ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ
Team Udayavani, May 20, 2022, 8:33 AM IST
ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
MUST WATCH
ಹೊಸ ಸೇರ್ಪಡೆ
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್