ಚಮಚಗಳನ್ನು ದೂರ ಇಟ್ಟು ಕೆಲಸ ಮಾಡಿ : ನೂತನ ಸಿಎಂಗೆ ನಾಗತಿಹಳ್ಳಿ ಸಲಹೆ
Team Udayavani, Jul 30, 2021, 2:50 PM IST
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ದೇಶಾದ್ಯಂತ ಹಾಗು ರಾಜ್ಯದಲ್ಲಿ ಶುಭಾಶಯಗಳ ಮಹಾಪೂತರವೇ ಹರಿದು ಬರುತ್ತಿದೆ. ಸಿನಿಮಾ ತಾರೆಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ವಿಶ್ ಮಾಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಾಹಿತಿ ಮತ್ತು ಸಿನಿಮಾ ನಿರ್ದೇಶದ ನಾಗತಿಹಳ್ಳಿ ಚಂದ್ರಶೇಖರ್ ಟ್ವೀಟ್ ಮೂಲಕ ಶುಭ ಕೋರಿದ್ದು, ಚಮಚಗಳನ್ನು ದೂರ ಇಟ್ಟು ಕೆಲಸ ಮಾಡಿ ಎಂದು ಮನವಿ ಮಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್, ಪ್ರೀತಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮನುಷ್ಯ ಪ್ರೀತಿ ; ಸಾಹಿತ್ಯ ಪ್ರೀತಿ ; ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ. ಹೈಕಮಾಂಡ್, ಲೋಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸಮಾಡಿ. ಚಮಚೆಗಳನ್ನು ದೂರವಿಡಿ. ಸಮಾಜದ ಕಟ್ಟ ಕಡೆಯ ಜೀವರ ಬಗ್ಗೆ ಕಾಳಜಿ ಇರಲಿ. ಅಧಿಕಾರವು ಅಲ್ಪಕಾಲೀನ. ಒಳಿತಾಗಲಿ ಎಂದು ಬರೆದಿದ್ದಾರೆ.
ಕಳೆದ ಬುಧವಾರ (ಜು.28) ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಮೋದಿ, ಅಮಿತ್ ಶಾ ಸೇರಿದಂತೆ ಕನ್ನಡದ ಸ್ಟಾರ್ ನಟ ಸುದೀಪ್ ಕೂಡ ಶುಭಾಶಯ ತಿಳಿಸಿದ್ದರು.
#CMofkarnataka ಪ್ರೀತಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮನುಷ್ಯ ಪ್ರೀತಿ;ಸಾಹಿತ್ಯ ಪ್ರೀತಿ;ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ. ಹೈಕಮಾಂಡ್, ಲೋಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸಮಾಡಿ. ಚಮಚೆಗಳನ್ನು ದೂರವಿಡಿ. ಸಮಾಜದ ಕಟ್ಟ ಕಡೆಯ ಜೀವರ ಬಗ್ಗೆ ಕಾಳಜಿ ಇರಲಿ.
ಅಧಿಕಾರವು ಅಲ್ಪಕಾಲೀನ.ಒಳಿತಾಗಲಿ.— Nagathihalli Chandrashekhar (@NomadChandru) July 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ