ಸರಕಾರಕ್ಕೆ ಭಾರವಾದರೂ ಜನರ ಹೊರೆ ಇಳಿಸಿದ್ದ ಮುಖ್ಯಮಂತ್ರಿ: ನಳಿನ್ ಮೆಚ್ಚುಗೆ
Team Udayavani, Apr 29, 2022, 6:43 AM IST
ಬೆಂಗಳೂರು: ರಾಜ್ಯದ “ಕಾಮನ್ ಮ್ಯಾನ್ ಸಿಎಂ’ ಎಂದೇ ಮೆಚ್ಚುಗೆ ಪಡೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ನವೆಂಬರ್ನಲ್ಲಿಯೇ ಪೆಟ್ರೋಲಿಯಂ ಉತ್ಪನ್ನಗಳ ಸುಂಕ ಕಡಿಮೆ ಮಾಡುವ ಮೂಲಕ ಜನರ ಹೊರೆಯನ್ನು ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗೆ ಕೂಡಲೇ ಸ್ಪಂದಿಸಿದ್ದ ರಾಜ್ಯದ ಬಿಜೆಪಿ ಸರಕಾರವು ಸುಂಕ ಕಡಿಮೆ ಮಾಡಿದ್ದರಿಂದ ಖಜಾನೆಗೆ ಬರುವ 5,314 ಕೋಟಿ ರೂ. ಕಡಿಮೆ ಆಗಿದೆ. ಜನರ ಹೊರೆ ಕಡಿಮೆ ಮಾಡುವ ದೃಷ್ಟಿಯಿಂದ ನಮ್ಮ ಸರಕಾರ ಈ ಕ್ರಮ ಕೈಗೊಂಡಿದ್ದು, ಇದಕ್ಕೆ ಜನಬೆಂಬಲ ಖಚಿತ ಎಂದಿದ್ದಾರೆ.
ಆದರೆ ಕಾಂಗ್ರೆಸ್ ಬೆಂಬಲಿತ ಸರಕಾರವಿರುವ ಮಹಾರಾಷ್ಟ್ರದಲ್ಲಿ ಸುಂಕ ಕಡಿಮೆ ಮಾಡದೆ 3,472 ಕೋಟಿ ರೂ. ಹೆಚ್ಚುವರಿ ಆದಾಯವನ್ನು ಸಂಗ್ರಹಿಸಲಾಗಿದೆ. ಇದೇ ರೀತಿಯಲ್ಲಿ ತಮಿಳುನಾಡು ಸರಕಾರ 2,924 ಕೋಟಿ ರೂ., ಪಶ್ಚಿಮ ಬಂಗಾಲ ಸರಕಾರ 1,343 ಕೋಟಿ ರೂ. ಆದಾಯ ಗಳಿಸಿದೆ. ಆದರೆ ಬಿಜೆಪಿ ಆಡಳಿತವಿರುವ ಎಲ್ಲ ರಾಜ್ಯ ಸರಕಾರಗಳೂ ಸುಂಕ ಕಡಿಮೆ ಮಾಡಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ