ಮೈಸೂರು ಅರಮನೆ ಪ್ರವೇಶದರ 50 ರೂ.ಗೆ ಏರಿಕೆ


Team Udayavani, May 14, 2017, 3:45 AM IST

mysore.jpg

-5 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ
-ಪ್ರವೇಶದರ ಏಕರೂಪ ನಿಗದಿ
ಮೈಸೂರು:
ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ದರವನ್ನು ಏಕರೂಪಗೊಳಿಸಲು ತೀರ್ಮಾನಿಸಲಾಗಿದೆ.
ಮೈಸೂರು ಅರಮನೆ ಮಂಡಳಿ ಅಧ್ಯಕ್ಷರೂ ಆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಠಿಯಾ ಅಧ್ಯಕ್ಷತೆಯಲ್ಲಿ ನಡೆದ ಅರಮನೆ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಭಾರತೀಯರಿಗೆ ನಿಗದಿಪಡಿಸಿದ್ದ ಪ್ರವೇಶ ದರವನ್ನು 40 ರೂ.ಗಳಿಂದ 50 ರೂ.ಗೆ ಹೆಚ್ಚಿಸಲಾಗಿದೆ. ವಿದೇಶಿಯರಿಗೂ ಸಹಾ ಇದೇ ದರ ಅನ್ವಯವಾಗಲಿದೆ. ಮಕ್ಕಳಿಗೆ ನಿಗದಿಪಡಿಸಲಾಗಿದ್ದ 10 ರೂ. ಪ್ರವೇಶ ದರವನ್ನು ಹಾಗೆಯೇ ಮುಂದುವರಿಸಲು ಹಾಗೂ ಐದು ವರ್ಷದ ಒಳಗಿನ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಸಭೆ ತೀರ್ಮಾನಿಸಿದೆ.

ಅರಮನೆ ಆವರಣದಲ್ಲಿ ಆಯೋಜಿಸಲಾಗುವ ಧ್ವನಿ-ಬೆಳಕು ಕಾರ್ಯಕ್ರಮವು ಪ್ರಸ್ತುತ ಕನ್ನಡದಲ್ಲಿ ಇದ್ದು, ಈ ಕಾರ್ಯಕ್ರಮವನ್ನು ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲೂ ಸಹಾ ಎರಡು ತಿಂಗಳೊಳಗೆ ಏರ್ಪಡಿಸಲು ಅರಮನೆಯ ಉದ್ಯಾನಗಳ ಮೇಲುಸ್ತುವಾರಿಗೆ ಸಮಿತಿ ರಚಿಸುವುದು, ಹೆಚ್ಚುವರಿಯಾಗಿ 1000 ಎಲ್‌ಪಿಎಚ್‌ ಸಾಮರ್ಥ್ಯದ ನೀರಿನ ಘಟಕ ಸ್ಥಾಪಿಸಲು ತೀರ್ಮಾನಿಸಲಾಯಿತು.

ಪ್ರತಿ ವರ್ಷ ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳಲ್ಲಿ ಯುಗಾದಿ ಉತ್ಸವ, ಜೂನ್‌ನಲ್ಲಿ ಅಂತರ ರಾಷ್ಟ್ರೀಯ ಯೋಗ‌ ದಿನಾಚರಣೆ, ಡಿಸೆಂಬರ್‌ನಲ್ಲಿ ಫ‌ಲಪುಷ್ಪ$ಪ್ರದರ್ಶನ ಹಾಗೂ ಅರಮನೆಯ ಪ್ರಾಂಗಣದಲ್ಲಿ ಸಾಂಸಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಅರಮನೆ ಮಂಡಳಿ ಕಚೇರಿಯ ಕಡತ ನಿರ್ವಹಣೆಗೆ ಇ-ಕಚೇರಿ ತಂತ್ರಾಂಶ ಅನುಷ್ಠಾನ, ಅರಮನೆಯಲ್ಲಿ 3-ಡಿ ಪೊ›ಜೆಕ್ಷನ್‌ ಕೈಗೊಳ್ಳಲು ವಿಸ್ತತ ಯೋಜನಾ ವರದಿ ಸಿದ್ಧಪಡಿಸುವುದು, ಅರಮನೆ ಆವರಣದಲ್ಲಿ ಅಗ್ನಿ ಶಾಮಕ ನಿಯಂತ್ರಣ ಘಟಕ ಸ್ಥಾಪಿಸಲು ತೀರ್ಮಾನಿಸಲಾಯಿತು.

ಚಾಮುಂಡಿ ಬೆಟ್ಟದಲ್ಲಿರುವಂತೆ ಸಿಐಐ ವತಿಯಿಂದ ಸಿಎಸ್‌ಆರ್‌ ಯೋಜನೆಯಡಿ ಪಾರಂಪರಿಕ ಕಟ್ಟಡವಾದ ಅರಮನೆಯ ವಿನ್ಯಾಸಕ್ಕೆ ಧಕ್ಕೆಯಾಗದ ರೀತಿಯಲ್ಲಿ ಹೈಟೆಕ್‌ ಹಸಿರು ಶೌಚಾಲಯಗಳನ್ನು ಪ್ರಾಚ್ಯವಸ್ತು ಮತ್ತು ಪರಂಪರೆ ಇಲಾಖೆಯಿಂದ ಅನುಮತಿ ಪಡೆದು ನಿರ್ಮಿಸಲು ಸಭೆ ನಿರ್ಧರಿಸಿತು.

ಇತ್ತೀಚೆಗೆ ಅರಮನೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಹಚ್ಚುತ್ತಿರುವುದರಿಂದ, ಪ್ರತಿ ದಿನ ಧ್ವನಿ-ಬೆಳಕು ಕಾರ್ಯಕ್ರಮದ ನಂತರ, ಅರಮನೆ ವಿದ್ಯುತ್‌ ದೀಪಗಳನ್ನು 5 ನಿಮಿಷಗಳ ಬದಲಿಗೆ 15 ನಿಮಿಷ ಬೆಳಗಲು ಹಾಗೂ ಭಾನುವಾರ ಮತ್ತು ಸರ್ಕಾರಿ ರಜಾ ದಿನಗಳಂದು 1 ಗಂಟೆ ಬೆಳಗಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂಡಳಿ ಸದಸ್ಯರುಗಳಾದ ಲೋಕೋಪಯೋಗಿ ಇಲಾಖೆ, ಕಾನೂನು ಇಲಾಖೆ ಕಾರ್ಯದರ್ಶಿಗಳು, ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯಗಳ ನಿರ್ದೇಶನಾಲಯದ ಆಯುಕ್ತರು, ಅರಮನೆ ಮಂಡಳಿ ಕಾರ್ಯನಿರ್ವಾಹಕ ನಿರ್ದೇಶಕರಾದ ಜಿಲ್ಲಾಧಿಕಾರಿ ಡಿ.ರಂದೀಪ್‌, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.