Mysuru Dasara; ಭಾರೀ ಮಳೆ ನಡುವೆಯೇ ಮರದ ಅಂಬಾರಿ ತಾಲೀಮು ಆರಂಭ
ಅಭಿಮನ್ಯು ಆನೆ ನೂರಕ್ಕೆ ನೂರು ಫಿಟ್
Team Udayavani, Oct 9, 2023, 8:35 PM IST
ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದ್ದು,ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಸೋಮವಾರ ಸಂಜೆ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಯಿತು.
ಮರದ ಅಂಬಾರಿ ಕಟ್ಟುವ ವೇಳೆಗೆ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಒಂದು ಗಂಟೆ ತಡವಾಗಿ ಪೂಜೆ ನೆರವೇರಿಸಲಾಯಿತು. ಸತತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಯ ನಡುವೆಯೇ ಅಭಿಮನ್ಯುವಿಗೆ ಮರದ ಅಂಬಾರಿ ಕಟ್ಟಿ ತಾಲೀಮುಆರಂಭಿಸಲಾಯಿತು.
ಸಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಂಬಾರಿ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಅರಮನೆ ಆವರಣದ ಮೂಲಕ ಸಾಗಿ ಬಲರಾಮ ದ್ವಾರದ ಮೂಲಕ ಹೊರಬಂದು ಆನೆಗಳು. ತಾಲೀಮು ನಡೆಸಿದವು.
ಈ ಬಾರಿಯೂ ಅಂಬಾರಿ ಹೊರುವ ಫೇವರಿಟ್ ಆಗಿರುವ ಅಭಿಮನ್ಯು ಆನೆಗೆ ಅರಣ್ಯ ಇಲಾಖೆ ಸಿಬಂದಿ ಮರದ ಅಂಬಾರಿ ಕಟ್ಟಿದರು.ಅಭಿಮನ್ಯು ಮಳೆಯ ನಡುವೆಯೂ ಮರದ ಅಂಬಾರಿ ಹೊತ್ತು ಚುರುಕಿನಿಂದ ಸಾಗಿದ.ಅಭಿಮನ್ಯು ಜತೆಗೆ ಮತ್ತೆರಡು ಆನೆಗಳಾದ ಮಹೇಂದ್ರ ಮತ್ತು ಧನಂಜಯನಿಗೆ ಮರದ ಅಂಬಾರಿ ತಾಲೀಮು ನಡೆಸಲಾಗುತ್ತಿದೆ.
ನೇತೃತ್ವ ವಹಿಸಿದ್ದ ಡಿಸಿಎಫ್ ಸೌರಭ್ ಕುಮಾರ್, ಮೊದಲ ಬಾರಿ ದಸರಾಗೆ ಬಂದಿರುವ 4 ಆನೆಗಳೂ ಅತ್ಯತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ.ಸರತಿ ಸಾಲಿನಲ್ಲಿ ಸಾಗುವುದು, ಸೌಮ್ಯತೆ ಎಲ್ಲವೂ ಸರಿ ಇದೆ.ಅಂಬಾರಿ ಹೊರಲು ಅಭಿಮನ್ಯು ನೂರಕ್ಕೆ ನೂರು ಫಿಟ್ ಆಗಿದ್ದಾನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ