ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ


Team Udayavani, May 11, 2021, 10:42 AM IST

ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್  ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್‌ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್‌ ಕುಮಾರ್‌ ಕಟೀಲ್‌”ಉದಯವಾಣಿ’ ಜತೆ ಮುಕ್ತವಾಗಿ ಮಾತನಾಡಿದ್ದಾರೆ.

ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ?

ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ ಒಂದು ವಾರ್‌ ರೂಮ್‌ ಮಾಡಿದ್ದೇವೆ. 250 ಸಹಾಯ ಕೇಂದ್ರಗಳನ್ನು ತೆರೆದಿದ್ದೇವೆ. 13 ಸೇವೆಗಳನ್ನು ನೀಡುತ್ತಿದ್ದೇವೆ.

ಶಾಸಕರಿಗೆ ಯಾವ ಜವಾಬ್ದಾರಿ ನೀಡಿದ್ದೀರಾ?

ಎಲ್ಲ ಶಾಸಕರಿಗೆ ಜವಾಬ್ದಾರಿ ನೀಡಿದ್ದೇವೆ. ಕಡ್ಡಾಯ ಕ್ಷೇತ್ರದಲ್ಲಿದ್ದು, ಮಂಡಲ ಅಧ್ಯಕ್ಷ ರೊಂದಿಗೆ ಸೇರಿ ವಾರ್‌ ರೂಂ ಜವಾಬ್ದಾರಿ ವಹಿಸಿ ದ್ದೇವೆ.ಗ್ರಾಮಗಳಲ್ಲಿ ಕೊರೊನಾ ಕಾರ್ಯಪಡೆಯೊಂದಿಗೆ ಕೆಲಸ ಮಾಡಬೇಕೆಂದು ಸೂಚಿಸಿದ್ದೇವೆ.

ಬೆಡ್‌ ಬ್ಲಾಕಿಂಗ್‌ ಹಗರಣ ನಿಮ್ಮ ಸರ್ಕಾರದ ವಿರುದ್ಧ, ನಿಮ್ಮ ಸಂಸದರೇ ಆರೋಪ ಮಾಡುತ್ತಿದ್ದಾರಲ್ಲಾ?

ಹಾಗೇನಿಲ್ಲ. ಸರ್ಕಾರದ ವಿರುದ್ಧ ಆರೋಪ ಅಲ್ಲ ಅದು. ಎಲ್ಲಿ ಸಮಸ್ಯೆಯಾಗುತ್ತಿದೆ ಅನ್ನುವುದನ್ನು ಅವರು ಸರ್ಕಾರದ ಗಮನಕ್ಕೆತಂದಿದ್ದಾರೆ. ಕೆಳ ಮಟ್ಟದಲ್ಲಿ ಆಗುವ ಸಮಸ್ಯೆಗಳು ಕೆಲವು ಬಾರಿ ಸರ್ಕಾರದ ಗಮನಕ್ಕೆ ಬರುವುದಿಲ್ಲ. ಅದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಅದು ಸರ್ಕಾರದ ವಿರುದ್ಧವಲ್ಲ.

ಒಂದೇ ಕೋಮಿನವರನ್ನು ಟಾರ್ಗೆಟ್‌ ಮಾಡಿದ್ದಾರೆ ಅಂತ ಕಾಂಗ್ರೆಸ್‌ನವರು ಆರೋಪ ಮಾಡ್ತಿದ್ದಾರೆ?

ಒಂದೇ ಕೋಮಿನವರು ಅಂತೇನಿಲ್ಲ. ಬೇರೆ ಕೆಲವು ಅಧಿಕಾರಿಗಳೂ ಇದ್ದಾರೆ. ಅವರನ್ನೂ ಅಮಾನತು ಮಾಡಲಾಗಿದೆ. ಕಾಂಗ್ರೆಸ್‌ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಒಂದೇ ಜಾತಿಯವರು ಹೆಚ್ಚಿನವರಿದ್ದಾರೆ. ಕೋಮು ಭಾವನೆ ಹುಡುಕುವುದು ಸರಿಯಲ್ಲ.

ಚಾಮರಾಜನಗರ ದುರಂತ ಸರ್ಕಾರದ ನಿರ್ಲಕ್ಷ್ಯದಿಂದಲೇ ನಡೆಯಿತು ಎಂಬ ಆರೋಪ ಕೇಳಿ ಬರುತ್ತಿದೆ?

ಹಾಗೇನಿಲ್ಲ, ಪ್ರಕರಣ ಬೆಳಕಿಗೆ ಬಂದ ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಅಲ್ಲಿಯೇ ಉಳಿದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಮೈಸೂರು ಮತ್ತುಚಾಮರಾಜನಗರ ಜಿಲ್ಲೆಗಳ ನಡುವಿನ ಗೊಂದಲದಿಂದ ಹೀಗಾಗಿದೆ ಅಂತ ಇದೆ.

ಜಿಂದಾಲ್‌ಗೆ ಜಮೀನು ನೀಡಿರುವ ಬಗ್ಗೆ ಪಕ್ಷದ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರಲ್ಲ?

ಈ ಬಗ್ಗೆ ನಾನೂ ಸಿಎಂ ಜೊತೆ ಮಾತನಾಡಿದ್ದೇನೆ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ. ಶಾಸಕರ ಸಲಹೆಗಳನ್ನು ಸಿಎಂ ಪಡೆದುಕೊಂಡಿದ್ದಾರೆ.

ಉಪ ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್‌ ಬೇಸರ ವ್ಯಕ್ತಪಡಿಸಿದೆಯಂತೆ?

ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬಸವಕಲ್ಯಾಣ ನಮ್ಮದಾಗಿರಲಿಲ್ಲ. ಅಲ್ಲಿ ಗೆದ್ದಿದ್ದೇವೆ. ಮಸ್ಕಿಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿ ಗೆದ್ದಿರಲಿಲ್ಲ. ಬೆಳಗಾವಿಯಲ್ಲಿ ಕಡಿಮೆ ಅಂತರದಿಂದ ಗೆದ್ದಿದ್ದೇವೆ. ಈ ಬಗ್ಗೆ ಬೂತ್‌ ಮಟ್ಟದಲ್ಲಿ ಮಾಹಿತಿ ಪಡೆಯಲು ಸೂಚಿಸಿದ್ದಾರೆ. ಕೋವಿಡ್ ಮುಗಿದ ನಂತರ ಈ ಬಗ್ಗೆ ಮಾಹಿತಿ ಪಡೆದು ವರದಿ ಮಾಡಲಾಗುವುದು.

ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಅಂತ ಕಾಂಗ್ರೆಸ್‌ ನಾಯಕರು ಆರೋಪಿ ಸುತ್ತಿದ್ದಾರಲ್ಲ?

ರಾಜ್ಯ ಸರ್ಕಾರ ಉತ್ತಮ ಕ್ರಮ ತೆಗೆದುಕೊಳ್ಳುತ್ತಿದೆ. ಎರಡನೇ ಅಲೆಯಿಂದಕರ್ನಾಟಕ ಅಷ್ಟೇ ಅಲ್ಲ, ಕೇರಳ, ಮಹಾರಾಷ್ಟ್ರ, ದೆಹಲಿ ರಾಜ್ಯಗಳಲ್ಲಿಯೂ ಕೈ ಮೀರಿ ಹೋಗುತ್ತಿದೆ. ಏಕಾಏಕಿ ಬಂದಿರುವುದರಿಂದ ನಿಯಂತ್ರಣ ಕಷ್ಟವಾಗುತ್ತಿದೆ. ಕಾಂಗ್ರೆಸ್‌ನವರು ಆರೋಪಿಸುವ ಬದಲು ಸಲಹೆ-ಸೂಚನೆ ನೀಡಲಿ. ಕಾಂಗ್ರೆಸ್‌ ಹೆಚ್ಚಿನ ಅವಧಿ ಅಧಿಕಾರ ನಡೆಸಿದೆ. ಆಸ್ಪತ್ರೆಯಲ್ಲಿ ಬೆಡ್‌, ವೆಂಟಿಲೇಟರ್‌, ಆಕ್ಸಿಜನ್‌, ಕೊರತೆ ಆಗಲು ಇವರೇ ಕಾರಣ. ಸರ್ಕಾರ ಈಗ ಅಗತ್ಯ ಇರುವ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರದ ಕಾರ್ಯವೈಖರಿ ಬಗ್ಗೆ ತೃಪ್ತಿಯಿದೆ. ಇನ್ನಷ್ಟು ಕ್ರಮ ತೆಗೆದುಕೊಳ್ಳಬೇಕು.

ಲಾಕ್‌ಡೌನ್‌ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಅಂತ ಆರೋಪವಿದೆ?

ಕಳೆದ ವರ್ಷ ಲಾಕ್‌ಡೌನ್‌ ಘೋಷಣೆ ಮಾಡಿ ದ್ದರಿಂದ ಎಷ್ಟು ಸಮಸ್ಯೆ ಆಯಿತು ಅಂತ ಎಲ್ಲರ ಗಮನದಲ್ಲಿದೆ. ಹೀಗಾಗಿ ಈ ಬಾರಿ ಮುಖ್ಯಮಂತ್ರಿ ಯೋಚಿಸಿ ತೀರ್ಮಾನತೆಗೆದುಕೊಂಡಿದ್ದಾರೆ. ಬಿಗಿ ಕ್ರಮ ಕೈಗೊಂಡರೆರೈತರು ಬೆಳೆದ ಬೆಳೆ ಬೀದಿಯಲ್ಲಿ ಚೆಲ್ಲುವಂತಾಗುತ್ತದೆ. ಸರ್ಕಾರ ಎಲ್ಲವನ್ನೂ ಗಮನಿಸಿ ನಿರ್ಧಾರ ತೆಗೆದುಕೊಂಡಿದೆ.

ಲಾಕ್‌ಡೌನ್‌ ನಿಂದ ತೊಂದರೆಗೊಳಗಾದವರಿಗೆ ಪರಿಹಾರನೀಡಬೇಕೆಂಬ ಬೇಡಿಕೆ ಇದೆ. ಸರ್ಕಾರಕ್ಕೆ ನೀವೇನಾದರೂ ಸಲಹೆ ನೀಡಿದ್ದೀರಾ?

ಈ ಬಗ್ಗೆ ನಾವೂ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಸಂಕಷ್ಟಕ್ಕೆ ಸಿಲುಕಿರುವ ವರ್ಗ ಹಾಗೂ ಸಮುದಾಯಗಳ ನೆರವಿಗೆ ಬರಲು ಸರ್ಕಾರ ಖಂಡಿತ ಕ್ರಮ ಕೈಗೊಳ್ಳುತ್ತದೆ. ಸಿಎಂ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ.

 

-ಸಂದರ್ಶನ: ಶಂಕರ ಪಾಗೋಜಿ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.