತನಾಡಲಿಲ್ಲ. ಈಗ ಸಚಿವರಾಗಿ ನಮಗೆ ನೀತಿ ಪಾಠ ಹೇಳುತ್ತಿದ್ದಾರೆ ಎಂದು ಟಾಂಗ್‌ ನೀಡಿದರು.

ಆಂಜನೇಯ ವಿರುದ್ಧ ವಾಗ್ಧಾಳಿ: ಬಿಜೆಪಿ ಹೈಕಮಾಂಡ್‌ ಬಳಿ ಯಡಿಯೂರಪ್ಪ ಅಸಹಾಯಕರಾಗಿದ್ದಾರೆಂಬ ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಆಂಜನೇಯ ಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರ ಬಾಲವಾಗಿದ್ದರು. ಯಡಿಯೂರಪ್ಪನವರ ಬಗ್ಗೆ ಆಂಜನೇಯಗೇನು ಗೊತ್ತಿದೆ ಎಂದು ಏಕವಚನದಲ್ಲಿ ವಾಗ್ಧಾಳಿ ನಡೆಸಿದರು.

ನಾನು ಹಾಗೂ ಲಕ್ಷ್ಮಣ ಸವದಿ ದಿನಾಲೂ ಮಾತನಾಡುತ್ತೇವೆ. ಅವನು 3 ಬಾರಿ ಕರೆ ಮಾಡಿದರೆ, ನಾನು ನಾಲ್ಕು ಬಾರಿ ಕರೆ ಮಾಡಿ ಮಾತನಾಡುತ್ತೇನೆ. ಜಿಲ್ಲೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಎಲ್ಲ ನಾಯಕರು ಕೂಡಿಯೇ ಇರುತ್ತೇವೆ.
-ಉಮೇಶ ಕತ್ತಿ, ಬಿಜೆಪಿ ಶಾಸಕ

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.