ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ ಯಡಿಯೂರಪ್ಪ: ಕಾಂಗ್ರೆಸ್ ಟೀಕೆ


Team Udayavani, Aug 5, 2021, 4:15 PM IST

ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ ಯಡಿಯೂರಪ್ಪ: ಕಾಂಗ್ರೆಸ್ ಟೀಕೆ

ಬೆಂಗಳೂರು: ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ರಚನೆಯಾಗಿದೆ. 29 ಮಂದಿ ಶಾಸಕರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟ ರಚನೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಭಾವ ಬೀರಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದ್ದು, ಯಡಿಯೂರಪ್ಪ ಅವರು ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ ಎಂದಿದೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ, ತಮ್ಮ ವಿರುದ್ಧದ ಬಂಡಾಯಗಾರರನ್ನ ಸಂಪುಟದಿಂದ ದೂರವಿಡುವ ಮೂಲಕ ಮೀರ್‌ಸಾದಿಕ್ ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ! ಕಟೀಲ್ ಕಾಮಿಡಿ ಮಾಡಲು ಮಾತ್ರ! ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್ ವೈ ಅವರೇ ಹೈಕಮಾಂಡ್ ಆಗಿದ್ದಾರೆ ಎಂದಿದೆ.

ಮೊದಲೆಲ್ಲ ಕಾಂಗ್ರೆಸ್‌ಗೆ ‘ಹೈಕಮಾಂಡ್ ಸಂಸ್ಕೃತಿ’ ಎಂದು ಹೇಳುತ್ತಿದ್ದ ಬಿಜೆಪಿ ಈಗ ತಮ್ಮದೇ ‘ಬಲಿಷ್ಠ ಹೈಕಮಾಂಡ್’ ಎಂದು ಬಿಂಬಿಸಿಕೊಳ್ಳುತ್ತಾ ತಮ್ಮ ಡಬಲ್ ಸ್ಟ್ಯಾಂಡರ್ಡ್ ನೀತಿ ನಿರೂಪಿಸಿತ್ತು! ಯಡಿಯೂರಪ್ಪ ಅವರನ್ನು ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದ ಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಳಿನ್ ಕುಮಾರ್ ಕಟೀಲ್ ಎಂಬ ಮೀರ್‌ಸಾದಿಕ್ ಅದೆಷ್ಟೇ ಷಡ್ಯಂತ್ರ ರೂಪಿಸಿದರೂ ಯಡಿಯೂರಪ್ಪನವರ ಕೈ ಮೇಲಾಗಿದೆ, ಮೂಲ ಬಿಜೆಪಿಗರು ಮೂಲೆ ಗುಂಪಾದರೂ ಏನೂ ಮಾಡಲಾಗದ ಕಟೀಲ್ ತನಗೆ ಬೆನ್ನೆಲುಬಿಲ್ಲ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಬಿಜೆಪಿ ಈಗ ಬಿಜೆಪಿಯಾಗಿ ಉಳಿದಿಲ್ಲ, ವಿಜೆಪಿ ಆಗಿದೆ, ಅಂದರೆ ವಲಸಿಗರ ಜನತಾ ಪಾರ್ಟಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ:ಸಚಿವ ಸ್ಥಾನಕ್ಕೆ ತೃಪ್ತಿ ಪಟ್ಟ ನಿರಾಣಿ|ಸವದಿ-ದೊಡ್ಡನಗೌಡ-ಚರಂತಿಮಠ ಬೆಂಬಲಿಗರಲ್ಲಿ ನಿರಾಶೆ  

ದವಳಗಿರಿ ಸರ್ಕಾರದ ಸಂಪುಟದಲ್ಲಿ ದಲಿತರನ್ನ ಕಡೆಗಣಿಸಿ ಬಿಜೆಪಿ ತನ್ನ ದಲಿತ ವಿರೋಧಿ ನೀತಿಯನ್ನ ಮತ್ತೊಮ್ಮೆ ನಿರೂಪಿಸಿದೆ. ದಲಿತರನ್ನು ಸಿಎಂ ಮಾಡುವುದಿರಲಿ ಕೊನೆ ಪಕ್ಷ ಸಂಪುಟದಲ್ಲಿಯೂ ಪ್ರಾತಿನಿಧ್ಯ ನೀಡದ ಬಿಜೆಪಿ ಇತರ ಪಕ್ಷಗಳಿಗೆ ಆರೋಪಿಸುವುದು ಹಾಸ್ಯಾಸ್ಪದ. ಬಿಜೆಪಿಯಲ್ಲಿ ದಲಿತ, ಹಿಂದುಳಿದವರಿಗೆ ಕೊನೆ ಸಾಲಿನ ಕುರ್ಚಿ ಮಾತ್ರ. ಮೊಟ್ಟೆ ಖರೀದಿ ಹಗರಣ ನಡೆಸಿದ ಶಶಿಕಲಾ ಜೊಲ್ಲೆಯವರನ್ನ ಝಿರೋ ಟ್ರಾಫಿಕ್‌ ರಾಜ ಮರ್ಯಾದೆಯಲ್ಲಿ ಕರೆತಂದು ದವಳಗಿರಿ ಸರ್ಕಾರ ದಲ್ಲಿ ಮಂತ್ರಿಗಿರಿ ಕೊಡುವ ಮೂಲಕ ಬಿಜೆಪಿ ಭ್ರಷ್ಟಾಚಾರವನ್ನು ತಮ್ಮ ‘ಮನೆದೇವರು’ ಎಂಬುದನ್ನ ಸಾರಿ ಹೇಳುತ್ತಿದೆ. ಬಡ ಮಕ್ಕಳ ಮೊಟ್ಟೆ ತಿಂದಿದ್ದನ್ನ ತನಿಖೆಗೆ ವಹಿಸದೆ ಸಿಎಂ ಸಮರ್ಥಿಸಿಕೊಳ್ಳುವುದು ನೈತಿಕ ಅಧಃಪತನ ಎಂದಿದೆ.

ವಲಸಿಗರಿಗೆ ಮಣೆ ಹಾಕುವ ಮೂಲಕ ತಮ್ಮ ವಿರುದ್ಧ ಕತ್ತಿ ಮಸೆದ ಅಸಲಿ ಬಿಜೆಪಿಗರನ್ನ ಯಡಿಯೂರಪ್ಪ ಮುಗಿಸಿ ಹಾಕುತ್ತಿದ್ದಾರೆ. ಸಿಎಂನಿಂದ ಹಿಡಿದು ಸಂಪುಟದವರೆಗೂ ಬಹುತೇಕರು ವಲಸೆ ಬಂದವರೇ ಅಧಿಕಾರ ಹಿಡಿಯುವ ಮೂಲಕ ಬಿಜೆಪಿ ಸರ್ಕಾರದಲ್ಲಿ ಬಿಜೆಪಿಗರೇ ಇಲ್ಲದಂತಾಗಿದೆ! ಇದನ್ನು ಬಿಜೆಪಿ ಸರ್ಕಾರ ಎನ್ನುವ ಬದಲು ದವಳಗಿರಿಸ ರ್ಕಾರ ಎನ್ನಬಹುದು ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.