ನಾರಾಯಣಗೌಡ, ಸೋಮಣ್ಣ ಮುನಿಸು ಸದ್ಯಕ್ಕೆ ಶಮನ
Team Udayavani, Mar 8, 2023, 6:33 AM IST
ಬೆಂಗಳೂರು: ಮುನಿಸಿಕೊಂಡಿದ್ದ ಇಬ್ಬರು ಸಚಿವರ ಜತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಚರ್ಚೆ ನಡೆಸಿದ್ದು, ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.
ತಮ್ಮ ಅಧಿಕೃತ ನಿವಾಸಕ್ಕೆ ಇವರಿಬ್ಬರನ್ನೂ ಕರೆಯಿಸಿ ಚರ್ಚೆ ನಡೆಸಿರುವ ಬೊಮ್ಮಾಯಿ ಇಬ್ಬರಿಗೂ ಪಕ್ಷ ಬಿಟ್ಟು ಹೋಗದಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಸಚಿವರು ತಮ್ಮ ಪಕ್ಷಾಂತರ ನಿರ್ಧಾರವನ್ನು ಸದ್ಯಕ್ಕೆ ಬದಲಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕೆಲ ಸಚಿವರು ಪಕ್ಷ ತೊರೆಯಲು ನಿರ್ಧರಿಸಿದ್ದರು ಎಂಬ ವದಂತಿಗೆ ಇಂಬು ಸಿಕ್ಕಂತಾಗಿದೆ. ಸಚಿವರೇ ಪಕ್ಷ ತೊರೆದರೆ ಚುನಾವಣಾ ಹೊಸ್ತಿಲಲ್ಲಿ ಮುಜುಗರವುಂಟಾಗಬಹುದೆಂಬ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಈ ಚರ್ಚೆ ನಡೆಸಿದ್ದಾರೆಂದು ಹೇಳಲಾಗಿದೆ.
ಸಹ ಪ್ರಭಾರಿ ಜತೆ: ಇದೆಲ್ಲದರ ಮಧ್ಯೆ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವ, ರಾಜ್ಯ ಚುನಾವಣಾ ಸಹಪ್ರಭಾರಿ ಮನ್ಸುಖ್ ಮಾಂಡವೀಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.
ರಾಜ್ಯ ಚುನಾವಣೆಗೆ ಸಂಬಂಧಪಟ್ಟ ಒಟ್ಟಾರೆ ವಿದ್ಯಮಾನಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಜತೆಗಿದ್ದರು ಎನ್ನಲಾಗಿದೆ.
ಬಿಜೆಪಿ ತೊರೆಯುವುದಾಗಿ ಎಲ್ಲೂ ಹೇಳಿಲ್ಲ: ಸಚಿವ ಸೋಮಣ್ಣ
ಕನಕಪುರ: ನಾನು ಬಿಜೆಪಿ ತೊರೆಯುವುದಾಗಿ ಎಲ್ಲೂ ಹೇಳಿಲ್ಲ, ಮಾಧ್ಯಮಗಳ ಸೃಷ್ಟಿಗೆ ನಾನು ಉತ್ತರ ಕೊಡಲು ಆಗುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಬೆಂಗಳೂರು ರಸ್ತೆಯ ತುಂಗಣಿ ಬಳಿ ಗೃಹ ಮಂಡಳಿ ಇಲಾಖೆಯಿಂದ ನಿರ್ಮಿಸಿರುವ ರಾಷ್ಟ್ರಕವಿ ಕುವೆಂಪು ಸಂಯುಕ್ತ ವಸತಿ ಬಡಾವಣೆ ಪ್ರವೇಶ ದ್ವಾರ ಉದ್ಘಾಟನೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು 45 ವರ್ಷಗಳಿಂದ ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದೇನೆ.
ರಾಜಕೀಯ ಅಂದಮೇಲೆ ಹಲವಾರು ಚರ್ಚೆಗಳು, ಒಳಾರ್ಥಗಳು ಇರುತ್ತವೆ. ನಾವು ಕಾಯಕದಲ್ಲಿ ದೇವರನ್ನು ಕಾಣುತ್ತೇವೆ, ಸಣ್ಣ ಅಪಚಾರವಾಗಲೂ ಎಲ್ಲೂ ಅವಕಾಶ ಕೊಟ್ಟಿಲ್ಲ. ಕೆಲವು ವಿಚಾರಗಳಲ್ಲಿ ವೈಯಕ್ತಿಕವಾಗಿ ನನ್ನ ಅನುಭವಕ್ಕೆ ತಕ್ಕಂತೆ ನೋವುಗಳು ಇವೆ, ಅದನ್ನು ಹೇಳಿಕೊಳ್ಳಲು ಸಾಧ್ಯವೇ ಎಂದು ಹೇಳುವ ಮೂಲಕ ತಮ್ಮಲ್ಲಿರುವ ಅಸಮಾಧಾನದ ಬಗ್ಗೆ ಸುಳಿವು ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು