ಸೋಂಕು ಹರಡಲು ಅವಕಾಶವಿಲ್ಲದಂತೆ ಲಾಕ್ ಡೌನ್ ಸಡಿಲಿಕೆಯಾಗಿದೆ, ಆತಂಕ ಬೇಡ: ನಳೀನ್ ಕಟೀಲ್
Team Udayavani, Apr 25, 2020, 11:55 AM IST
ಬೆಂಗಳೂರು: ಪ್ರಧಾನಿಗಳ ತಜ್ಞರ ಸಲಹಾ ಸಮಿತಿ ವರದಿ ಆಧಾರದ ಮೇಲೆ ಲಾಕ್ ಡೌನ್ ಕೆಲವೆಡೆ ಸಡಿಲಿಕೆಯಾಗಿದ್ದು, ಹಾಗಾಗಿ ಕೋವಿಡ್-19 ಸೋಂಕು ಹರಡಲು ಅವಕಾಶವಿಲ್ಲದಂತೆ ಸಡಿಲಿಕೆಯಾಗಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಕೋವಿಡ್-19 ವಿರುದ್ಧ ಹೋರಾಟದಲ್ಲಿ ತೊಡಗಿರುವ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರಿಗೆ ವಿಶೇಷ ಸಂಭಾವನೆ ನೀಡಬೇಕು. ಸೂಕ್ತ ರಕ್ಷಣೆ ಒದಗಿಸಬೇಕು. ಹೊರನಾಡ ಕನ್ನಡಿಗರಿಗೆ ಅಗತ್ಯ ನೆರವು ಒದಗಿಸುವಂತೆ ಸಂಬಂಧಪಟ್ಟ ಮುಖ್ಯಮಂತ್ರಿಗಳೊಂದಿಗೆ ಮಾತನಾಡಬೇಕು. ಅನಿವಾಸಿ ಕನ್ನಡಿಗರ ನೆರವಿಗೆ ಸಹಾಯವಾಣಿ ತೆರೆಯುವಂತೆ ಮುಖ್ಯಮಂತ್ರಿಗಳಿಗೆ ಪಕ್ಷದ ವತಿಯಿಂದ ಸಲಹೆ ನೀಡಲಾಗಿದೆ. ಈ ಸಲಹೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಲಾಕ್ ಡೌನ್ ಅವಧಿಯಲ್ಲೂ ಕಾರ್ಯಕರ್ತರು ಸಾಕಷ್ಟು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಡಿಲಿಕೆ ಬಳಿಕವೂ ಸಾಮಾಜಿಕ ಅಂತರ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ನಮ್ಮ ಕಾರ್ಯಕರ್ತರು ನೆರವಾಗಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ