ಯಡಿಯೂರಪ್ಪ ಜತೆ ನಾನೂ ರಾಜ್ಯ ಪ್ರವಾಸ ಮಾಡುವೆ: ನಳಿನ್‌


Team Udayavani, Aug 8, 2021, 6:30 AM IST

ಯಡಿಯೂರಪ್ಪ ಜತೆ ನಾನೂ ರಾಜ್ಯ ಪ್ರವಾಸ ಮಾಡುವೆ: ನಳಿನ್‌

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ರಚನೆಯಾಗಿದ್ದು, ನೂತನ ನಾಯಕತ್ವ, ಹೊಸ ಸಂಪುಟ ಸಚಿವರು, ಪಕ್ಷ ಹಾಗೂ ಸರ್ಕಾರದ ಮುಂದಿನ ಚಟುವಟಿಕೆಗಳು, ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು  “ಉದಯವಾಣಿ’ ಜತೆ ಮಾತನಾಡಿದ್ದಾರೆ.

ಹೊಸ ನಾಯಕತ್ವದಿಂದ ಏನು ನಿರೀಕ್ಷೆ ಇಟ್ಟುಕೊಂಡಿದ್ದೀರಿ?

ಬಸವರಾಜ ಬೊಮ್ಮಾಯಿ ಅನುಭವಿ, ಹಿರಿಯ ರಾಜಕಾರಣಿ, ಅತಿ ಹೆಚ್ಚು ಇಲಾಖೆಗಳನ್ನು ನಿರ್ವಹಿಸಿದ್ದಾರೆ. ಅವರ ತಂದೆ ಎಸ್‌.ಆರ್‌. ಬೊಮ್ಮಾಯ ಸಿಎಂ ಆಗಿದ್ದರು. ದೇವೇಗೌಡರು, ರಾಮಕೃಷ್ಣ ಹೆಗಡೆ, ಜೆ.ಎಚ್‌.ಪಟೇಲ್‌ ಅವರಂತಹ ಹಿರಿಯ ರಾಜಕಾರಣಿಗಳ ಜತೆಗೆ ಪಳಗಿದವರು. ಬೊಮ್ಮಾಯಿ ಎರಡು ಮೂರು ಅವಧಿಯಲ್ಲಿ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದಾರೆ. ಕೇಂದ್ರದ  ಮಾದರಿಯಲ್ಲಿ ರಾಜ್ಯದಲ್ಲೂ ಉತ್ತಮ ಆಡಳಿತ ನೀಡುವ ನಿರೀಕ್ಷೆಯಿದೆ.

ಮುಖ್ಯಮಂತ್ರಿಯನ್ನು ಬದಲಾಯಿಸಿ, ಹಳೆಯ ಸಚಿವರನ್ನು ಮುಂದುವರಿಸಲಾಗಿದೆ. ಇದರಿಂದೇನು  ಲಾಭ? 

ಇಲ್ಲ, ಆರು ಮಂದಿ ಹೊಸಬರನ್ನು ಸೇರಿಸಿಕೊಂಡಿದ್ದೇವೆ. ಏಕಾಏಕಿ ಎಲ್ಲವನ್ನೂ ಬದಲಾಯಿಸಲು ಆಗುವುದಿಲ್ಲ.  ವಿಚಾರಕ್ಕೆ ಬದ್ಧರಾಗಿದ್ದವರನ್ನು ತಂದಿದ್ದೇವೆ.

ಕೆಲವು ಸಚಿವರ ಮೇಲೆ ಭ್ರಷ್ಟಾಚಾರ ಆರೋಪವಿದೆಯಲ್ಲ?

ನಮ್ಮ ಸರಕಾರದ ಸಾಧನೆ ಮತ್ತು ಮಂತ್ರಿ ಗಳ ಕಾರ್ಯಶೈಲಿಯನ್ನು ಹಿರಿಯರು ಗಮನಿ ಸುತ್ತಾರೆ. ಸಚಿವರ ಮೇಲಿನ ಆರೋಪದ  ಸತ್ಯಾಸತ್ಯತೆಯನ್ನು ಸಿಎಂ ಪರಿಶೀಲಿಸುತ್ತಾರೆ.

ಬಿಎಸ್‌ವೈ ಜತೆ ಪ್ರವಾಸ ಮಾಡುತ್ತೀರಾ?

ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಅವರ ನಾಯಕತ್ವದಲ್ಲಿ ಒಟ್ಟಿಗೆ ಪ್ರವಾಸ ಮಾಡುತ್ತೇವೆ. ಅವರ ಪ್ರವಾಸ ನಮ್ಮ ಪಕ್ಷಕ್ಕೆ ಶಕ್ತಿಯನ್ನು ತುಂಬಿ ಮುಂದಿನ ಚುನಾವಣೆಯಲ್ಲಿ  140 ಸ್ಥಾನ ಗೆಲ್ಲಲು ಅನುಕೂಲವಾಗುತ್ತದೆ.

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಇದೆಯೇ?

ಒಂದಷ್ಟು ಬದಲಾವಣೆಗಳಿಗೆ ಆದ್ಯತೆ ನೀಡುತ್ತೇವೆ. ಎಲ್ಲರನ್ನೂ ಬದಲಾಯಿಸುತ್ತೇವೆ ಎಂದು ಹೇಳುವುದಿಲ್ಲ. ಒಂದೂವರೆ ತಿಂಗಳಲ್ಲಿ ಎಲ್ಲವನ್ನೂ ಮಾಡಲಾಗುತ್ತದೆ.

ಕುಮಾರಸ್ವಾಮಿಯವರು ಇದು ಜನತಾ ಸರಕಾರ ಎನ್ನುತ್ತಿದ್ದಾರಲ್ಲ? 

ಕುಮಾರಸ್ವಾಮಿಯವರು ರಾಜಕಾರಣ ಕ್ಕಾಗಿ ಸಂದರ್ಭ ಹುಡುಕುತ್ತಾರೆ. ವಿಪಕ್ಷದವರು ಈ ಸರಕಾರ ಪತನಗೊಳ್ಳುತ್ತದೆ, ಬಿಜೆಪಿ ಇಬ್ಭಾಗ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಅವರಿಗೀಗ ನಿರಾಸೆಯಾಗಿದೆ.

ಬೊಮ್ಮಾಯಿ ಅವರು ದೇವೇಗೌಡರ ಮನೆಗೆ ಭೇಟಿ ನೀಡಿದ್ಯಾಕೆ?

ದೇವೇಗೌಡರು  ದೇಶದ ಹಿರಿಯ ರಾಜ ಕಾರಣಿ.  ಅವರ ಅನುಭವದ ಮಾರ್ಗದರ್ಶನ ಪಡೆಯಲು ಸಿಎಂ  ಭೇಟಿ ಮಾಡಿದ್ದಾರೆ.

ಬಿಎಸ್‌ವೈ ಬಂಡಾಯ ಸಾರಿದರೆ, ಗೌಡರ ಬೆಂಬಲ ಪಡೆಯುವ ಉದ್ದೇಶ ಇತ್ತೇ ?

ಅಂಥದ್ದೇನಿಲ್ಲ.

ಕೆಲವು ವಲಸಿಗರು ಬಿಜೆಪಿ ತಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟಿತು ಎನ್ನುತ್ತಿದ್ದಾರಲ್ಲ?

ನಮ್ಮಲ್ಲಿ ಯಾರೂ ವಲಸಿಗರಲ್ಲ. ನಮ್ಮ ಪಕ್ಷಕೆ ಬಂದು  ಸ್ಪರ್ಧಿಸಿ ಗೆದ್ದವರೆಲ್ಲರೂ ನಮ್ಮವರೇ. ಯಾರಿಗೆ ಸಂಪುಟದಲ್ಲಿ ಸ್ಥಾನ ತಪ್ಪಿದೆಯೋ ಅವರಿಗೆಲ್ಲ ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ನೀಡಲಾಗುವುದು

ರಾಜ್ಯ ಘಟಕದಲ್ಲಿ ಬದಲಾವಣೆ ಆಗುತ್ತದೆ ಎನ್ನಲಾಗುತ್ತಿದೆಯಲ್ಲ ?

ಮುಂದಿನ ಎರಡು ವರ್ಷ ಪಕ್ಷದ ರಾಜ್ಯ ಘಟಕದಲ್ಲಿ ಯಾವುದೇ ಬದಲಾವಣೆಯಿಲ್ಲ. ಈಗಿರುವ ತಂಡವೇ ಮುಂದಿನ ಚುನಾವಣೆವರೆಗೂ ಮುಂದುವರಿಯುತ್ತದೆ. ಒಂದೆರಡು ಸ್ಥಾನಗಳು ಖಾಲಿ ಉಳಿದಿವೆ, ಅವುಗಳನ್ನು ಮಾತ್ರ ಭರ್ತಿ ಮಾಡಲಾಗುವುದು. ಉಳಿದಂತೆ ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ.

 

-ಶಂಕರ ಪಾಗೋಜಿ

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.