ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ: ನಳಿನ್‍ ಕಮಾರ್ ಕಟೀಲ್ ವ್ಯಂಗ್ಯ


Team Udayavani, Oct 7, 2022, 1:33 PM IST

Nalin-kumar

ಬೆಂಗಳೂರು: ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ನಗರದ ಅರಮನೆ ಮೈದಾನದ ‘ತ್ರಿಪುರ ವಾಸಿನಿ’, ಗೇಟ್ ನಂ.2ರಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ದೇಶ ಮಾತ್ರವಲ್ಲದೆ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಭಾರತದಿಂದ ಓಡಲು ಇಟೆಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು.

ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಶಾಸ್ತ್ರೀಜಿ ಹೊರತುಪಡಿಸಿ ಉಳಿದೆಲ್ಲ ಪ್ರಧಾನಿಗಳು ಭ್ರಷ್ಟರಾಗಿದ್ದರು. ಕಾಂಗ್ರೆಸ್ ಮುಖಂಡರೆಲ್ಲರೂ ಭ್ರಷ್ಟಾಚಾರ ಮಾಡಿದವರು ಎಂದು ಟೀಕಿಸಿದರು.

ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ- ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣನ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದುನೋಡಿ ಎಂದು ಮುನ್ಸೂಚನೆ ನೀಡಿದರು. ಕಾಂಗ್ರೆಸ್ ಪಕ್ಷದ ಕೇಂದ್ರದ ಹಾಗೂ ರಾಜ್ಯದ ನಾಯಕರು ಜಾಮೀನಿನಡಿ ಇದ್ದಾರೆ ಎಂದು ಅವರು ಪ್ರಸ್ತಾಪಿಸಿದರು.

ಚುನಾವಣಾ ಪೂರ್ವತಯಾರಿ ನಡೆಯುತ್ತಿದೆ. ಅದ್ಭುತ ಪ್ರತಿಕ್ರಿಯೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆ ಕುರಿತು ಮೆಚ್ಚುಗೆ ಸೂಚಿಸಿದರು. ಜನರು ಬಿಜೆಪಿ ಕಡೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು. ಕೋವಿಡ್ ಉಚಿತ ಲಸಿಕೆ ಮೂಲಕ ಮಾಸ್ಕ್ ತೆಗೆದು ಕುಳಿತುಕೊಳ್ಳಲು ಜನಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿಜಿ ಅವರು ಕಾರಣರಾಗಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.

ಇದನ್ನೂ ಓದಿ:ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಮೃತ್ಯು

ಇತರ ಪಕ್ಷಗಳ ಹತ್ತಾರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಪಕ್ಷದ ಮುಖಂಡರ ಪ್ರವಾಸ ನಡೆಸಲಾಗುತ್ತಿದೆ. ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು. ಪ್ರಕಾಶನ ಪ್ರಕೋಷ್ಠದ ವತಿಯಿಂದ ಹೊರತಂದ ಸಮಷ್ಟಿ, ಧ್ಯೇಯಪಥ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಪ್ರಭಾರಿಗಳಾದ ಶ್ರೀಮತಿ ಡಿ.ಕೆ. ಅರುಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಹಾಗೂ ಕೋರ್ ಕಮಿಟಿ ಸದಸ್ಯರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಸಚಿವರು, ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.