ನನ್ನ ಆದ್ಯತೆ ಕೋವಿಡ್ ನಿಯಂತ್ರಣ: ಬಿಎಸ್‌ವೈ


Team Udayavani, May 28, 2021, 7:10 AM IST

ನನ್ನ ಆದ್ಯತೆ ಕೋವಿಡ್ ನಿಯಂತ್ರಣ: ಬಿಎಸ್‌ವೈ

ಬೆಂಗಳೂರು: ಕೋವಿಡ್ ಮಧ್ಯೆಯೇ ರಾಜ್ಯದಲ್ಲಿ ನಡೆಯುತ್ತಿರುವ “ಸಿಎಂ ಬದಲಾವಣೆ ಸುದ್ದಿ’ಗಳ ಬಗ್ಗೆ ಗರಂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, “ದಿಲ್ಲಿಗೆ ಹೋದವರಿಗೆ ವರಿಷ್ಠರು ಸರಿಯಾದ ಉತ್ತರವನ್ನೇ ನೀಡಿ ಕಳುಹಿಸಿದ್ದಾರೆ’ ಎಂದಿದ್ದಾರೆ. ಆ ಮೂಲಕ ತಮ್ಮದೇನಿದ್ದರೂ ಕೊರೊನಾ ನಿಯಂತ್ರಣದ  ಕೆಲಸ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆಗಾಗಿ ವರಿಷ್ಠರ ಮಟ್ಟದಲ್ಲಿ ಲಾಬಿ ನಡೆಸುತ್ತಿರುವವರು ಮತ್ತು ದಿಲ್ಲಿಯ ಕೆಲವು ವರಿಷ್ಠರ ವಿರುದ್ಧವೂ ಸಿಎಂ ತಮ್ಮ ಆಪ್ತರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಪಕ್ಷದಲ್ಲಿ ಇನ್ನೂ ಪ್ರಬಲರು ಎಂಬ ಸಂದೇಶವನ್ನೂ ಆಪ್ತರ ಮೂಲಕವೇ ರವಾನಿಸಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಇದುವರೆಗೆ  ಮೌನವಾಗಿದ್ದ ಸಿಎಂ, ಇದೇ ಮೊದಲ ಬಾರಿಗೆ ಉತ್ತರ ನೀಡಿದ್ದಾರೆ. “ಈಗೇನಿದ್ದರೂ ನನ್ನ ಮುಂದೆ ಇರುವುದು ಕೊರೊನಾ ಪರಿಸ್ಥಿತಿ ನಿರ್ವಹಣೆ. ಜನರ ಹಿತ ಕಾಪಾಡುವುದು ನನ್ನ ಆದ್ಯತೆ. ಯಾರು ಎಲ್ಲಿಗೆ ಹೋಗಿದ್ದರೋ ಅವರಿಗೆ ವರಿಷ್ಠರು ತಕ್ಕ ಉತ್ತರ ಕೊಟ್ಟು ಕಳುಹಿಸಿದ್ದಾರೆ’ ಎಂದು  ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕುರಿತು ಬಹಿರಂಗ ವಾಗಿ ಚರ್ಚಿಸುವುದಿಲ್ಲ ಎಂದರು.

ಬೆಂಬಲಿಗರ ಬಲ :

ಸಿಎಂ ಬದಲಾವಣೆಗಾಗಿ ಲಾಬಿ ನಡೆಸುತ್ತಿರುವವರ ವಿರುದ್ಧ ಸಿಎಂ ಬೆಂಬಲಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ಧಾಳಿ ನಡೆಸಿದ್ದಾರೆ. ಮೆಗಾ ಸಿಟಿ ಯೋಜನೆಯ ವಂಚನೆ ಮತ್ತು ಅವರ ಹಿನ್ನೆಲೆಯ ಬಗ್ಗೆ ವರಿಷ್ಠರ ಗಮನಕ್ಕೆ ತರಲು ಹಾಗೂ ಸಂಪುಟದಿಂದ ಅವರನ್ನು ಕೈ ಬಿಡುವಂತೆ ಒತ್ತಾಯಿಸಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ತೇರದಾಳ ಶಾಸಕ ಸಿದ್ದು ಸವದಿ ಕೂಡ ಯಡಿಯೂರಪ್ಪ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಮೂರು ಪಕ್ಷಗಳ ಸರಕಾರ :

ರಾಜ್ಯದಲ್ಲಿ ಶುದ್ಧ ಬಿಜೆಪಿ ಸರಕಾರವಿಲ್ಲ, ಜೆಡಿಎಸ್‌-ಕಾಂಗ್ರೆಸ್‌ ಮಿಶ್ರಿತ ಬಿಜೆಪಿ ಸರಕಾರ ಇದೆ ಎಂದು ಸಿ.ಪಿ. ಯೋಗೇಶ್ವರ್‌  ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವೈಯಕ್ತಿಕ ವಾಗಿ ನನಗೆ ಕೆಲವು ವಿಷಯಗಳಲ್ಲಿ ನೋವು ಉಂಟಾಗಿದ್ದು, ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ನನ್ನ ಖಾತೆಯಲ್ಲಿ ನನ್ನ ಮಗ ನಿಗೆ ಅಧಿಕಾರ ಚಲಾಯಿಸಲು ಬಿಡುವುದಿಲ್ಲ. ಹಾಗೆಯೇ ಸಿಎಂ ಹೆಸರಿನಲ್ಲಿ ಮತ್ತೂಬ್ಬರು ಅಧಿಕಾರ ಚಲಾಯಿಸುವುದನ್ನು ಸಹಿಸುವುದಿಲ್ಲ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಅಸಮಾಧಾನ ಪ್ರದರ್ಶಿಸಿದ್ದಾರೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.