ಬಿಜೆಪಿ-ಜೆಡಿಎಸ್ಗೆ ನನ್ನ ಕಂಡರೆ ಭಯ: ಸಿದ್ದು
Team Udayavani, Dec 9, 2019, 3:05 AM IST
ಬೆಳಗಾವಿ: “ಬಿಜೆಪಿ ಮತ್ತು ಜೆಡಿಎಸ್ಗೆ ನನ್ನ ಕಂಡರೆ ಬಹಳ ಭಯ. ಅದೇ ಕಾರಣಕ್ಕೆ ಅವರು ಪದೇಪದೆ ನನ್ನ ಹೆಸರು ಪ್ರಸ್ತಾಪ ಮಾಡುತ್ತಾರೆ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ನನ್ನ ಕಂಡರೆ ಅವರಿಗೆ ಭಯ ಅಥವಾ ಪ್ರೀತಿ ಇರಬೇಕು. ಹೀಗಾಗಿ, ಮೇಲಿಂದ ಮೇಲೆ ನನ್ನ ಹೆಸರು ಬರುತ್ತದೆ’ ಎಂದರು.
ಸಮೀಕ್ಷೆ ನಂಬಲಾರೆ: ಉಪಚುನಾವಣೆಯ ಸಮೀಕ್ಷೆಗಳನ್ನು ನಾನು ನಂಬುವುದಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸಮೀಕ್ಷೆಗಳು ಏನಾಗಿವೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಅಂದಾಜಿನ ಮೇಲೆ ಸಮೀಕ್ಷೆ ಮಾಡಿರುತ್ತಾರೆ. ಹೀಗಾಗಿ, ಅದರ ಮೇಲೆ ನನಗೆ ನಂಬಿಕೆ ಇಲ್ಲ. ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.
ಉಪಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಕಥೆ ಮುಗಿಯುತ್ತೆ ಎಂಬ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅವರಿಬ್ಬರೂ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇನೆ ಎನ್ನುವುದು ಕೇವಲ ಭ್ರಮೆ ಎಂದರು.
ಕೇಂದ್ರದಿಂದ ಜಿಎಸ್ಟಿ ಬಾಕಿ: ನೆರೆ ಪರಿಹಾರ ವಿತರಣೆಯಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಮೊದಲು ಹತ್ತು ಸಾವಿರ, ನಂತರ ಒಂದು ಲಕ್ಷ ಕೊಟ್ಟು ಕೈತೊಳೆದುಕೊಂಡಿದ್ದಾರೆ. ಅನೇಕ ಸಂತ್ರಸ್ತರಿಗೆ ಈಗಲೂ ಪರಿಹಾರ ಹಾಗೂ ರೈತರಿಗೆ ಬೆಳೆಹಾನಿ ಪರಿಹಾರ ಬಂದಿಲ್ಲ. ಕೇಂದ್ರ ಸರ್ಕಾರದಿಂದ ಜಿಎಸ್ಟಿಯ 5,600 ಕೋಟಿ ರೂ.ರಾಜ್ಯಕ್ಕೆ ಬರಬೇಕು. ನಮ್ಮ ಪಾಲನ್ನು ಕೇಂದ್ರ ಸರ್ಕಾರ ಇನ್ನೂ ಕೊಟ್ಟಿಲ್ಲ. ಅದರಿಂದ ಬಹಳ ತೊಂದರೆಯಾಗಿದೆ ಎಂದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ 8ರಿಂದ 10 ಸ್ಥಾನ ಗೆಲ್ಲಲಿದೆ. ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮನೆಗೆ ಹೋಗುತ್ತಾರೆಂದು ನಾನು ಹೇಳಿಲ್ಲ. ಬಿಜೆಪಿ ಸರ್ಕಾರ ಮನೆಗೆ ಹೋಗುತ್ತದೆ ಎಂದು ಹೇಳಿದ್ದೇನೆ. ಆದರೆ, ನಾನೇ ಮನೆಗೆ ಹೋಗುತ್ತೇನೆಂದು ಕೆಲ ಬಿಜೆಪಿಗರು ಟೀಕಿಸಿದ್ದಾರೆ.
-ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ