ಠಾಣೆ ಎದುರೇ ನಮಾಜ್
Team Udayavani, Dec 21, 2019, 3:04 AM IST
ದಾವಣಗೆರೆ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗೆ ಅನುಮತಿ ಕೋರಿ ಬಂದಿದ್ದ ಮುಸ್ಲಿಂ ಮುಖಂಡರು ಶುಕ್ರವಾರ ಮಧ್ಯಾಹ್ನ ಠಾಣೆ ಎದುರೇ ನಮಾಜ್ ಮಾಡಿದರು. ಪ್ರತಿಭಟನೆಗೆ ಅನುಮತಿ ಕೋರಿ ಆಜಾದ್ ನಗರ ಪೊಲೀಸ್ ಠಾಣೆ ಬಳಿ ಮುಸ್ಲಿಂ ಸಂಘಟನೆಗಳ ಮುಖಂಡರು, ಸಮುದಾಯದ ನೂರಾರು ಮಂದಿ ಸೇರಿದ್ದರು. ಆದರೆ, ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದರು.
ಆಗ, ಪ್ರತಿಭಟನಾಕಾರರು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮನವಿ ಸ್ವೀಕರಿಸಲು ಖುದ್ದು ಜಿಲ್ಲಾಧಿಕಾರಿಗಳೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಮಧ್ಯೆ, ಮಧ್ಯಾಹ್ನದ ಪ್ರಾರ್ಥನೆ ಸಲ್ಲಿಸುವ ಸಮಯ ಮೀರುತ್ತಿತ್ತು. ಆಗ ಪೊಲೀಸರೇ ಮುಸ್ಲಿಂ ಮುಖಂಡರಿಗೆ ನಮಾಜ್ ಮಾಡಲು ಠಾಣೆ ಮುಂದೆ ಚಾಪೆ ವ್ಯವಸ್ಥೆ ಮಾಡಿದರು. ಆಗ ಅಲ್ಲಿಯೇ ಕೆಲವರು ಪ್ರಾರ್ಥನೆ ಸಲ್ಲಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…