ಯೋಗ ಕೋರ್ಸ್‌ಗೂ ನ್ಯಾಕ್‌ ಮಾನ್ಯತೆ


Team Udayavani, Feb 23, 2019, 1:45 AM IST

65.jpg

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿರುವ ಯೋಗ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಕೌನ್ಸೆಲಿಂಗ್‌ನಿಂದ (ನ್ಯಾಕ್‌) ಗುಣಮಟ್ಟ ಮುದ್ರೆ ಪಡೆಯುವ ಕಾಲ ಸನ್ನಿಹಿತವಾಗುತ್ತಿದೆ.

ಇತ್ತೀಚಿನ ವರ್ಷದಲ್ಲಿ ಯೋಗ ಹೆಚ್ಚು ಜನಪ್ರಿಯವಾಗುತ್ತಿದೆ. ಅಲ್ಲದೆ, ಜೂನ್‌ 21ರಂದು ಪ್ರತಿ ವರ್ಷ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ. ಯೋಗ ಶಿಕ್ಷಣ ಮತ್ತು ತರಬೇತಿ ನೀಡುವ ಕಾಲೇಜು, ವಿಶ್ವವಿದ್ಯಾಲಯಗಳು ದೇಶದಲ್ಲಿ ಸಾಕಷ್ಟಿವೆ. ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದೇ ಯೋಗ ಕೋರ್ಸ್‌ಗಳನ್ನು ನೀಡುತ್ತಿದ್ದರೂ, ಅದಕ್ಕೆ ನ್ಯಾಕ್‌ ರ್ಯಾಕಿಂಗ್‌ ಇರಲಿಲ್ಲ. ಈವರೆಗೂ ಯೋಗ ಕಾಲೇಜು ಮತ್ತು ವಿಶ್ವವಿದ್ಯಾಲಯವನ್ನು ನ್ಯಾಕ್‌ ಪರಿಶೀಲನೆಗೆ ಒಳಪಡಿಸುವ ವ್ಯವಸ್ಥೆಯೂ ಇರಲಿಲ್ಲ. ಇನ್ನು ಕೆಲವೇ ತಿಂಗಳಲ್ಲಿ ಯೋಗ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ನ್ಯಾಕ್‌ ಪರಿಶೀಲನಾ ವ್ಯಾಪ್ತಿಗೆ ಒಳಪಡುವ ಸಾಧ್ಯತೆಯಿದೆ.

ಯೋಗ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ನ್ಯಾಕ್‌ ವ್ಯಾಪ್ತಿಯೊಳಗೆ ಸೇರಿಸುವ ಬಗ್ಗೆ ನ್ಯಾಕ್‌ ಮಂಡಳಿಯಲ್ಲಿ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಮೂರು ವಿಧದಲ್ಲಿ ಮಾಹಿತಿ ಸಂಗ್ರಹ ಕಾರ್ಯಕ್ಕೂ ಚಾಲನೆ ಸಿಕ್ಕಿದೆ. ಯೋಗ ಕೋರ್ಸ್‌ ಗಳಿಗೆ ನ್ಯಾಕ್‌ ಮಾನ್ಯತೆ ನೀಡುವ ಸಂಬಂಧ ಇರ ಬೇಕಾದ ಗುಣ ಮಟ್ಟ ಹಾಗೂ ಕನಿಷ್ಠ ಅರ್ಹತೆಗಳ ಬಗ್ಗೆ ಕಾಲೇಜುಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ನ್ಯಾಕ್‌ ಹಿರಿಯ ಅಧಿಕಾರಿಯೊಬರು “ಉದಯವಾಣಿ’ಗೆ ಖಚಿತಪಡಿಸಿದರು.

ಕ್ವಾಲಿಟಿ ಇಂಡಿಕೇಟರ್‌ ಫ್ರೆàಮ್‌ವರ್ಕ್‌ (ಕ್ಯೂಐಎಫ್): ಯೋಗ ವಿವಿ ಮತ್ತು ಕಾಲೇಜುಗಳಿಂದ ಅಗತ್ಯ ಮಾಹಿತಿ ಪಡೆಯುವುದಕ್ಕಾಗಿ ಕ್ಯೂಐಎಫ್ ಸಿದ್ಧ ಪಡಿಸಲಾಗಿದೆ. ಯೋಗ ಕಾರ್ಯಕ್ರಮದ ಮಿಷನ್‌ ಮತ್ತು ಅದರ ಫ‌ಲಶ್ರುತಿ, ವಿದ್ಯಾರ್ಥಿಗಳ ದಾಖಲಾತಿ, ವಿದ್ಯಾರ್ಥಿಗಳ ಕಲಿಕಾ ಮತ್ತು ಬೋಧನಾ ವಿಧಾನ, ಶಿಕ್ಷಕರ ವಿದ್ಯಾರ್ಹತೆ ಮತ್ತು ಗುಣಮಟ್ಟ, ಯೋಗದಿಂದ ಆರೋಗ್ಯ, ಯೋಗ ಸಂಶೋಧನಾ ಸಾಮರ್ಥ್ಯ, ಸಂಶೋಧನಾ ಮೂಲಗಳು, ಯೋಗ ಸಂಶೋಧನೆಯಲ್ಲಿ ಹೊಸ ಆವಿಷ್ಕಾರ ಸೇರಿ ಒಟ್ಟು ಏಳು ವಿಭಾಗದಲ್ಲಿ 30ಕ್ಕೂ ಅಧಿಕ ವಿಷಯಗಳ ಮಾಹಿತಿಯನ್ನು ಕ್ಯೂಐಎಫ್ ಮೂಲಕ ಕಾಲೇಜು ಅಥವಾ ವಿವಿ ನ್ಯಾಕ್‌ಗೆ ಒದಗಿಸಬೇಕಾಗುತ್ತದೆ.

ಯೋಗ ಗುಣಮಟ್ಟ ಮೌಲ್ಯಮಾಪನದ ಮಾಹಿತಿ ಪಡೆಯಲು ಕರಡು ಅರ್ಜಿ ಮಾದರಿಯನ್ನು ತಯಾರಿಸಲಾಗಿದೆ. ಈ ಅರ್ಜಿಯಲ್ಲಿ ಕಾಲೇಜು ಅಥವಾ ವಿಶ್ವವಿದ್ಯಾಲಯದ ಪೂರ್ಣ ವಿವರ ಮತ್ತು ಯಾವ ಯಾವ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆಂಬ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.ಹಾಗೆಯೆ, ಸಂಸ್ಥೆಯಿಂದ ಕೋರ್ಸ್‌ಗಳ ಅಂಕಿ ಸಂಖ್ಯೆ ಆಧಾರಿತ ಮಾಹಿತಿ ಪಡೆಯುವುದಕ್ಕಾಗಿ ಡಾಟಾ ಕ್ಯಾಪcರ್‌ ಫಾರ್ಮೆಟ್‌ ತಯಾರಾಗಿದೆ.

ಯೋಗ ವಿಶ್ವವಿದ್ಯಾಲಯ ಹಾಗೂ ಯೋಗ ಕೋರ್ಸ್‌ ನೀಡುತ್ತಿರುವ ಕಾಲೇಜುಗಳನ್ನು ನ್ಯಾಕ್‌ ಮಾನ್ಯತೆಯ ವ್ಯಾಪ್ತಿಗೆ ಒಳಪಡಿಸುವಂತೆ ಕೋರಿ ರಾಷ್ಟ್ರದ ವಿವಿಧ ಯೋಗ ವಿಶ್ವವಿದ್ಯಾಲಯದ ಪ್ರಮುಖರು ನ್ಯಾಕ್‌ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ ನ್ಯಾಕ್‌ ಮಂಡಳಿಯು ಯೋಗ ಕಾಲೇಜುಗಳ ಮಾಹಿತಿಗಾಗಿ ಅಗತ್ಯವಾದ ಮಾದರಿಗಳನ್ನು ಸಿದಟಛಿಪಡಿಸಿದೆ.

ನ್ಯಾಕ್‌ ಉಪಯೋಗ: ಯೋಗ ಕಾಲೇಜು ಮತ್ತುವಿಶ್ವವಿದ್ಯಾಲಯಗಳಿಗೆ ನ್ಯಾಕ್‌ ಮಾನ್ಯತೆ ಇಲ್ಲದೆ ಇರುವುದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ರಾಷ್ಟ್ರೀಯ ಉತ್ಛತರ ಶಿಕ್ಷಾ ಅಭಿಯಾನ (ರುಸಾ)ದಿಂದ ನೇರವಾಗಿ ಅನುದಾನ ರುವುದಿಲ್ಲ. ನ್ಯಾಕ್‌ ಮಾನ್ಯತೆ ಪಡೆದ ನಂತರ ಯುಜಿಸಿ ಹಾಗೂ ರುಸಾ ಅನುದಾನ ಪಡೆಯಲು ಈ ಕಾಲೇಜು ಮತ್ತು ವಿವಿಗಳು ಅರ್ಹವಾಗುತ್ತವೆ. ಅಲ್ಲದೆ, ಯೋಗ ಕೋರ್ಸ್‌ನ ಗುಣಮಟ್ಟ ಕೂಡ ವಿವಿಧ ಕೋರ್ಸ್‌ಗಳ ಗುಣಮಟ್ಟಕ್ಕೆ ಸಮನಾಗುತ್ತದೆ.

ರಾಜು ಖಾರ್ವಿ ಕೊಡೇರಿ 

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.